LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಚೀತಾ" ಚಿತ್ರದ ಚಿತ್ರೀಕರಣ

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಚೀತಾ" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ.

ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು "ಚೀತಾ" ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ನಾನು ಮೊದಲು ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದು ಪ್ರಜ್ವಲ್ ಅವರ ಜೊತೆ.

ಈಗ ನನ್ನ ಮೊದಲ ನಿರ್ದೇಶನದ ಚಿತ್ರಕ್ಕೂ ಅವರೆ ನಾಯಕ. "ಚೀತಾ", ಮಾರ್ಕೆಟ್ ನಲ್ಲೇ ನಡೆಯುವ ಕಥೆ. ಮಾರುಕಟ್ಟೆಯಲ್ಲೇ ಹುಟ್ಟಿಬೆಳೆದ ಹುಡುಗನೊಬ್ಬನ ಕಥೆಯೂ ಹೌದು. ಪ್ರಜ್ವಲ್ ಅವರದು ಈ ಚಿತ್ರದಲ್ಲಿ ಮಾರುಕಟ್ಟೆಯಲ್ಲಿ ನಡೆಯುವ ಅವ್ಯವಹಾರಗಳ ವಿರುದ್ದ ಹೋರಾಟ ಮಾಡುವ ಹೋರಾಟಗಾರನ ಪಾತ್ರ.

ಅಲ್ಲೇ ಬೆಳೆದು ಅಲ್ಲೇ ಇರುವ ಆ ಹುಡುಗನ ಕಂಡರೆ ಅಲ್ಲಿನ ಜನರಿಗೆ ಅಚ್ಚುಮೆಚ್ಚು. ಈಗಿನ ಜನರಿಗೆ ಬೇಕಾಗುವ ಎಲ್ಲಾ ರೀತಿಯ ಅಂಶಗಳು ಈ ಚಿತ್ರದಲ್ಲಿದೆ. ಕಲಾ ನಿರ್ದೇಶಕ ಶಿವಕುಮಾರ್ ಬೃಹತ್ ಮಾರುಕಟ್ಟೆ ಸೆಟ್ ಹಾಕಿದ್ದಾರೆ. ಸುಮಾರು ಎರಡು ತಿಂಗಳ ಕಾಲ ಇನ್ನೂರಕ್ಕೂ ಅಧಿಕ ಜನರ ಪರಿಶ್ರಮದಲ್ಲಿ ಈ ಅದ್ದೂರಿ ಸೆಟ್ ನಿರ್ಮಾಣವಾಗಿದೆ. ಹೆಚ್ಚಿನ ಚಿತ್ರೀಕರಣ ಇದೇ ಜಾಗದಲ್ಲಿ ನಡೆಯುತ್ತದೆ. ಒಂದು ವಾರಗಳ ಕಾಲ ಮಾತ್ರ ಮೈಸೂರಿನಲ್ಲಿ ಚಿತ್ರೀಕರಣ ಮಾಡಲಿದ್ದೇವೆ.

ಹಿರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ಅವರು ನಮ್ಮ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮೇಘ ಶೆಟ್ಟಿ ನಟಿಸುತ್ತಿದ್ದಾರೆ. ಗುರು ಜಗ್ಗೇಶ್, ಶೃತಿ ಹರಿಹರನ್, ರಂಗಾಯಣ ರಘು, ಶಿವರಾಜ್ ಕೆ ಆರ್ ಪೇಟೆ, ಸಿದ್ಲಿಂಗು ಶ್ರೀಧರ್, ಟೆನ್ನಿಸ್ ಕೃಷ್ಣ, " ವಾಮನ" ಚಿತ್ರದ ನಿರ್ದೇಶಕ ಶಂಕರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ದಿನ ನಿತ್ಯ ಸುಮಾರು 150 ರಿಂದ 200 ಜನ ಚಿತ್ರೀಕರಣದಲ್ಲಿ ಭಾಗಿಯಾಗಿರುತ್ತೇವೆ. ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡುತ್ತಿರುವ ನಿರ್ಮಾಪಕಿ ಪ್ರತಿಭಾ ನರೇಶ್ ಅವರಿಗೆ ಹಾಗೂ ಸಹಕಾರ ನೀಡುತ್ತಿರುವ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು