LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಹಾಸನದ ಬಳಿ ಅಪಘಾತ: ಮೃತರ ಮಕ್ಕಳಿಗೆ ಆರ್ಥಿಕ ನೆರವು

ವಿಜಯಪುರ: ಹೋಬಳಿಯ ವೆಂಕಟಗಿರಿಕೋಟೆ ಚನ್ನಕೇಶವಸ್ವಾಮಿ ಕಲ್ಯಾಣಮಂಟಪದಲ್ಲಿ ಬುಧವಾರ ಕರ್ನಾಟಕ ಮಾದಿಗ ದಂಡೋರ ಸಂಘಟನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಂದ ಹಾಸನದ ಬಳಿ ಅಪಘಾತದಲ್ಲಿ ಮೃತಪಟ್ಟಿರುವವರ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಕಾರ್ಯಕ್ರಮ ನಡೆಸಿದರು.

ತಾಲ್ಲೂಕಿನ ವಿವಿಧ ಮಾದಿಗ ಸಂಘಟನೆಗಳ ಮುಖಂಡರು, ರಾಜಕೀಯ ಮುಖಂಡರುಗಳು ಈ ಸಭೆಯಲ್ಲಿ ಭಾಗವಹಿಸಿ, ಅಪಘಾತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಧೈರ್ಯ ತುಂಬಿ, ಭವಿಷ್ಯದಲ್ಲಿ ಜೊತೆಯಾಗಿದ್ದು, ನಿಮ್ಮ ನೆರವಿಗೆ ನಾವು ಬರುತ್ತೇವೆ. ನೀವು ಅನಾಥರಲ್ಲ, ನಾವೆಲ್ಲರೂ ಇದ್ದೇವೆ. ಧೈರ್ಯವಾಗಿ ಶಿಕ್ಷಣ ಮುಂದುವರೆಸಿ ಎಂದು ಸಾಂತ್ವನ ಹೇಳಿದರು.

ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಅಪಘಾತದಂತಹ ಘಟನೆ ಸಂಭವಿಸಿರುವುದು ದುರಂತ, ಆದರೂ ಸಮುದಾಯದವರು ಮಾತ್ರವಲ್ಲದೆ ತಾಲ್ಲೂಕಿನಲ್ಲಿ ಯಾವುದೇ ಸಮುದಾಯಗಳು ಸಂಕಷ್ಟಕ್ಕೆ ಸಿಲುಕಿದಾಗ ಸಹಕಾರ ನೀಡುವ ಮೂಲಕ ಧೈರ್ಯ ತುಂಬಿಸಿದಾಗ, ಅಂತಹವರು ಚೈತನ್ಯ ಪಡೆದುಕೊಳ್ಳುತ್ತಾರೆ. ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಅನುಕಂಪಗಳಿಗಿಂತ ಅವಕಾಶಗಳನ್ನು ಒದಗಿಸಿಕೊಡುವ ಕೆಲಸವಾಗಲಿ ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿ, 50 ಸಾವಿರ ಚೆಕ್ಕನ್ನು ನೀಡಿದರು.

ದೇವನಹಳ್ಳಿ ಮಾಜಿ ಪುರಸಭೆ ಅಧ್ಯಕ್ಷ ಎಂ.ನಾರಾಯಣಸ್ವಾಮಿ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲತ್ತುಗಳನ್ನು ಅವರಿಗೆ ತಲುಪಿಸುವುದರ ಜೊತೆಗೆ, ಅವರ ಬಗ್ಗೆ ನಿಗಾವಹಿಸಬೇಕು. ಸಚಿವರೊಂದಿಗೆ ಚರ್ಚೆ ನಡೆಸಿ, ಸರ್ಕಾರದಿಂದ ಹೆಚ್ಚಿನ ನೆರವು ಕೊಡಿಸಲು ಪ್ರಯತ್ನ ಮಾಡಲಾಗುತ್ತದೆ ಎಂದರು.

ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಜಗದೀಶ್ ಮಾತನಾಡಿ, ಮೃತರ ಕುಟುಂಬಗಳಿಗೆ ಸಚಿವರು ಬಂದರೆ, ಜಿಲ್ಲಾಡಳಿತ ಬರುತ್ತದೆ. ಸ್ಥಳದಲ್ಲೆ ಸರ್ಕಾರದಿಂದ ಸಿಗುವಂತಹ ಸೌಲತ್ತುಗಳ ಬಗ್ಗೆ ತೀರ್ಮಾನ ಮಾಡಬಹುದು. ಮೃತರ ಕುಟುಂಬದವರಿಗೆ ತಲಾ 2 ಎಕರೆ ಭೂಮಿ ಮಂಜೂರು ಮಾಡಿಕೊಡುವಂತೆ ಸಚಿವರಲ್ಲಿ ಮನವಿ ಮಾಡಬೇಕು. ವೈಯಕ್ತಿಕವಾಗಿ 25 ಸಾವಿರ ಕೊಡುವುದಾಗಿ ಭರವಸೆ ನೀಡಿದರು.

ಮುಖಂಡರಾದ ಚೊಕ್ಕನಹಳ್ಳಿ ಚಂದ್ರಪ್ಪ, ಮಾರಪ್ಪ, ಮುದುಗುರ್ಕಿ ಮೂರ್ತಿ, ವಕೀಲ ಎಂ.ಎಂ.ಶ್ರೀನಿವಾಸ್, ಕೃಷ್ಣಮೂರ್ತಿ, ವೆಂಕಟೇಶ್ ಪ್ರಭು, ರಾಘವ, ವೇಣುಗೋಪಾಲ್, ಚಂದ್ರಶೇಖರ್, ಪ್ರಕಾಶ್, ಮುನಿರಾಜು, ತಿರುಮಲೇಶ್, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು