LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬೇಕಾಬಿಟ್ಟಿ ತ್ಯಾಜ್ಯ ನಿರ್ವಹಣೆ ಹಿನ್ನೆಲೆಯಲ್ಲಿ ನಗರಸಭಾ ಆಯುಕ್ತರಿಂದ ದಂಡ

ಕನಕಪುರ: ನಗರದ ಎಂ.ಜಿ. ರಸ್ತೆಯಲ್ಲಿ ಗಾರ್ಮೆಂಟ್ಸ್ ಅಂಗಡಿ ಮಾಲೀಕ ಚಿಂದಿಬಟ್ಟೆಗಳ ಮೂಟೆಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿರುವುದನ್ನು ನೋಡಿದ ನಗರಸಭಾ ಆಯುಕ್ತ ಎಂ.ಎಸ್.ಮಹಾದೇವ ಅಂಗಡಿಗೆ ಬೀಗವನ್ನು ಹಾಕಿಸಿ ಅಂಗಡಿ ಮಾಲೀಕನಿಗೆ ಐದು ಸಾವಿರ ರೂಪಾಯಿ ದಂಡ ವಸೂಲಿ ಮಾಡಿದ ಘಟನೆ ನಡೆದಿದೆ.

ಗುರುವಾರ ಬೆಳಗ್ಗೆ ಗಾರ್ಮೆಂಟ್ಸ್ ಮಾಲೀಕ ಚಿಂದಿ ಬಟ್ಟೆ ಗಳ ಮೂಟೆಗಳನ್ನು ನಗರಸಭೆಯ ಕಸ ವಿಲೇವಾರಿ ಮಾಡುವ ವಾಹನಗಳಿಗೆ ನೀಡಿದೆ ಮನಸೋ ಇಚ್ಛೆ ರಸ್ತೆ ಬದಿಯಲ್ಲಿ ಸುರಿಯುತ್ತಿರುವ ದೂರು ಬಂದ ಹಿನ್ನೆಲೆಯಲ್ಲಿ ಸುರಿದ ಕಸವನ್ನು ಆತನ ಅಂಗಡಿ ಮುಂದೆ ಸುರಿದು, ಅಂಗಡಿಗೆ ಬೀಗ ಹಾಕಿ 5000 ರೂಪಾಯಿ ದಂಡದ ಹಣ ವನ್ನು ಪಾವತಿಸಿಕೊಂಡು ಇನ್ನು ಮುಂದೆ ನಗರಸಭೆಯ ವಾಹನಗಳಿಗೇ ಕಸ ನೀಡದೆ ಸಾರ್ವಜನಿಕ ಸ್ಥಳದಲ್ಲಿ ಬೀಸಾಡಿದರೆ ರೂ.50,000 ರವರೆಗೆ ದಂಡ ವಿಧಿಸಿ ಪ್ರಕರಣ ದಾಖಲಿಸಲಾಗುವುದೆಂದು ಏಚ್ಚರಿಕೆ ನೀಡಿದರು.

ನಗರಸಭೆ ವ್ಯಾಪ್ತಿಯ ಸಾರ್ವಜನಿಕರು,ಅಂಗಡಿಗಳ ಮಾಲೀಕರು ಮತ್ತು ಉದ್ದಿಮೆದಾರರು ತ್ಯಾಜ್ಯವಸ್ತುವನ್ನು ನಗರಸಭೆಯ ಕಸ ಸಂಗ್ರಹಿಸುವ ವಾಹನಕ್ಕೆ ನೀಡಬೇಕು, ಎಲ್ಲೆಂದರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀಸಾಡಬಾರ ದೆಂದು ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ರಾಘಯ್ಯ ಹಾಗೂ ನಗರಸಭಾ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು