LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ

ಚಾಮರಾಜನಗರ: ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡಿನ ಬೆಂಕಿಗೆ ಅರಣ್ಯ ಸಂಪತ್ತು ನಾಶವಾಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ಡ್ರೋನ್ ಸೌಲಭ್ಯ ಇರುವ ಕಡೆ ಕ್ಯಾಮರಾ ಮೂಲಕ ನಿಗಾ ಇಡಬೇಕು, ಗಸ್ತು ಹೆಚ್ಚಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಬ್ಬಂದಿ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಕಾಡಿನಲ್ಲಿ ಮೇವು ಮತ್ತು ಕುಡಿಯುವ ನೀರಿನ ಕೊರತೆ ಆಗದಂತೆಯೂ ಎಚ್ಚರ ವಹಿಸಲು, ಜಲಗುಂಡಿಗಳಿಗೆ ಸೌರ ಪಂಪ್ ಗಳ ಮೂಲಕ ಕೊಳವೆ ಬಾವಿಯಿಂದ ನೀರು ಹರಿಸಲು ಸಚಿವರು ಸೂಚಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಡ್ರೋನ್ ಕ್ಯಾಮರಾ ನಿಗಾಕ್ಕೆ ಸೂಚನೆ: ಪ್ರತಿ ವರ್ಷ ಶಿವರಾತ್ರಿ, ಯುಗಾದಿ ಮತ್ತು ದೀಪಾವಳಿಯ ಸಂದರ್ಭದಲ್ಲಿ ಮಾದಪ್ಪನ ಭಕ್ತರು ಅರಣ್ಯ ಮಾರ್ಗವಾಗಿ ಪಾದಯಾತ್ರೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಬರುವುದು ಹಿಂದಿನಿAದ ನಡೆದುಕೊಂಡು ಬಂದಿದೆ. ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಬರುವ ಮಾರ್ಗದಲ್ಲಿ ಡ್ರೋನ್ ಕ್ಯಾಮರಾ ಅಳವಡಿಸಿ ಸತತ ನಿಗಾ ಇಡುವಂತೆ ಈಶ್ವರ ಖಂಡ್ರೆ ಅವರು ಸೂಚಿಸಿದರು.
ಕಾಲುದಾರಿ, ಮೆಟ್ಟಿಲು ಇರುವ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ, ಹೋಂಗಾರ್ಡ್ಸ್ ಮತ್ತು ಸ್ಥಳೀಯ ಸಿಬ್ಬಂದಿಯ ತಂಡ ರಚಿಸಿ ಭಕ್ತರಿಗೆ ನೆರವಾಗುವ ಅಗತ್ಯವಿದ್ದು, ಇದಕ್ಕೆ ತಗಲುವ ವೆಚ್ಚವನ್ನು ಭರಿಸುವಂತೆ ಮಲೆ ಮಹದೇಶ್ವರಸ್ವಾಮಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಪತ್ರ ಬರೆಯುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು ಕಾವೇರಿ ನದಿ ದಾಟಿ, ಹನೂರು ತಾಲೂಕಿನ ಬಸವನಕಣಕ್ಕೆ ಬಂದು ಅಲ್ಲಿಂದ ಕಾಡಿನಲ್ಲಿಯೇ ನಡೆದುಕೊಂಡು ಶಾಗ್ಯ, ಡಿಎಂ ಸಮುದ್ರ, ಎಲ್ಲೆಮಾಳ, ಮಲ್ಲಯ್ಯನಪುರ, ಕೌದಳ್ಳಿ, ವಡಕೆಹಳ್ಳ, ಕೋಣನಕೆರೆ, ತಾಳುಬೆಟ್ಟ ಮಾರ್ಗವಾಗಿ ಬೆಟ್ಟಕ್ಕೆ ಬರುತ್ತಾರೆ ಎನ್ನಲಾಗಿದೆ. ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಪಾದಯಾತ್ರೆ ಅಪಾಯಕಾರಿಯಾಗಿದೆ. ಹೀಗಾಗಿ ಭಕ್ತರ ಭಾವನೆಗೆ ಧಕ್ಕೆಯಾಗದಂತೆ ಅವರ ಮನವೊಲಿಸಲು ಸಚಿವರು ಸೂಚಿಸಿದರು.
ರಾತ್ರಿಯ ವೇಳೆ ಕಾಡಿನ ಅಂಚಿನಲ್ಲಿ, ಕಾಡಿನೊಳಗಿರುವ ವಸತಿ ಪ್ರದೇಶದಲ್ಲಿ ಮಲಗುವುದೂ ಅಪಾಯಕಾರಿಯಾಗಿದೆ. ಕಳೆದ ಬುಧವಾರ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬ ಯುವಕ ಚಿರತೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಹೀಗಾಗಿ ಬಸ್, ಕಾರುಗಳಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆಯುವಂತೆ ಭಕ್ತರ ಮನವೊಲಿಸಲು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಒಳಗೊಂಡ ತಂಡ ರಚಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದರು.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುA ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು