LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಗಾನವಿ-ಸೂರಜ್ ಆತ್ಮಹತ್ಯೆ ಪ್ರಕರಣ ಗಾನವಿ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ರಾಜ್ಯಾದ್ಯಂತ ಸುದ್ದಿಯಾಗಿದ್ದ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬAಧ ಆಕೆಯ ಕುಟುಂಬಸ್ಥರ ವಿರುದ್ಧವೇ ಈಗ ಎಫ್‌ಐಆರ್ ದಾಖಲಾಗಿದೆ. ಸೂರಜ್ ಅತ್ತಿಗೆ ನೀಡಿದ ದೂರಿನ ಮೇರೆಗೆ ೯ ಮಂದಿ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಪತ್ನಿ ಗಾನವಿ ಕುಟುಂಬಸ್ಥರ ಆರೋಪಗಳ ಹಿನ್ನೆಲೆ ಪತಿ ಸೂರಜ್ ಕೂಡ ಸೂಸೈಡ್ ಮಾಡಿಕೊಂಡಿದ್ದ. ಹೀಗಾಗಿ ಆತನ ಸಾವಿಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ದೂರು ನೀಡಲಾಗಿದೆ.
ಸೂರಜ್ ತಾಯಿ ಜಯಂತಿ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ಜೊತೆಗೆ ಹನಿಮೂನ್‌ಗೆ ತೆರಳಿದ್ದ ಸೂರಜ್ ಮತ್ತು ಗಾನವಿ ದಂಪತಿ ಶ್ರೀಲಂಕಾದಿAದ ಅರ್ಧಕ್ಕೆ ಹಿಂತಿರುಗಿದ್ದ ಬಗ್ಗೆಯೂ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ಮಾನಹಾನಿಕಾರ ಆರೋಪಗಳಿಂದ ಮನನೊಂದು ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸೂರಜ್ ಸಹೋದರ ಸಂಜಯ್ ಪತ್ನಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಗಾನವಿ ಕುಟುಂಬಸ್ಥರಾದ ರಾಧಾ, ಬಾಬುಗೌಡ, ಕಾರ್ತಿಕ್, ಮಹದೇವ, ಗಗನ್, ಶಶಿಕುಮಾರ್, ರುಕ್ಮಿಣಿ, ಅಭಿಲಾಷ್, ಅಭಿಷೇಕ್ ವಿರುದ್ಧ ಕೇಸ್ ದಾಖಲಾಗಿದೆ.
ಹನಿಮೂನ್‌ಗೆಂದು ಶ್ರೀಲಂಕಾಕ್ಕೆ ತೆರಳಿದ್ದ ವೇಳೆ ಗಾನವಿ ಲವ್ ವಿಚಾರ ಸೂರಜ್‌ಗೆ ಗೊತ್ತಾಗಿದೆ. ಹರ್ಷ ಎಂಬಾತನನ್ನ ಪ್ರೀತಿಸುತ್ತಿದ್ದು, ಅವನನ್ನೆ ಮದುವೆಯಾಗುತ್ತೇನೆ ಎಂದು ಗಾನವಿ ಹೇಳಿದ್ದಳಂತೆ. ಈ ವಿಚಾರ ಕೇಳಿ ಸೂರಜ್ ದಿಗ್ಭಾçಂತನಾಗಿದ್ದ. ಆದರೆ ಆ ವಿಷಯ ಮುಚ್ಚಿಟ್ಟು ಸೂರಜ್ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಗಾನವಿ ಸಹೋದರರು ಸೂರಜ್‌ಗೆ ಜೀವ ಬೆದರಿಕೆ ಕೂಡ ಹಾಕಲಾಗಿತ್ತು. ಈ ಎಲ್ಲಾ ವಿಚಾರಗಳಿಂದ ಮನನೊಂದು ಸೂರಜ್ ಪ್ರಾಣ ಕಳೆದುಕೊಂಡಿದ್ದರೆ, ಅವರ ತಾಯಿ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೀಗಾಗಿ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಲಾದ ದೂರಲ್ಲಿ ಉಲ್ಲೇಖಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು