LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಉತ್ತಮ ಮಳೆ ಆದರೂ, ಸಮರ್ಪಕವಾಗಿ ನೀರಿಲ್ಲ

ರಾಮನಗರ: ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದರೂ ಇನ್ನು ಸಮರ್ಪಕವಾಗಿ ನೀರಿನ ಭಾಗ್ಯ ಇಲ್ಲದೆ ಜನರು ತತ್ತರಿಸುವಂತಾಗಿದೆ.ಐಜೂರು ಬಡಾವಣೆ ಮಹಿಳೆಯರು ಶುಕ್ರವಾರ ಜಲ ಮಂಡಳಿ ಬಳಿ ಜಮಾವಣೆಗೊಂಡು ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡದ ಜಲ ಮಂಡಳಿ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಮಹಿಳೆಯರು ಒಂದು ಕಡೆ ಜಲ ಮಂಡಳಿ ಅಧಿಕಾರಿಗಳ ಬೇಜವಾಬ್ದಾರಿ ಇನ್ನೊಂದು ಕಡೆ ಬಡಾವಣೆಯ ಮುಖಂಡರನ್ನು ಕುಡಿಯುವ ನೀರು ಕೇಳಿದರೆ ನೀವು ಬಿಜೆಪಿಗೆ ಮತ ನೀಡಿದ್ದೀರಾ, ಅವರನ್ನೇ ನೀರು ಕೇಳಿ ಎನ್ನುತ್ತಿದ್ದಾರೆ, ಕಳೆದ ಎರಡು ವಾರಗಳಿಂದ ನಗರದ ಕೆಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಜಲ ಮಂಡಳಿ ಹಾಗೂ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸಿದರು.

ಐಜೂರು ಭಾಗಕ್ಕೆ ಕಳೆದ 15 ದಿನಗಳಿಂದ ನೀರಿನ ಪೂರೈಕೆ ಇಲ್ಲ. ಯಾವ ಕಾರಣಕ್ಕೆ ಪೂರೈಕೆ ಮಾಡುತ್ತಿಲ್ಲ. ಪ್ರತಿ ಸಲ ಒಂದಿಲ್ಲಾ ಒಂದು ಕಾರಣ ಹೇಳಿ ದಿನ ದೂಡುತ್ತಿದ್ದಾರೆ. ಇದರಿಂದ ಬಹಳ ತೊಂದರೆಯಾಗಿದೆ ಎಂದು ಮಹಿಳೆಯರು ಅಧಿಕಾರಿಗಳ ವಿರುದ್ಧ ಹರಿಹಾಯ್ದರುಪ್ರಭಾವಿಗಳ ಬೀದಿಗಳಿಗೆ 2ದಿನಕೊಮ್ಮೆ ಟ್ಯಾಂಕರ್ ನೀರು ಬಿಟ್ಟರೆ, ನಮ್ಮ ಬೀದಿಗೆ 15 ದಿನಕ್ಕೊಮ್ಮೆ ಟ್ಯಾಂಕರ್ ನೀರು ನೀಡುತ್ತಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಅಧಿಕಾರಿಗಳು ಕತೆ ಒಂದ್ ಆದರೆ ಇತ್ತ ವಾರ್ಡ್ ಮುಖಂಡರ ಕಥೆನೆ ಬೇರೆ ನೀರು ಕೇಳಿದ್ರೆ ಬಿಜೆಪಿ ಅವರನ್ನ ಕೇಳಿ ಅನ್ನುತ್ತಾರೆ ನೋಡಿ ಕುಡಿಯುವ ನೀರು ಕೇಳಿದ್ರೆ ನೀವು ವೋಟ್ ಹಾಕಿರೋದು ಬಿಜೆಪಿಗೆ ನೀವು ಬಿಜೆಪಿ ಅವರನ್ನೇ ನೀರು ಕೇಳಿ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿರುವ ಮಾತಿಗೆ ಮಹಿಳೆಯರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಲಿ ಮಾಡುವ ಜನ 500 ರೂ ಕೊಟ್ಟು ಟ್ಯಾಂಕರ್ ಅಲ್ಲಿ ನೀರು ತರುಸ್ಕೊಳ್ಳೋಕೆ ಆಗುತ್ತಾ, ಜನವರಿಯಿಂದಲೂ ಇದೇ ಸಮಸ್ಯೆ ಆಗಿದೆ, ನಮಗೆ ನೀರಿಗೆ ತುಂಬಾ ತೊಂದರೆ ಆಗ್ತಿದೆ ಎಂದು ಅಳಲು ತೋಡಿ ಕೊಂಡಿದ್ದಾರೆ. ಸಂಬಂದಪಟ್ಟವರು ಇತ್ತ ಗಮನ ಹರಿಸಿ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ನೀರು ಒದಗಿಸಲಿ ಎಂಬುದೇ ನಮ್ಮ ಆಶಯವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು