LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿಕೆ ಭೇಟಿಗೆ ಗೋಪಾಲಯ್ಯ ಸ್ಪಷ್ಟನೆ

ಬೆಂಗಳೂರು: ನನ್ನ ಮಗನ ಮದುವೆಯ ನಿಶ್ಚಿತಾರ್ಥ ಇದೆ ತಿಂಗಳು 26ರಂದು ನಡೆಯಲಿದ್ದು, ಈ ಶುಭ ಕಾರ್ಯಕ್ಕೆ ಆಮಂತ್ರಣ ಪತ್ರಿಕೆಯನ್ನು ನೀಡಲು ಇಂದು ರಾಜ್ಯದ ಉಪ ಮುಖ್ಯ ಮಂತ್ರಿ ಗಳಾದ ಡಿಕೆ ಶಿವಕುಮಾರ್ ಅವರ ಮನೆಗೆ ಹೋಗಿ ಭೇಟಿ ಮಾಡಿ ನಮ್ಮ ಮನೆಯ ಕಾರ್ಯಕ್ರಮಕ್ಕೆ ಬರಲು ಆಹ್ವಾನ ನೀಡಲು ಹೋಗಿದ್ದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ. ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿರುವ ಅವರು,ಇದೊಂದು ಖಾಸಗಿ ಭೇಟಿಯಾಗಿದ್ದು, ಇದರಲ್ಲಿ ಯಾವುದೇ ರೀತಿ
ರಾಜಕೀಯ ಮಾತುಕತೆ ನಡೆಸಿಲ್ಲ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ, ಸದಾನಂದ ಗೌಡರು, ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್ ಮಾಜಿ ಸಚಿವರಾದ ಸಿ ಎನ್ ಅಶ್ವಥ್ ನಾರಾಯಣ, ಸಂಸದ ಡಿಕೆ ಸುರೇಶ್, ಮಾಜಿ ಸಚಿವ ಸುನಿಲ್ ಕುಮಾರ್ಸೇರಿದಂತೆ ಹಲವು ಶಾಸಕರು ಮತ್ತು ಎಲ್ಲ ಪಕ್ಷದ ನಾಯಕರನ್ನು ಭೇಟಿನೀಡಿ ನಿಶ್ಚಿತಾರ್ಥ ಆಮಂತ್ರಣ ಪತ್ರಿಕೆಯನ್ನು ನೀಡಿದ್ದೇನೆ.

ಆದ್ರೆ ಬೆಳಗ್ಗೆಯಿಂದಲೇ ನಮ್ಮ ದೃಶ್ಯ ಮಾಧ್ಯಮಗಳು ನಮ್ಮ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಭೇಟಿಗೆ ರಾಜಕೀಯ ಕಲ್ಪಿಸಿರುವುದು ಸತ್ಯಕ್ಕೆ ದೂರವಾದದ್ದು. ನಾನು ಭಾರತೀಯ ಜನತಾ ಪಕ್ಷದ ಶಾಸಕನಾಗಿ ಆಯ್ಕೆಯಾಗಿದ್ದು, ನಾನು ಬಿಜೆಪಿ ಪಕ್ಷದಲ್ಲೇ ಇದ್ದೀನಿ ನಾನು ಯಾವುದೇ ರೀತಿ ಪಕ್ಷ ವಿರೋಧಿ ಚಟುವಟಿಕೆ ಮಾಡಲ್ಲ. ಹೀಗಾಗಿ ಮಾಧ್ಯಮಗಳಿಗೆ ನನ್ನ ಬಗ್ಗೆ ತೋರಿಸುತ್ತಿರುವ ರೀತಿ ಯಾವುದೇ ಚರ್ಚೆ ನಡೆಸಿಲ್ಲ. ದಯವಿಟ್ಟು ಮಾಧ್ಯಮಗಳು ನನ್ನ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಭೇಟಿಗೆ ಯಾವುದೇ ಬೇರೆ ರೀತಿ ಅರ್ಥ ಕಲ್ಪಿಸುವುದು ಬೇಡ ಎಂದು ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು