LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸರ್ಕಾರಿ ನೌಕರರು ಮತ್ತಷ್ಟು ಸಂಘಟಿತರಾಗಬೇಕು: ಸಿಎಲ್ ಷಡಕ್ಷರಿ

ದೇವನಹಳ್ಳಿ: ಲೋಕಸಭಾ ಚುನಾವಣೆಗೆ ಮಾರ್ಚ್ 2ನೇ ವಾರದಲ್ಲಿ ಅಧಿಸೂಚನೆ ಬೀಳಬಹುದು ರಾಜ್ಯ ಸರ್ಕಾರದ ಎಲ್ಲಾ ಯೋಜನೆ ಗಳನ್ನು ಜನಸಾಮಾನ್ಯರಿಗೆ ತಲುಪಿಸುವಂತೆ ಮಾಡುವ ಕಾರ್ಯವನ್ನು ಸರ್ಕಾರಿ ನೌಕರರು ಮಾಡುತ್ತಿದ್ದು ಮತ್ತಷ್ಟು ಸಂಘಟಿತರಾಗಬೇಕು ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಲ್ ಷಡಕ್ಷರಿ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ. ಜಿಲ್ಲಾ ಪಂಚಾಯಿತಿ. ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದರು. ರಾಜ್ಯದಲ್ಲಿ 6 ಲಕ್ಷ ನೌಕರರ ಹಿತ ಕಾಪಾಡಲು ಸಂಘ ನಿರಂತರವಾಗಿ ಶ್ರಮಿಸುತ್ತಿದ್ದು ಸಾಕಷ್ಟು ಬೇಡಿಕೆ ಈಗಾಗಲೇ ಈಡೇರಿಸಿರುವುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು.

ರಾಜ್ಯದ 31 ಜಿಲ್ಲೆಗಳಲ್ಲಿರುವ ನೂರೆಂಬತ್ತಕ್ಕೂ ಹೆಚ್ಚಿನ ಅದೀನ ಸಂಘಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಪ್ರತಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅಲ್ಲಿನ ನೌಕರರ ಸಮಸ್ಯೆ ಆಲಿಸಿ ಸರ್ಕಾರದ ಹಂತದಲ್ಲಿ ಚರ್ಚಿಸಿ ಪರಿಹರಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮ ವಹಿಸಲಾಗುತ್ತಿದೆ ಎಂದರು.

ಸಂಘದಲ್ಲಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ ಸರ್ಕಾರಿ ನೌಕರರಿಗೆ ಅತಿ ಶೀಘ್ರದಲ್ಲಿ 7ನೇ ವೇತನ ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಗಳ ಸುದೀರ್ಘ ಚರ್ಚೆ ಮಾಡಲಾಗಿದೆ ಅವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಸುಮಾರು 150ಕ್ಕೂ ಹೆಚ್ಚು ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಅಭಿನಂದನಾ ಪ್ರಮಾಣ ಪತ್ರ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.ಜಿಲ್ಲಾ ಪಂಚಾಯತಿ ಉಪ ನಿರ್ದೇಶಕ ಟಿ .ಕೆ ರಮೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಚ್ ಸಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷ ಬಸವರಾಜ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಕಾರ್ಯದರ್ಶಿ ಮಲ್ಲಿಕಾರ್ಜುನ, ಉಪ ತಹಸೀಲ್ದಾರ್ ಪಿ.ಗಂಗಾಧರಪ್ಪ, ಎಂ ಎಸ್ ರಾಜಶೇಖರ್, ಹನುಮಂತರಾಜ್, ವಿವಿಧ ಇಲಾಖೆಗಳ ಸರಕಾರಿ ನೌಕರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು