LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರೈತರ ಸಾಧನೆಗೆ ಪ್ರೋತ್ಸಾಹ ಅಗತ್ಯ: ಹರೀಶ್ ಗೌಡ ಹೇಳಿಕೆ

ದೊಡ್ಡಬಳ್ಳಾಪುರ: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇಂದಿಗೂ ರೈತರ ಬದುಕು ಹಸನಾಗಿಲ್ಲ. ರೈತರು ಬೆಳೆದಿರುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗದೇ ಹೋರಾಟದ ಹಾದಿ ತುಳಿಯಬೇಕಾದ ಸನ್ನಿವೇಶ ಸೃಷ್ಟಿಯಾಗಿರುವುದು ಬೇಸರ ಸಂಗತಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ಗೌಡ ಹೇಳಿದರು.

ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನ ಸಭಾಂಗಣದಲ್ಲಿ ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳಿಂದಾಗಿ ಕೃಷಿಕರಿಗೆ ಅನ್ಯಾಯವಾಗಿದೆ.

ಯಾವುದೇ ಪಕ್ಷಗಳನ್ನು ದೂರುವುದಿಲ್ಲ. ಆದರೆ ಅನೇಕ ವರ್ಷಗಳಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳು ರೈತರ ಪರವಾಗಿ ಕಾನೂನು ತರಲು ವಿಫಲವಾಗಿವೆ. ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ, ಕೈಗಾರೀಕರಣದಿಂದ ಕೃಷಿಕರ ಸಂಖ್ಯೆ ಕಡಿಮೆ ಆಗಿದೆ. ರೈತರ ಅಳಿದುಳಿದ ಫಲವತ್ತಾದ ಭೂಮಿಯನ್ನು ಕೈಗಾರಿಕೆ ಸ್ಥಾಪನೆ ಹೆಸರಲ್ಲಿ ಕಸಿದುಕೊಂಡರೆ ರೈತರ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಂತಾಗುತ್ತದೆ.

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆಐಎಡಿಬಿ ಭೂಸ್ವಾಧೀನದ ವಿರುದ್ಧ ರೈತರು 35 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ರೈತರ ಭೂಮಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿಲ್ಲ. ಸಾಸಲು ಹೋಬಳಿಯಲ್ಲಿ ರೈತರೊಬ್ಬರ ರೇಷ್ಮೆ ಮನೆಗೆ ಬೆಂಕಿ ತಗುಲಿ ಸುಟ್ಟು ಹೋಗಿದೆ. ಆ ರೈತನಿಗೆ ಸರಕಾರ ಸ್ಪಂದಿಸಿಲ್ಲ ಎಂದು ದೂರಿದರು.

ಬೆಂಗಳೂರು ಗ್ರಾಮಾಂತರ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಡಾ. ಕೆ.ಎನ್. ಅನುರಾಧ ಮಾತನಾಡಿ, ರೈತರ ಕೃಷಿ ಸಾಧನೆ, ಶ್ರಮದ ಮುಂದೆ ನಮ್ಮಸನ್ಮಾನಗಳೆಲ್ಲ ಚಿಕ್ಕದು. ಇಂದು ಬರ ಸೇರಿದಂತೆ ನಾನಾ ಕಾರಣಗಳಿಂದ ರೈತರು ಕೃಷಿ ಕಾರ್ಯದಿಂದ ದೂರು ಉಳಿಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಕೂಡ ಸಾಕಷ್ಟು ಶ್ರಮವಹಿಸಿ ತಮ್ಮ ತೋಟ ಹಾಗೂ ಹೊಲದಲ್ಲಿ ದುಡಿದು ಕೃಷಿಯಲ್ಲಿ ಸಾಧನೆ ಮಾಡಿರುವುದು ಹೆಮ್ಮೆ ವಿಚಾರ ಎಂದರು.

ಕೃಷಿ ಇಲಾಖೆ ಉಪನಿರ್ದೇಶಕ ಗಾಯತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ್, ರೇಷ್ಮೆ ಇಲಾಖೆ ಉಪನಿರ್ದೇಶಕ ಪ್ರಭಾಕರ್ ರೈತರಿಗೆ ಹಲವಾರು ರೇಷ್ಮೆ ಇಲಾಖೆಯಲ್ಲಿ ದೊರೆಯುವ ಇಲಾಖೆ ಸೌಲಭ್ಯಗಳ ಬಗ್ಗೆ ವಿವರಿಸಿದರು. ಮಾರುಕಟ್ಟೆ, ಪಾರದರ್ಶಕ ಧಾರಣೆ ತೂಕ, ಕಳೆದ ಐದಾರು ವರ್ಷಗಳಿಂದ ಮಾರುಕಟ್ಟೆ ಸುಧಾರಣೆ ಆಗಿದೆ. ಚಳಿ ಇರುವ ಪ್ರದೇಶಗಳಲ್ಲಿ ರೇಷ್ಮೆಗೆ ಬಹಳ ಬೇಡಿಕೆ ಇದೆ. ಉತ್ಪಾದನೆ ಕಡಿಮೆ ಇದೆ. ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ ರೇಷ್ಮೆ ಬೆಳೆ ಬಗ್ಗೆ ಮಾಹಿತಿ ನೀಡಲು ಇಲಾಖೆ ಅಧಿಕಾರಿಗಳು ಲಭ್ಯವಿದ್ದಾರೆ ಎಂದು ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು