LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಎಚ್ಡಿಕೆ-ಖರ್ಗೆ ಜಟಾಪಟಿ

ಪ್ರಿಯಾಂಕ್ ವಿರುದ್ಧ ಅವ್ಯವಹಾರದ ಆರೋಪ | ರಾಜೀನಾಮೆಗೆ ಆಗ್ರಹ



ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಹಿಂದೆ ನಿರ್ವಹಿಸುತ್ತಿದ್ದ ಇಲಾಖೆಯಲ್ಲಿ ಅವ್ಯವಹಾರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್ರಿಯಾಂಖ್ ಖರ್ಗೆ ಅವರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಅಕ್ರಮವಾಗಿದೆ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಆ ಇಲಾಖೆಯಲ್ಲಿ ಏಕಾಏಕಿ 24 ಎಇಇ ಅವರನ್ನು ನೇಮಕ ಮಾಡಲಾಗಿದೆ. ಈ ಕೂಡಲೇ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಹಿಂದಿನ ಘಟನೆಗಳನ್ನು ನೆನಪಿಸಿದ ಸಚಿವ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಅವರು ಹಿಂದೆ ಆರ್‌ಎಸ್‌ಎಸ್ ಅನ್ನು `ವಿಷಸರ್ಪ' ಎಂದು ಬರೆದಿದ್ದನ್ನು ಪ್ರಸ್ತಾಪಿಸಿದರು. "ಅವರು ಆ ರೀತಿ ಬರೆದಾಗ ನಾನು ಅವರ ದೊಡ್ಡ ಅಭಿಮಾನಿಯಾಗಿದ್ದೆ. ಆದರೆ ಇಂದು ಅಧಿಕಾರಕ್ಕಾಗಿ ತಮ್ಮ ತತ್ವ ಮತ್ತು ಸಿದ್ಧಾಂತಗಳನ್ನು ಬಲಿಕೊಟ್ಟು ಹೋಗಿರುವ ಕುಮಾರಸ್ವಾಮಿ ಅವರ ಬಗ್ಗೆ ನಾನೇನು ಹೇಳಲಿ? ಬಿಜೆಪಿ ಮತ್ತು ಜೆಡಿಎಸ್‌ನಿಂದ ನಾನು ಕಲಿಯಬೇಕಾದದ್ದು ಏನೂ ಇಲ್ಲ" ಎಂದು ವಾಗ್ದಾಳಿ ನಡೆಸಿದರು.ಇದೇ ವೇಳೆ ಐಎಎಸ್ ಅಧಿಕಾರಿ ನಾಪತ್ತೆಯಾಗಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, "ಸಂಬಂಧಪಟ್ಟ ಐಎಎಸ್ ಅಧಿಕಾರಿ ಎಲ್ಲಿದ್ದಾರೆ ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿದೆ. ಆ ಅಧಿಕಾರಿ ಲಿಖಿತವಾಗಿ ರಜೆ ಅರ್ಜಿ ನೀಡಿ ತೆರಳಿದ್ದಾರೆ. ಅವರನ್ನು ವಶಕ್ಕೆ ಪಡೆದಿದ್ದೇವೆಯೇ ಅಥವಾ ಅವರು ಓಡಿ ಹೋಗಿದ್ದಾರೆಯೇ ಎಂಬ ಸಾಮಾನ್ಯ ಮಾಹಿತಿ ನಮಗೆ ತಿಳಿಯುತ್ತದೆ. ಮಾಹಿತಿ ಕೊರತೆಯಿಂದಲೋ ಅಥವಾ ಸಾಮಾನ್ಯ ಪ್ರಜ್ಞೆಯ ಅಭಾವದಿಂದಲೋ ಕುಮಾರಸ್ವಾಮಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಧಿಕಾರಿ ಬಂದ ಮೇಲೆ ವಿಚಾರಣೆ ನಡೆಸೋಣ, ಈ ಬಗ್ಗೆ ಕುಮಾರಸ್ವಾಮಿಯವರಿಗಾಗಲಿ ಅಥವಾ ಬಿಜೆಪಿಯವರಿಗಾಗಲಿ ಸ್ಪಷ್ಟನೆ ನೀಡುವ ಅಗತ್ಯ ನಮಗಿಲ್ಲ" ಎಂದರು.ಕೆಪಿಎಸ್ಸಿ ಹಗರಣದ ವಿಷಯವನ್ನು ಪ್ರಸ್ತಾಪಿಸಿದ ಸಚಿವರು, "ಶಿವಶಂಕರ ಸಾಹುಕಾರ್ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದು ಯಾರು? ಅವರು ಹಣ ಕೊಟ್ಟು ಅಧ್ಯಕ್ಷರಾಗಿದ್ದಾರೆ ಎಂಬ ಮಾತು ನಿಜವೇ? ಶಿವಶಂಕರಪ್ಪ ಅವರ ಮನೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಫೋಟೋ ಇರುವುದು ಸತ್ಯವೇ? ಈ ಎಲ್ಲಾ ವಿಚಾರಗಳನ್ನು ಕುಮಾರಸ್ವಾಮಿ ಅವರ ಸ್ನೇಹಿತರೇ ಹೇಳುತ್ತಿದ್ದಾರೆ, ಇದಕ್ಕೆ ಅವರು ಏನು ಉತ್ತರ ನೀಡುತ್ತಾರೆ?" ಎಂದು ಪ್ರಶ್ನಿಸಿದರು. ಪ್ರಿಯಾಂಕ ಖರ್ಗೆ ವಿರುದ್ಧ ಮಾತನಾಡಿದರೆ ಜೆಡಿಎಸ್ ಮತ್ತು ಬಿಜೆಪಿಗೆ ಮಾಧ್ಯಮಗಳಲ್ಲಿ ದಿನವೂ ಪ್ರಚಾರ ಹಾಗೂ ಅಂಕ ಸಿಗುತ್ತದೆ, ಅದಕ್ಕಾಗಿಯೇ ಅವರು ತಮ್ಮ ವಿರುದ್ಧ ನಿರಂತರವಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಚಿವ ಖರ್ಗೆ ಕಿಡಿಕಾರಿದರು.ಇನ್ನೊಂದೆಡೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮಾತನಾಡಿ, ನೈಸ್ ಬಗ್ಗೆ ವರದಿಕೊಟ್ಟು 10 ವರ್ಷಗಳಾಗಿದೆ. ಇದೀಗ ಮತ್ತೆ ಅದನ್ನು ಏಕೆ ಎತ್ತಿದ್ದಾರೆ ಎಂಬುದು ನನಗೆ ತಿಳಿಯದು ಎಂದು ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST