LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

ಬೆಂಗಳೂರು: ರಾಜ್ಯದಲ್ಲಿ ಬೈಕ್‌ಗಳನ್ನು ಟ್ಯಾಕ್ಸಿಗಳನ್ನಾಗಿ ಬಳಸಲು ಹೈಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ಹೇರಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ಆದರೆ ಇದೀಗ ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.

ಒಲಾ, ಊಬರ್ ಮತ್ತಿತರ ಅಗ್ರಿಗೇಟರ್ ಗಳು ಸಲ್ಲಿಸಿದ ಮೇಲ್ಮನವಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಮಾನ್ಯ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್ ಗಳು ಸಾರಿಗೆ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಅರ್ಹ ಮನವಿಗಳನ್ನು ಸರ್ಕಾರ ಪುರಸ್ಕರಿಸಿ ಅನುಮತಿ ನೀಡಬೇಕು. ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 74(2) ರ ಪ್ರಕಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಷರತ್ತುಗಳನ್ನು ವಿಧಿಸಬಹುದು ಎಂದು ಪೀಠ ಆದೇಶ ನೀಡಿದೆ. ಇದರಿಂದ ಬೈಕ್ ಟ್ಯಾಕ್ಸಿ ಚಾಲಕರು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಹಾವಳಿ ಹೆಚ್ಚಾಗಿದೆ ಎಂದು ಕೆಲ ಸಂಸ್ಥೆಗಳು ದೂರು ನೀಡಿತ್ತು. ಇತ್ತ ಆಟೋ, ಕ್ಯಾಬ್ ಸೇವೆಗಳು ದುಬಾರಿಯಾಗುತ್ತಿದ್ದಂತೆ ಬೈಕ್ ಟ್ಯಾಕ್ಸಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳ ಪ್ರಯಾಣಿರಿಗೆ ವರವಾಗಿತ್ತು. ಆದರೆ, ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿ ಆದೇಶ ನೀಡಿತ್ತು.

ಇತ್ತ ಈ ಆದೇಶವನ್ನು ಪ್ರಶ್ನಿಸಿ ಬೈಕ್ ಟ್ಯಾಕ್ಸಿ ಅಗ್ರೇಟರ್ ಕಂಪನಿಗಳು ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಏಕಸದಸ್ಯ ಪೀಠ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದಿತ್ತು. ಹೀಗಾಗಿ ಅಗ್ರಿಗೇಟರ್ ಕಂಪನಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಕುರಿತು ವಿಚಾನೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಇಂದು ಮಹತ್ವದ ಆದೇಶ ನೀಡಿದೆ.

ಈ ನಡುವೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ಇನ್ನೂ ಕೋರ್ಟ್ ಆದೇಶದ ಪ್ರತಿ ಸಿಕ್ಕಿಲ್ಲ. ಆದೇಶದ ಪ್ರತಿ ಬಂದ ನಂತರ ಅದನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆಂದು ಹೇಳಿದ್ದಾರೆ.

ಈ ಬಗ್ಗೆ ಇಲಾಖೆಯ ಕಮಿಷನರ್ ಅವರೊಂದಿಗೆ ಚರ್ಚಿಸಿ, ಮುಂದಿನ ಕಾನೂನು ಹೋರಾಟ ಅಥವಾ ತೀರ್ಮಾನದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು