LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ಲೇಆಫ್ ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು

ನವದೆಹಲಿ: ಐಪಿಎಲ್ 2026ರ ಕಾದಾಟ ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ! ಹತ್ತು ತಂಡಗಳ ನಡುವಿನ ಈ ಬಲಿಷ್ಠ ಪೈಪೋಟಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಡುವ ನಾಲ್ಕು ಅದೃಷ್ಟವಂತ ತಂಡಗಳು ಯಾವುವು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ. ಕೆಲ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇನ್ನು ಕೆಲವು ತಂಡಗಳು ಪ್ರತಿ ಪಂದ್ಯವನ್ನೂ 'ಮಾಡು ಇಲ್ಲವೇ ಮಡಿ' ಎಂಬAತೆ ಆಡಬೇಕಾದ ಅನಿವಾರ್ಯತೆಯಲ್ಲಿವೆ. ಅದರಂತೆ ಪ್ಲೇಆಫ್ ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
ಪಂಜಾಬ್ ಕಿಂಗ್ಸ್ : ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಮ್ಯಾಚ್ ಗಳಲ್ಲಿ 6 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಒಟ್ಟು 13 ಅಂಕಗಳೊAದಿಗೆ ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಮುಂದಿನ 5 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಕೇವಲ 2 ಮ್ಯಾಚ್ ಗೆದ್ದರೆ 17 ಅಂಕಗಳೊAದಿಗೆ ಪ್ಲೇಆಫ್ ಗೇರಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದ ಆರ್ ಸಿಬಿ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ 5 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 16 ಅಂಕಗಳೊAದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.
ಸನ್ ರೈಸರ್ಸ್ ಹೈದರಾಬಾದ್ : ಪ್ಯಾಟ್ ಕಮಿನ್ಸ್ ಮುಂದಾಳತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ಎಸ್ ಆರ್ ಹೆಚ್ ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ ಪ್ಲೇಆಫ್ ಗೇರಬಹುದು.
ರಾಜಸ್ಥಾನ್ ರಾಯಲ್ಸ್ : ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಈಗಾಗಲೇ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 12 ಅಂಕಗಳನ್ನು ಪಡೆದಿರುವ ಆರ್ ಆರ್ ಪಡೆ ಮುಂದಿನ 4 ಮ್ಯಾಚ್ ಗಳಲ್ಲಿ 2 ಜಯ ಸಾಧಿಸಿದರೆ ಒಟ್ಟು ಅಂಕಗಳನ್ನು 16 ಕ್ಕೇರಿಸಬಹುದು. ಈ ಮೂಲಕ ಪ್ಲೇಆಫ್ ಗೆ ಅರ್ಹತೆ ಪಡೆಯಬಹುದು.
ಗುಜರಾತ್ ಟೈಟಾನ್ಸ್ : ಶುಭ್ ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಕೂಡ 10 ಪಂದ್ಯಗಳನ್ನಾಡಿದೆ. ಈ ವೇಳೆ 4 ಮ್ಯಾಚ್ ಗಳಲ್ಲಿ ಸೋತರೆ, 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಮುಂದಿನ 4 ಪಂದ್ಯಗಳಲ್ಲಿ 2 ಜಯ ಸಾಧಿಸಿ 16 ಅಂಕಗಳ ಮೂಲಕ ಪ್ಲೇಆಫ್ ಗೇರಬಹುದು.
ಚೆನ್ನೆöÊ ಸೂಪರ್ ಕಿಂಗ್ಸ್ : ರುತುರಾಜ್ ಗಾಯಕ್ವಾಡ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ 5 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 4 ಪಂದ್ಯಗಳಲ್ಲಿ ಮೂರು ಜಯ ಸಾಧಿಸಿದರೆ ಸಿಎಸ್ ಕೆ ತಂಡ ಕೂಡ ಪ್ಲೇಆಫ್ ಗೆ ಅರ್ಹತೆ ಪಡೆದುಕೊಳ್ಳಬಹುದು. ಡೆಲ್ಲಿ ಕ್ಯಾಪಿಟಲ್ಸ್ : ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಮ್ಯಾಚ್ ಗಳಲ್ಲಿ ಗೆದ್ದರೆ 6 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ 8 ಅಂಕಗಳನ್ನು ಮಾತ್ರ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ ನೇರವಾಗಿ ಪ್ಲೇಆಫ್ ಗೇಬಹುದು.
ಕೊಲ್ಕತ್ತಾ ನೈಟ್ ರೈಡರ್ಸ್ : ಅಜಿಂಕ್ಯ ರಹಾನೆ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ ವೇಳೆ ಕೆಕೆಆರ್ ಗೆದ್ದಿರುವುದು 3 ಪಂದ್ಯಗಳಲ್ಲಿ ಮಾತ್ರ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ 1 ಅಂಕ ಗಿಟ್ಟಿಸಿಕೊಂಡಿದೆ. ಅದರಂತೆ ಇದೀಗ 7 ಅಂಕಗಳನ್ನು ಹೊಂದಿರುವ ಕೆಕೆಆರ್ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳೊAದಿಗೆ ನೇರವಾಗಿ ಪ್ಲೇಆಫ್ ಗೆ ಪ್ರವೇಶಿಸಲಿದೆ.
ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಒಂದು ವೇಳೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳನ್ನು ಪಡೆದಿದ್ದರೆ ಮಾತ್ರ ಮುಂಬೈ ಇಂಡಿಯನ್ಸ್ ನೆಟ್ ರನ್ ರೇಟ್ ನೆರವಿನೊಂದಿಗೆ ನಾಲ್ಕನೇ ಸ್ಥಾನ ಪಡೆದು ಪ್ಲೇಆಫ್‌ಗೇರಬಹುದು.
ಲಕ್ನೋ ಸೂಪರ್ ಜೈಂಟ್ಸ್ : ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಆಡಿದ 9 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇದೀಗ ಕೇವಲ 4 ಅಂಕಗಳನ್ನು ಮಾತ್ರ ಹೊಂದಿರುವ ಎಸ್ ಎಸ್ ಜಿ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಒಂದು ವೇಳೆ ಲೀಗ್ ಹಂತದ ಮುಕ್ತಾಯದ ವೇಳೆ ಟಾಪ್-4 ನಲ್ಲಿರುವ ಒಂದು ತಂಡವು 14 ಅಂಕಗಳನ್ನು ಮಾತ್ರ ಪಡೆದಿದ್ದರೆ, ನೆಟ್ ರನ್ ರೇಟ್ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪ್ಲೆಆಫ್ ಗೆ ಪ್ರವೇಶಿಸಲು ಅವಕಾಶ ದೊರೆಯಬಹುದು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು