ಸಂತೋಷ್ ಕುಮಾರ್ ನಿರ್ಮಾಣದ `ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತ ತಲಪಿದೆ.ಚಿತ್ರದ ಡಬ್ಬಿಂಗ್ ಕೆಲಸಗಳು ಕೂಡ ಪೂರ್ಣಗೊಂಡಿವೆ. ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪಕ್ಕಾ ಉತ್ತರ ಕರ್ನಾಟಕದ ಸೊಗಡನ್ನು ಒಳಗೊಂಡಿರುವ ವಿಭಿನ್ನ ಕಥಾಹಂದರ ಈ ಚಿತ್ರದ್ದು.. ಮೊದಲ ಹಂತದಲ್ಲಿ ಹುಬ್ಬಳ್ಳಿ ಶಿರಸಿ, ಧಾರವಾಡಗಳಲ್ಲಿ ಚಿತ್ರೀಕರಣ ನಡೆಸಿದೆ. ಸ್ಥಳೀಯ ಪರಿಸರ ಹಾಗೂ ಕಥೆಯ ನೈಜತೆಗೆ ತಕ್ಕಂತೆ ನೈಜ ತಾಣಗಳಲ್ಲಿ ಚಿತ್ರೀಕರಣ ನಡೆದಿದೆ ಚೇತನ್ ಮಾರಂಬೀಡ್, ಪವನ್ ಕುಲಕರ್ಣಿ, ಸುಮಿತ್ ಸಂಕೋಜಿ, ನಮನ್ ಅರೋರ, ದೀಪಕ್ ರಾವ್, ಶಿವು ಗುಂಡಣ್ಣನವರ್, ವಿನಯ್ ದೊಡ್ಡಮನಿ, ಧನ್ಯ ಸುಜೀತ್, ನಟರಾದ ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮತ್ತು ಕೃಷ್ಣ ಹೆಬ್ಬಾಳೆ ಇದ್ದಾರೆ. ಬಹುತೇಕ ಸೋಷಿಯಲ್ ಮೀಡಿಯಾದ ಜನಪ್ರಿಯ ಕಂಟೆAಟ್ ಕ್ರಿಯೇಟರ್ಸ್ ಕೂಡ ಬಣ್ಣ ಹಚ್ಚಿರುವುದು ಚಿತ್ರದ ಮತ್ತೊಂದು ವಿಶೇಷತೆಯಾಗಿದೆ.