LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನಾನು ದೆಹಲಿಗೆ ಸುಮ್ಮನೆ ಹೋಗಿದ್ದೆ, ಯಾವುದೇ ಲಾಭಿಗಲ್ಲ: ಹೆಚ್.ಸಿ.ಬಾಲಕೃಷ್ಣ

ಮಾಗಡಿ: ಇತ್ತೀಚೆಗೆ ನಾನು ದೆಹಲಿಗೆ ಹೋಗಿದ್ದು ಸುಮ್ಮನೆ ಹೋಗಿದ್ದೇನೆಯೇ ಹೊರತು ಮಂತ್ರಿಗಿರಿಗೆ ಲಾಭಿ ನಡೆಸಲು ಅಲ್ಲ ಎಂದು ಕೆ.ಆರ್.ಡಿ.ಸಿ.ಎಲ್ ಅದ್ಯಕ್ಷರು ಶಾಸಕರಾದ ಹೆಚ್.ಸಿ.ಬಾಲಕೃಷ್ಣ ಹೇಳಿದರು.ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ಡೊಡ್ಡಸೋಮನಹಳ್ಳಿ ಬಳಿಯ ಚಿಕ್ಕಬಸವಯ್ಯನ ಪಾಳ್ಯದಲ್ಲಿ ಅರಳಿಕಟ್ಟೆ ದೊಡ್ಡಿಯಲ್ಲಿ ಸುಮಾರು ಮೂರು ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅರಳೀಕಟ್ಟೆಯನ್ನು ಲೋಕಾರ್ಪಣೆಗೊಳಿಸಿದ ನಂತರ ಮಾತನಾಡಿದ ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು ನಮ್ಮ ಹೈಕಮಾಂಡ್ ಇರುವುದು ದೆಹಲಿಯಲ್ಲಿ ಆದಕಾರಣವಾಗಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲು ಹೋಗಿದ್ದೇನೆಯೇ ಹೊರತು ಮಂತ್ರಿಗಿರಿಯ ಲಾಭಿ ನಡೆಸುವುದಕ್ಕಲ್ಲ ಎಂದ ಅವರು ಎರಡನೇ ಪಟ್ಟಿ ಮಂತ್ರಿ ಸ್ಥಾನವು ಇನ್ನು ಕೆಲವೇ ದಿನಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.ನಾನು ಐದು ಭಾರಿ ಶಾಸಕನಾಗಿದ್ದು ನಾನು ಕೂಡಾ ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ.ನನ್ನನ್ನು ಮಂತ್ರಿ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.ರಾಜಧಾನಿ ಬೆಂಗಳೂರಿನಲ್ಲಿ ಕೋರ್ಟ್ ಆದೇಶದ ಮೇರೆಗೆ ಪಾದಚಾರಿಗಳಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸರಿಸುಮಾರು 2000 ಕಿಮೀ ವ್ಯಾಪ್ತಿಯಲ್ಲಿ ಫುಟ್ಪಾತ್ ಅಂಗಡಿಗಳನ್ನು ಯಾರಿಗೂ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುತ್ತಿದೆ.ಇದನ್ನೇ ನಂಬಿಕೊAಡು ಜೀವನ ಮಾಡುತ್ತಿರುವವರಿಗೆ ಪರ್ಯಾಯ ಮಾರ್ಗವನ್ನು ಶೀಘ್ರದಲ್ಲಿಯೇ ಒದಗಿಸಲಾಗುವುದು.ಗೃಹಜ್ಯೋತಿ ಯೋಜನೆಯನ್ನು ಅನರ್ಹರು ಪಡೆಯುತ್ತಿದ್ದಾರೆ.ಇದನ್ನು ತಪ್ಪಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೃಹಜ್ಯೋತಿ ಸಂಭಂದ ಪುನರ್ ಪರಿಷ್ಕರಣೆ ಮಾಡಲು ಸಂಭAದಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ,ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಅವರಿಗೆ ಸಮರ್ಪಕವಾಗಿ ಉಚಿತ ವಿದ್ಯುತ್ ನೀಡಲಾಗುತ್ಥದೆ.ಇದರಿಂದಾಗಿ ಶ್ರೀಸಾಮಾನ್ಯರು ಗೊಂದಲಕ್ಕೀಡಾಗಬಾರದು ಎಂದು ಬಾಲಕೃಷ್ಣ ಸ್ಪಷ್ಟನೆ ನೀಡಿದರು.ಗ್ರಾಪಂ ಮಾಜಿ ಸದಸ್ಯರಾದ ದೊಡ್ಡಸೋಮನಹಳ್ಳಿ ಪಾಪಣ್ಣಗೌಡ ಮಾತನಾಡಿ ಶಾಸಕ ಹೆಚ್.ಸಿ.ಬಾಲಕೃಷ್ಣರವರು ಈ ಭಾರಿ ಶಾಸಕರಾದ ಮೇಲೆ ದೊಡ್ಡಸೋಮನಹಳ್ಳಿ ರಸ್ತೆಯಿಂದ ಗಂಗಣ್ಣ ಮನೆ,ಕ್ಯಾಸಪ್ಪ,ಮುದುಗೆರೆಯ್ಯ ಮನೆಯವರೆಗೆ 50 ಲಕ್ಷ ರೂ ವೆಚ್ಚದ ಅನುದಾನದಲ್ಲಿ ರಸ್ತೆ ಚರಂಡಿ ಕಾಮಗಾರಿಗೆ ಅನುದಾನ ನೀಡಿದ್ದು ಕಾಮಗಾರಿ ಪೂರ್ಣಗೊಂಡಿದೆ.ಇದೇ ದೊಡ್ಡಸೋಮನಹಳ್ಳಿಯಿಂದ ಮರಿಸೋಮನಹಳ್ಳಿ ಸೇರುವ ಒಂದು ಕಿಮೀ ರಸ್ತೆಗೆ ಒಂದು ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದೆ.
ಗ್ರಾಮದಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು 5 ಲಕ್ಷ ವೆಚ್ವದಲ್ಲಿ ಪಂಪು ಮೋಟಾರ್ ಬಿಡಲಾಗಿದೆ.ಮತ್ತೆ ಒಂದು ಕೋಟಿಯು ರಸ್ತೆ ಚರಂಡಿ ನಿರ್ಮಾಣ ಮಾಡಲು ಶಾಸಕರು ಹಣ ನೀಡಿದ್ದು ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ.ಜನತಾ ಕಾಲೋನಿಯಿಂದ ತಿಪ್ಪಸಂದ್ರದವರೆಗೆ ರಸ್ತೆ ನಿರ್ಮಾಣ ಮಾಡಲು ಎರಡೂವರೆ ಕೋಟಿ ಅನುದಾನದ ಭರವಸೆ ನೀಡಿದ್ದು ಈ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆಗಬೇಕಿದೆ.ಎಸ್.ಸಿ.ಕಾಲೋನಿಯಲ್ಲಿ ರಸ್ತೆ ಚರಂಡಿ ಕಾಮಗಾರಿಗೆ 50 ಲಕ್ಷ ಅನುದಾನವನ್ನು ಶಾಸಕರು ನೀಡಿದ್ದು ಟೆಂಡರ್ ಪ್ರಕ್ರಿಯೆ ಮುಗಿದ ಕೂಡಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಪಾಪಣ್ಣಗೌಡ ಸ್ಪಷ್ಟಪಡಿಸಿದರು.ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಜಿ.ವೆಂಕಟೇಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪೊಲೀಸ್ ರಾಮಣ್ಣ, ಭೂಬ್ಯಾಂಕ್ ತಾಲ್ಲೂಕು ಅಧ್ಯಕ್ಷ ಜಾನಿಗೆರೆ ರವೀಶ್, ಟಿಎಪಿಸಿಎಂಎಸ್ ನಿರ್ದೇಶಕ ತಿಗಳರಪಾಳ್ಯ ರಮೇಶಣ್ಣ, ಚಿಕ್ಕಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಗಂಗೋನಗಳ್ಳಿ ಶ್ರೀನಿವಾಸಮೂರ್ತಿ, ಮುಖಂಡರಾದ ಶೈಲಜಾವೆಂಕಟೇಶ್, ಯಲ್ಲಾಪುರ ಸಿಂಗ್ರಿಗೌಡ, ದೊಡ್ಡಕೆಂಚಯ್ಯ,ಹೊಸಪಾಳ್ಯ ಯತೀಶ್(ಅಪ್ಪಿ)ಕುಮಾರ್, ಹುಚ್ಚಹನುಮೇಗೌಡರ ಪಾಳ್ಯ ಧನಂಜಯ, ಡಿ.ಜೆ.ಬಸವರಾಜು, ಡಿ.ಸಿ.ಬಸವರಾಜು, ವೆಂಕಟೇಶಯ್ಯ, ರಾಮಚಂದ್ರಯ್ಯ, ದೇವರಾಜು, ಮಹೇಶ್ ಸೇರಿದಂತೆ ಮತ್ತಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು