ಬೆಂಗಳೂರು: ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಪಕ್ಷದ ಶಾಸಕರು ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದರೆ ತಕ್ಷಣ ಅಂಗೀಕರಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳು ಸಾಕಷ್ಟು ಮಂದಿಯಿದ್ದರು. ಆದರೆ ಸಚಿವ ಸ್ಥಾನ ಇದ್ದದ್ದು ಇಪ್ಪತ್ತು ಮಾತ್ರ ಪಕ್ಷದ ರಾಷ್ಟಿçÃಯ ವರಿಷ್ಠರು ಎಲ್ಲಾ ಸಾಧಕಬಾಧಕಗಳನ್ನು ಚಿಂತನೆ ಮಾಡಿ ಸಚಿವರನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಸಿಗದವರು ಬೇಸರಗೊಂಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಹಾಗೂ ಹಲವು ಬಾರಿ ನನಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೂ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ.