LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

`ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲೆ ಕ್ರೌರ್ಯ ಹೆಚ್ಚಾಗುತ್ತಿದೆ ನಿಲ್ಲಬೇಕು'

ಕೆ.ಆರ್.ಪುರ: ಹೆಣ್ಣುಮಕ್ಕಳು ದೇವರ ಸಮಾನ ಎನ್ನುತ್ತೇವೆ ಆದರೆ ಅವರ ಮೇಲೆಯೇ ಕ್ರೌರ್ಯ ಮೆರೆಯುತ್ತಿದ್ದೇವೆ ಎಂದು ಯುವ ವಿದ್ವಾಂಸ, ರಾಷ್ಟ್ರೀಯ ವ್ಯಾಸ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಡಾ.ಕುಪ್ಪನಹಳ್ಳಿ ಎಂ.ಬೈರಪ್ಪ ಕಳವಳ ವ್ಯಕ್ತಪಡಿಸಿದರು.ಕೆ.ಆರ್.ಪುರದಲ್ಲಿ ಕೇಂಬ್ರಿಡ್ಜ್ ಕಾಲೇಜು ಆಶ್ರಯದಲ್ಲಿ ಲೇಖಕಿ ಸೌಜನ್ಯ ಎಸ್.ಕೆ. ಅವರ ಚೊಚ್ಚಲ ಕವನ ಸಂಕಲನ ಭಾವದ ಅಲೆಗಳು ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು.

ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಯಾವುದೇ ಕೆಲಸವಿರಲಿ ಗಂಡುಮಕ್ಕಳ ಸರಿಸಮಾನವಾಗಿ ದುಡಿಯುತ್ತಿದ್ದಾರೆ. ಆದರೆ ಅವರ ಮೇಲೆ ಕ್ರೌರ್ಯ ಮೆರೆದು ಅವರ ಅವನತಿಗೆ ಕಾರಣವಾಗುತ್ತಿದ್ದೇವೆ ಎಂದರು.ಸಾಹಿತ್ಯ ಎನ್ನುವುದು ಎನ್ನುವುದು ಸವಾಲಿನ ಕೆಲಸ ಹೆಣ್ಣುಮಕ್ಕಳು ಕೂಡ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡು ಸೃಜನಶೀಲ ಬರವಣಿಗೆಯಲ್ಲಿ ಮುಂದುವರೆಯುತ್ತಿದ್ದಾರೆ. ಸೌಜನ್ಯ ಅವರ ಕವನ ಸಂಕಲನ ಭಾವದ ಅಲೆಗಳು ಪರಿಸರ, ಸಹನೆ, ಅತ್ಯಾಚಾರದಂತಹ ಕ್ರೌರ್ಯ ಮುಂತಾದ ವಿಚಾರಗಳನ್ನು ಒಳಗೊಂಡಿದೆ ಎಂದರು.

ಭಾವದ ಅಲೆಗಳು ಪುಸ್ತಕದ ಲೇಖಕಿ ಸೌಜನ್ಯ ಎಸ್.ಕೆ. ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಇಡೀ ವಿಶ್ವದಲ್ಲಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರಗಳು ಹೆಚ್ಚಾಗಿವೆ. ಪ್ರತಿಸಾರಿ ಅತ್ಯಾಚಾರ ಆದಾಗ ಮೇಣದ ಬತ್ತಿ ಹಚ್ಚಿ ಸಂತಾಪಸೂಚಿಸುವ ಮೂಲಕ ಸುಮ್ಮನೆ ಆಗುತ್ತೇವೆ. ನಾವುಮೇಣದ ಬತ್ತಿ ಹಚ್ಚುವ ಬದಲು ಕ್ರೌರ್ಯ ಎಸಗಿದವರನ್ನು ಸುಡುವ ಕೆಲಸ ಮಾಡುವುದಿಲ್ಲ.

ಸಮಾಜದಲ್ಲಿ ಹೆಣ್ಣುಮಕ್ಕಳ ಮೇಲೆ ಕ್ರೌರ್ಯ ನಿಲ್ಲಬೇಕು ಎನ್ನುವುದನ್ನೆ ಭಾವದ ಅಲೆಗಳು ಪುಸ್ತಕದಲ್ಲಿ ನನಗೆ ಎನಿಸಿದನ್ನು ಬರೆದಿದ್ದೇನೆ. ನನ್ನ ಭಾವನೆಗಳು ಪುಸ್ತಕ ರೂಪದಲ್ಲಿದೆ. ಹೆಣ್ಣುಮಕ್ಕಳ ವಿಷಯವೆ ಪುಸ್ತಕ ಬರೆಯಲು ಪ್ರೇರಣೆಯಾಗಿದೆ ಎಂದರು.ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಉಪನ್ಯಾಸಕ ಶಿವಾನಂದ, ಕೇಂಬ್ರಿಡ್ಜ್ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಅಶ್ವಿನಿ, ಡಾ.ರೇಖಾ, ಡಾ.ಬಿ.ವಿ.ಕೋಮಲ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು