LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಚಿಂತಾಮಣಿಯಲ್ಲಿ ನವ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ ಉದ್ಘಾಟನೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿಯಲ್ಲಿ ನವ ಕರ್ನಾಟಕ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀನಾಥ್ ಕೊಡಿಹಳ್ಳಿ ಅವರು ಇಂದು ನವ ಕರ್ನಾಟಕ ರೈತ ಸಂಘದ ಕಾರ್ಯಾಲಯ ಉದ್ಘಾಟನೆಯನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷರಾದ ದಯಾನಂದ ಪಾಟೀಲ್ ಅವರು ಕಾರ್ಯಾಲಯ ಉದ್ಘಾಟನೆಯನ್ನು ನೆರವೇರಿಸಿ,

ನಂತರದಲ್ಲಿ ಮಾತನಾಡಿದ ಅವರು ರೈತರು ಸರಳ ಬದುಕನ್ನು ಮೈಗೂಡಿಸಿಕೊಂಡು, ಅಜ್ಞಾನ ಮತ್ತು ಮೌಢ್ಯದಿಂದ ಹೊರಬಂದಾಗ ಮಾತ್ರ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಪ್ರಸ್ತುತ ದೇಶದೆಲ್ಲೆಡೆ ವಿವಿಧ ಕಾರಣಗಳಿಂದಾಗಿ ರೈತರು ಆತ್ಯಹತ್ಯೆಗೆ ಶರಣಾಗುತ್ತಿದ್ದಾರೆ.

ಆಡಳಿತ ನಡೆಸುವ ಸರ್ಕಾರಗಳೇ ನೇರ ಹೊಣೆ. ರೈತರ ನೋವು ಯಾರಿಗೂ ಅರ್ಥವಾಗುತ್ತಿಲ್ಲಾ, ಈ ದೇಶವನ್ನಾಳಿದ ಯಾವುದೇ ರಾಜಕೀಯ ಪಕ್ಷಗಳು ರೈತರ ಹಿತಕಾಯುವಲ್ಲಿ ವಿಫಲವಾಗಿವೆ. ಹಾಗಾಗಿ ಗ್ರಾಮ ಮಟ್ಟದಿಂದ ರೈತರನ್ನು ಸಂಘಟಿಸುವ ಸಲುವಾಗಿ ಚಿಂತಾಮಣಿಯಲ್ಲಿ ಘಟಕವನ್ನು ಸ್ಥಾಪಿಸಲಾಗಿದೆ ಹಾಗೂ ಇತ್ತಿಚಿಗೆ ಅತಿವೃಷ್ಟಿ ಅನಾವೃಷ್ಟಿಯಿಂದ ರಾಜ್ಯದಲ್ಲಿ ಭಿಕರ ಬರಗಾಲ ಬಿದ್ದು ರೈತರು ಸಂಕಷ್ಟದಲ್ಲಿದ್ದಾರೆ , ಸರ್ಕಾರ ತಕ್ಷಣ ರೈತರ ನೇರವಿಗೆ ಬರಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸುತ್ತೇನೆ.ಎಂದು ನುಡಿದರು.

ನಂತರ ಶ್ರೀನಾಥ್ ಕೋಡಿಹಳ್ಳಿ ಅವರನ್ನು ಅಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ತುಮಕೂರು ರಾಜ್ಯ ಕಾರ್ಯದರ್ಶಿಗಳು, ಬಸವರಾಜ ಸ್ವಾಮಿ ರಾಯಚೂರು ರಾಜ್ಯ ಸಂಘಟನಾ ಕಾರ್ಯದರ್ಶಿ, ವೆಂಕಟೇಶ್ ಮಾಸ್ಟರ್ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ, ರೈತ ಮುಖಂಡರಾದ ನಾರಾಯಣ ಸ್ವಾಮಿ, ಮಂಜುಳಾ ರೆಡ್ಡಿ, ರತ್ನಮ್ಮ ಹಾಗೂ ಇನ್ನೂ ವಿವಿಧ ಜಿಲ್ಲೆಗಳ ರೈತಾಪಿ ವರ್ಗದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು