LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hassan

ಹಾಸನಾಂಬೆ ದರ್ಶನದಿಂದ ಹೆಚ್ಚಿದ ಆದಾಯ

ಹಾಸನ: ಪ್ರಸಿದ್ಧ ಹಾಸನಾಂಬೆ ಆಶೀರ್ವಾದಕ್ಕೆ ಜನ ಸಾಗರವೇ ಹರಿದುಬರುತ್ತಿದೆ. ನವೆಂಬರ್ 3ರಿಂದಲೇ 12 ದಿನ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನೋತ್ಸವ ಆರಂಭಗೊಂಡಿದ್ದು, ಹಾಸನಾಂಬೆ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಇನ್ನು ಏಳು ದಿನಗಳ ದರ್ಶನದ ಅಂತ್ಯಕ್ಕೆ ಹಾಸನಾಂಬೆ ದೇಗುಲಕ್ಕೆ ಒಟ್ಟು 3 ಕೋಟಿ 18ಲಕ್ಷದ 30 ಸಾವಿರ ರೂ. ಆದಾಯ ಹರಿದುಬಂದಿದೆ.

ಇದು ಕೇವಲ ನವೆಂಬರ್ 3ರಿಂದ ನವೆಂಬರ್ 10ರ ವರೆಗೆ ಅಂದರೆ ಏಳೇ ದಿನಗಳಲ್ಲಿ ಸಂಗ್ರಹವಾದ ಹಣ. ಇನ್ನೂ ನಾಲ್ಕು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ. ವಿಶೇಷ ದರ್ಶನದ ಪಾಸ್, ಲಡ್ಡು ಮಾರಾಟದಿಂದ ಆದಾಯದಲ್ಲಿ ಹೆಚ್ಚಳವಾಗಿದೆ. ಇನ್ನು ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚಿನ ಆದಾಯ ಸಂಗ್ರಹವಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಮಾಹಿತಿ ನೀಡಿದೆ.

1 ಸಾವಿರ ರೂಪಾಯಿ ಮೌಲ್ಯದ ಟಿಕೆಟ್ ಮಾರಾಟದಿಂದ 1ಕೋಟಿ 35 ಲಕ್ಷದ 81 ಸಾವಿರ ರೂಪಾಯಿ ಜಮೆಯಾಗಿದ್ದರೆ, 300 ರೂ.ಟಿಕೆಟ್ ಮಾರಾಟದಿಂದ 1 ಕೋಟಿ 43ಲಕ್ಷದ 33 ಸಾವಿರ ರೂ. ಸಂಗ್ರಹವಾಗಿದೆ. ಇನ್ನು ಲಡ್ಡು ಪ್ರಸಾದ ಮಾರಾಟದಿಂದ 39 ಲಕ್ಷದ 16 ಸಾವಿರ ರೂ. ಹಣ ಸಂಗ್ರಹವಾಗಿದೆ.

ಇದರೊಂದಿಗೆ ನವೆಂಬರ್ 3ರಿಂದ ನವೆಂಬರ್ 10ರ ವರೆಗೆ 3,18,30,320 ರೂ.(3 ಕೋಟಿ 18 ಲಕ್ಷದ 30 ಸಾವಿರ ರೂ.) ಆದಾಯ ಸಂಗ್ರಹವಾಗಿದೆ. ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಇಷ್ಟೊಂದು ಆದಾಯ ಹರಿಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು