LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

‘ಶಮಿ’ ದಾಳಿಯಿಂದ ಭಾರತ ಸೆಮೀಸ್‍ಗೆ ಲಗ್ಗೆ

ಮಧ್ಯಮ ವೇಗಿ ಮೊಹಮದ್ ಶಮಿ ಮಾರಕ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡ 55 ರನ್ ಗಳಿಗೆ ಆಲೌಟಾಗಿದೆ. ಭಾರತ ತಂಡ 302 ರನ್ ಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಅಗ್ರಸ್ಥಾನಿಗೆ ಪ್ರವೇಶಿಸಿದೆ.

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಮೂವರು ಗಳಿಸಿದ ಅರ್ಧಶತಕದ ನೆರವಿನಿಂದ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಸಂಪಾದಿಸಿತು.

ಕಠಿಣ ಗುರಿ ಬೆಂಬತ್ತಿದ ಶ್ರೀಲಂಕಾ 19.4 ಓವರ್ ಗಳಲ್ಲಿ 55 ರನ್ ಗಳಿಗೆ ಪತನಗೊಂಡಿತು. ಮೊಹಮದ್ ಶಮಿ ವಿಶ್ವಕಪ್ ನಲ್ಲಿ 4 ಬಾರಿ 5 ವಿಕೆಟ್ ಗೊಂಚಲು ಪಡೆಯುವ ಮೂಲಕ ಭಾರತದ ಜಾವಗಲ್ ಶ್ರೀನಾಥ್ ದಾಖಲೆಯನ್ನು ಮುರಿದರು.

ಜಸ್ ಪ್ರೀತ್ ಬುಮ್ರಾ 3 ವಿಕೆಟ್ ಪಡೆದರೆ, ಮೊಹಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು. ಶ್ರೀಲಂಕಾ ಪರ ಆಂಜೆಲೊ ಮ್ಯಾಥ್ಯೂಸ್ 12 ರನ್ ಗಳಿಸಿದ್ದರೆ, ಕಸೌನ್ ರಂಜಿತಾ 14, ಮಹೇಶ್ ತೀಕ್ಷಣ 12 ರನ್ ಬಾರಿಸಿದರೆ ಉಳಿದವರು ಎರಡಂಕಿಯ ಮೊತ್ತ ದಾಖಲಿಸಲು ವಿಫಲರಾದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿದರೂ ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್ ಗೆ 189 ರನ್ ಜೊತೆಯಾಟ ನಿಭಾಯಿಸಿದರು.

ಗಿಲ್ 92 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 92 ರನ್ ಗಳಿಸಿದರೆ, ಕೊಹ್ಲಿ 94 ಎಸೆತಗಳಲ್ಲಿ 11 ಬೌಂಡರಿ ಸಹಾಯದಿಂದ 88 ರನ್ ಸಿಡಿಸಿದರು. ಇವರಿಬ್ಬರು ಒಬ್ಬರ ಹಿಂದೆ ಒಬ್ಬರಂತೆ ಔಟಾಗಿ ಶತಕದ ಗೌರವದಿಂದ ವಂಚಿತರಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು