LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮತದಾನ ಕೇಂದ್ರಗಳ ಪರಿವೀಕ್ಷಣೆ

ಬೆಂಗಳೂರು ನಗರ ಜಿಲ್ಲೆ: ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ 25-ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 161- ಸಿ.ವಿ.ರಾಮನ್ ನಗರ ವಿಧಾನಸಭಾ ಕೇತ್ರ, 162 ಶಿವಾಜಿ ನಗರ ವಿಧಾನಸಭಾ ಕೇತ್ರ, 163- ಶಾಂತಿ ನಗರ ವಿಧಾನಸಭಾ ಕೇತ್ರಗಳಲ್ಲಿನ ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಮತದಾನ ಪರಿವೀಕ್ಷಣೆ ನಡೆಸಲಾಯಿತು.

161-ಸಿ.ವಿ.ರಾಮನ್ ನಗರ ವಿಧಾನಸಭಾ ಕೇತ್ರದ ವ್ಯಾಪ್ತಿಯಲ್ಲಿ ಬರುವ ಕೇಂದ್ರೀಯ ವಿದ್ಯಾಲಯ ಡಿ.ಆರ್.ಡಿ.ಒ, ಸಿ.ವಿ.ರಾಮನ್ ನಗರ, ಬೆಂಗಳೂರು -093 ಇಲ್ಲಿ ಮತದಾನ ಕೇಂದ್ರದಲ್ಲಿ ಒಟ್ಟು 15 ಬೂತ್ ಗಳಿದ್ದು, ಆದರಲ್ಲಿ ಒಂದು ಪಿಂಕ್ ಬೂತ್ ಕೇಂದ್ರ ಮತ್ತು ಯುವ ಮತದಾರರು ಕಾರ್ಯ ನಿರ್ವಹಿಸುತ್ತಿರುವ ಮತಗಟ್ಟೆ ಕೇಂದ್ರ ವಿಶೇಷವಾಗಿದೆ.

ಈ ಮತದಾನ ಕೇಂದ್ರದಲ್ಲಿ ಸಿ.ವಿ.ರಾಮನ್ ನಗರ ನಿವಾಸಿಯಾದ ಶಿವರಾಮಕೃಷ್ಣ ಶಾಸ್ತ್ರಿ ಅವರು ತಮ್ಮ 86ನೇ ವಯಸ್ಸಿನಲ್ಲೂ ಉತ್ಸಾಹದಿಂದ ಮತಗಟ್ಟೆಗೆ ಬಂದು 20ನೇ ಬಾರಿ ಮತದಾನ ಮಾಡಿದರು. ಹಿರಿಯ ನಾಗರಿಕರಿಗೆ ಮನೆಯಲ್ಲಿ ಮತದಾನ ಮಾಡಲು ಅವಕಾಶವಿತ್ತು. ಆದರೆ, ಮತಗಟ್ಟೆಯಲ್ಲೇ ಮತದಾನ ಮಾಡಬೇಕೆಂದು ಶಿವರಾಮಕೃಷ್ಣ ಶಾಸ್ತ್ರಿ ಅವರು ತೀರ್ಮಾನಿಸಿದ್ದರು. ಹೀಗಾಗಿ, ಮಗ ಹಾಗೂ ಸೊಸೆ ಜೊತೆ, ಡಿಆರ್ಡಿಒ ಕೇಂದ್ರಿಯ ವಿದ್ಯಾಲಯದ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದರು. ಅವರನ್ನು ಪೊಲೀಸರು, ವ್ಹೀಲ್ ಚೇರ್ ನಲ್ಲಿ ಮತಗಟ್ಟೆಗೆ ಕರೆದೊಯ್ದು ಮತ ಚಲಾಯಿಸಲು ಅನುಕೂಲ ಮಾಡಿ ಕೊಟ್ಟರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು