LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿ

ವಿಜಯನಗರ-ಗೋವಿಂದರಾಜನಗರದ ಸರ್ವಾಂಗೀಣ ಅಭಿವೃದ್ಧಿಗೆ ಎಂ. ಕೃಷ್ಣಪ್ಪ ಅಥವಾ ಪ್ರಿಯಕೃಷ್ಣ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಗೌರವಾನ್ವಿತ ಹೈಕಮಾಂಡ್ ನಾಯಕರ ಜನಪರ ಮತ್ತು ದೂರದೃಷ್ಟಿಯ ನಾಯಕತ್ವವನ್ನು ಶ್ಲಾಘಿಸಿರುವ ಗೋವಿಂದರಾಜನಗರದ ಐಎನ್‌ಟಿಯುಸಿ ಪದಾಧಿಕಾರಿಗಳು ಹಾಗೂ ಡಾ. ರಾಜ್‌ಕುಮಾರ್ ವಾರ್ಡ್ನ ಪಕ್ಷದ ಪ್ರಮುಖರು, ಬೆಂಗಳೂರಿನಲ್ಲಿ ಪಕ್ಷದ ಕೋಟೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಹೈಕಮಾಂಡ್‌ಗೆ ವಿಶೇಷ ಮನವಿಯೊಂದನ್ನು ಸಲ್ಲಿಸಿದ್ದಾರೆ.ಪಕ್ಷದ ಸಿದ್ದಾಂತಕ್ಕೆ ಸದಾ ಬದ್ಧರಾಗಿ, ಸತತ ನಾಲ್ಕು ಚುನಾವಣೆಗಳಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸುತ್ತಾ ಬಂದಿರುವ ಹಿರಿಯ ಧೀಮಂತ ನಾಯಕ, ಮಾಜಿ ಸಚಿವ ಎಂ. ಕೃಷ್ಣಪ್ಪ ಅಥವಾ ಯುವ ಹಾಗೂ ಜನಪ್ರಿಯ ಶಾಸಕ ಪ್ರಿಯಕೃಷ್ಣ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವುದು ಅತ್ಯಗತ್ಯವಾಗಿದೆ ಎಂದು ಗೋವಿಂದರಾಜನಗರ ವಿ. ಕ್ಷೇತ್ರದ ಐಎನ್ ಟಿಯುಸಿ ಅಧ್ಯಕ್ಷ ರ. ನರಸಿಂಹಮೂರ್ತಿ ಮತ್ತು ಗೋವಿಂದರಾಜನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡಿ ಸಿ ಯತೀಶ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೈಕಮಾಂಡ್ ಆಶಯದಂತೆ ಬಡವರ ಸಬಲೀಕರಣ ಮಾಡಿದ ಎಂ. ಕೃಷ್ಣಪ್ಪ: ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಹೈಕಮಾಂಡ್‌ನ ಮುಖ್ಯ ಆಶಯವಾದ ‘ಬಡವರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯ’ವನ್ನು ಅಕ್ಷರಶಃ ಜಾರಿಗೆ ತಂದ ಹೆಗ್ಗಳಿಕೆ ಎಂ. ಕೃಷ್ಣಪ್ಪ ಅವರದ್ದಾಗಿದೆ. ಕಳೆದ ಬಾರಿ ವಸತಿ ಸಚಿವರಾಗಿ ಅವರು ನೀಡಿದ ಕೊಡುಗೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಹಕ್ಕುಪತ್ರ ಹಾಗೂ ಸ್ವಂತ ಸೂರಿನ ಆಸರೆ ಕಲ್ಪಿಸುವ ಮೂಲಕ, ಅವರು ಕಾಂಗ್ರೆಸ್ ಸರ್ಕಾರದ ಘನತೆಯನ್ನು ಇಡೀ ರಾಜ್ಯಾದ್ಯಂತ ಹೆಚ್ಚಿಸಿದ್ದರು. ಇಂತಹ ಜನಪ್ರಿಯ ಮತ್ತು ಅನುಭವಿ ಆಡಳಿತಗಾರನಿಗೆ ಸಚಿವ ಸ್ಥಾನ ನೀಡುವುದರಿಂದ ಹೈಕಮಾಂಡ್‌ನ ಕಲ್ಯಾಣ ಯೋಜನೆಗಳು ಜನಸಾಮಾನ್ಯರಿಗೆ ಮತ್ತಷ್ಟು ವೇಗವಾಗಿ ತಲುಪಲಿವೆ.ಪಕ್ಷದ ಬಲವರ್ಧನೆಗೆ ಹೈಕಮಾಂಡ್ ಸಕಾರಾತ್ಮಕ ನಿರ್ಧಾರದ ನಿರೀಕ್ಷೆ: ವಿಜಯನಗರ ಮತ್ತು ಗೋವಿಂದರಾಜನಗರ ಕ್ಷೇತ್ರಗಳ ಮತದಾರರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಸದಾ ಕಾಂಗ್ರೆಸ್ ಕೈ ಬಲಪಡಿಸುತ್ತಾ ಬಂದಿದ್ದಾರೆ. ಮುಂಬರುವ ದಿನಗಳಲ್ಲಿ ಈ ಭಾಗದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಮತ್ತು ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಹೈಕಮಾಂಡ್ ನಾಯಕರು ಶೀಘ್ರದಲ್ಲೇ ಅತ್ಯಂತ ಸಕಾರಾತ್ಮಕ ಮತ್ತು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಪೂರ್ಣ ವಿಶ್ವಾಸ ನಮಗಿದೆ ಎಂದು ಗೋವಿಂದರಾಜನಗರ ಐಎನ್‌ಟಿಯುಸಿ ಅಧ್ಯಕ್ಷರಾದ ರ. ನರಸಿಂಹಮೂರ್ತಿ, ಗೋವಿಂದರಾಜನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಡಿ ಸಿ ಯತೀಶ್ ಹಾಗೂ ಡಾ. ರಾಜಕುಮಾರ್ ವಾರ್ಡಿನ ಜಿಬಿಎ ಚುನಾವಣಾ ಆಕಾಂಕ್ಷಿಗಳು ಜಂಟಿ ಪ್ರಕಟಣೆಯಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು