LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Recipes Tips

ಆನೆ ತಲೆ ಮೇಲೆ ಮಣ್ಣು ಸುರಿದುಕೊಂಡ ಪರಿಸ್ಥಿತಿ ಈಶ್ವರಪ್ಪರದ್ದು

ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಫರ್ಧೆ ಖಚಿತ ಎಂಬುದು ದೃಢವಾಗಿದೆ. ನಿನ್ನೆ ದೆಹಲಿಗೆ ತೆರಳಿದ್ದ ಕೆ.ಎಸ್. ಈಶ್ವರಪ್ಪರನ್ನು ಅಮಿತ್ ಶಾ ಭೇಟಿ ಮಾಡದೇ ಇರಲು ಕಾರಣವೇನು? ಎಂಬುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದ್ದು, ಆನೆ ತನ್ನ ತಲೆಯ ಮೇಲೆ ತಾನೇ ಮಣ್ಣು ಹಾಕಿಕೊಳ್ತು ಎಂಬ ಗಾದೆಯ ಮಾತಿನಂತೆ ಈಶ್ವರಪ್ಪರ ರಾಜಕೀಯ ಜೀವನ ಆಗಿ ಹೋಗಿದೆ.

ಇದು ವೆರಿ ಇಂಟರೆಸ್ಟಿಂಗ್ ಸ್ಟೋರಿ.ಕೆ.ಎಸ್.ಈಶ್ವರಪ್ಪ. ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡರಾಗಿದ್ದು, ಅಮಿತ್ ಶಾ ಅವರ ಆಹ್ವಾನದ ಮೇರೆಗೆ ನಿನ್ನೆ ದೆಹಲಿಗೆ ತೆರಳಿದ್ರು. ಅಮಿತ್ ಶಾ ಅವರೇ ಆಹ್ವಾನಿಸಿ, ಅವರೇ ಭೇಟಿಯಾಗದೇ ಇರಲು ಇದೇ ಮಹತ್ವದ ಕಾರಣವಿದೆ ಎಂಬುದು ಇದೀಗ ತಿಳಿದು ಬಂದಿದೆ.
ಅಷ್ಟಕ್ಕೂ ಈಶ್ವರಪ್ಪರ ವಿಚಾರದಲ್ಲಿ ಆಗಿದ್ದೇನು? ಎಂಬುದು ನೋಡುವುದಾದ್ರೆ,

ಕಳೆದೆರಡು ದಿನಗಳ ಹಿಂದೆ ರಾಜ್ಯಕ್ಕೆ ಅಮಿತ್ ಶಾ ಆಗಮಿಸಿದ್ರು. ಅಮಿತ್ ಶಾ ಆಗಮನದ ವೇಳೆ ರಾಜ್ಯದ ವಿವಿಧೆಡೆ ಇದ್ದ ಬಂಡಾಯ ಶಮನಗೊಳಿಸಿದ ಅಮಿತ್ ಶಾ, ಅವರ ಆಗಮನದ ಸಂದರ್ಭದಲ್ಲಿಯೇ ಕೆ.ಎಸ್. ಈಶ್ವರಪ್ಪರಿಗೂ ಕರೆ ಮಾಡಿದ್ದಾರೆ. ದೆಹಲಿಗೆ ಬರುವಂತೆ ಆಹ್ವಾನಿಸಿದ್ದಾರೆ. ಮರುದಿನವೇ ದೆಹಲಿಗೆ ದೌಡಾಯಿಸಿದ ಕೆ.ಎಸ್.ಈಶ್ವರಪ್ಪರನ್ನು ಅಮಿತ್ ಶಾ ಭೇಟಿಯೇ ಮಾಡಿಲ್ಲ.

ನಾನು ನಿಮ್ಮನ್ನು ಭೇಟಿ ಮಾಡುವುದಿಲ್ಲ ಎಂದು ಖಡಕ್ ಆಗಿ ಈಶ್ವರಪ್ಪರಿಗೆ ತಿಳಿಸಿದ್ದಾರೆ. ಇದಕ್ಕೆ ಕಾರಣ ಏನೆಂದರೆ, ಬಳಿಕ ಶಿವಮೊಗ್ಗದಲ್ಲಿ ಈಶ್ವರಪ್ಪ ನಡೆಸಿದ ಒಂದು ಸುದ್ದಿಗೋಷ್ಠಿ. ಆ ಸುದ್ದಿಗೋಷ್ಠಿಯಲ್ಲಿ ಯಾರೇ ಏನೇ ಹೇಳಿದ್ರೂ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಶತಸಿದ್ಧ ಎಂದು ಈಶ್ವರಪ್ಪ ಗುಡುಗಿದ್ರು.

ಈಶ್ವರಪ್ಪರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಅಮಿತ್ ಶಾ, ದೆಹಲಿಗೆ ಈಶ್ವರಪ್ಪ ಹೋಗುತ್ತಿದ್ದಂತೆ ಭೇಟಿ ಮಾಡಲು ಸಾಧ್ಯವೇ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಅಮಿತ್ ಶಾ ರನಡೆಯಿಂದ ಬೇಸರಕ್ಕೊಳಗಾದ ಈಶ್ವರಪ್ಪ, ಸದ್ಯ ಅವರ ಹೇಳಿಕೆಯಿಂದಲೇ ಪೇಚಿಗೆ ಸಿಲುಕಿದ್ದಾರೆ ಎಂಬ ಮಾತು ಚರ್ಚೆಯಾಗುತ್ತಿದೆ.

ಆತುರದಲ್ಲಿ ಆಡಿದ ಆ ಒಂದು ಮಾತಿನಿಂದ ರಾಜಕೀಯವಾಗಿ ಪಕ್ಷದಿಂದ ದೂರವಾಗುವಂತಹ ಪರಿಸ್ಥಿತಿ ನಿರ್ಮಿಸಿದ್ದು, ಆನೆ ತನ್ನ ತಲೆಯ ಮೇಲೆ ತಾನೇ ಮಣ್ಣು ಹಾಕಿಕೊಳ್ತು ಎಂಬಂತಾಗಿದೆ ಈಶ್ವರಪ್ಪರ ರಾಜಕೀಯ ಭವಿಷ್ಯ ಎಂದು ಬಣ್ಣಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು