LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ: ಬೊಮ್ಮಾಯಿ

ಬೆಳಗಾವಿ: ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಸ್ಪಷ್ಟವಾಗಿತ್ತು. ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕ್ ಪರ ಘೋಷಣೆ ಸಂಬಂಧ ಮೂವರ ಬಂಧನ ವಿಚಾರ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇವರ ನಡೆ ಆತಂಕಕ್ಕೆ ಕಾರಣವಾಗಿದೆ. ಎಫ್‍ಎಸ್‍ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ NIA ಎಫ್‍ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ.

ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು. ಪತ್ರಕರ್ತರನ್ನು ಗುರಿ ಮಾಡಿ ಕೊಂಡು ಮಾತನಾಡಿದರು. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ಹಾಗೂ ಅಥಣಿಯಲ್ಲು ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ಸಂಬಂಧ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ನಿರ್ಲಕ್ಷ್ಯ ಮಾಡಿದೆ ಹಳೆಯ ಯೋಜನೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಅಧಿಕಾರಿಗಳು ಮಿಸ್ ಗೈಡ್ ಮಾಡುತ್ತಿದ್ದು ಸಿಎಂ ಇದನ್ನು ಪರಿಶೀಲನೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸುತ್ತಿದ್ದಾರೆ.

ಬೆಳಗಾವಿಯಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಯ ಸಿಟು ಹಂಚಿಕೆ ಬಗ್ಗೆ ಚರ್ಚೆ ಆಗುತ್ತಾ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಯಾವುದೇ ಚರ್ಚೆ ಆಗಲ್ಲ, ದೆಹಲಿಯಲ್ಲಿ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು