LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

"ಮನ ಮೆಚ್ಚುವಂತೆ ಕಾಯಕ ಮಾಡಿದ ತೃಪ್ತಿ ಇದೆ"

ಹನೂರು: ಕಳೆದ ಮೂರೂವರೆ ವರ್ಷಗಳಿಂದ ಅಜ್ಜೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮನ ಮೆಚ್ಚುವಂತೆ ಕಾಯಕ ಮಾಡಿದ ತೃಪ್ತಿ ನನಗಿದೆ ಎಂದು ವರ್ಗಾವಣೆಗೊಂಡ ಶಿಕ್ಷಕ ವೆಂಕಟರಾಜು ತಿಳಿಸಿದರು. ತಾಲ್ಲೂಕಿನ ಅಜ್ಜೀಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದರು.

ನನ್ನ ಸೇವಾ ಅವಧಿಯಲ್ಲಿ ಕಳೆದ ಮೂರೂವರೆ ವರ್ಷ ಅತ್ಯಂತ ಮಹತ್ವದ ಸೇವೆಯಾಗಿದೆ. ಈ ಸೇವೆಯನ್ನು ಮಾಡಲು ಅವಕಾಶ ಮಾಡಿಕೊಟ್ಟ ಎಲ್ಲರಿಗೂ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನಾನು ಇರುವಷ್ಟು ದಿನಗಳ ಕಾಲ ನನ್ನ ಆತ್ಮ ತೃಪ್ತಿಯಂತೆ ನನ್ನ ಕೈಲಾದಷ್ಟು ಪ್ರಾಮಾಣಿಕ ಪ್ರಯತ್ನ ಮಾಡುವುದರ ಮೂಲಕ ಮಕ್ಕಳ ಕಲಿಕೆಗೆ ಮಕ್ಕಳ ಪ್ರಗತಿಗೆ ಹಾಗೂ ಶಾಲೆಯ ಸರ್ವಾಂಗಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಇದರ ಜೊತೆಗೆ ನನ್ನ ಸೇವಾ ಅವಧಿಯಲ್ಲಿ ಗ್ರಾಮಸ್ಥರು ಸಹ ಹೆಚ್ಚಿನ ಸಹಕಾರ ನೀಡುವುದರ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಹಾಗಾಗಿ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಶಾಲಾ ಮುಖ್ಯ ಶಿಕ್ಷಕಿ ಮೇರಿ ಮಾತನಾಡಿ ನಮ್ಮ ಶಾಲೆಯಿಂದ ಬೇರೆ ಶಾಲೆಗೆ ವರ್ಗಾವಣೆಗೊಂಡಿರುವ ಶಿಕ್ಷಕ ವೆಂಕಟರಾಜು ಅತ್ಯಂತ ಪ್ರತಿಭಾನ್ವಿತ ಶಿಕ್ಷಕರಲ್ಲಿ ಒಬ್ಬರು. ನಮ್ಮ ಶಾಲೆ ಪಿಎಂ ಶ್ರೀ ಶಾಲೆಯಾದ ಮೇಲೆ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಇಂತಹ ಬದಲಾವಣೆಗೆ ವೆಂಕಟರಾಜುರವರು ತಮ್ಮ ತನು ಮನ ಎಲ್ಲವನ್ನು ಧಾರೆ ಎರೆದು ಸಾಕಷ್ಟು ಸಹಾಯವನ್ನು ಮಾಡಿದ್ದಾರೆ. ಅಲ್ಲದೇ ನಮ್ಮ ಶಾಲಾ ಮಕ್ಕಳ ಪ್ರವಾಸವನ್ನು ಯಶಸ್ವಿ ಮಾಡಿದ್ದೆವು. ಬಹಳ ಮುಖ್ಯವಾಗಿ ಕಳೆದ ಬಾರಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೂಡ ಅತ್ಯಂತ ವಿಜೃಂಭಣೆಯಿAದ ಆಚರಣೆ ಮಾಡಿದ್ದೆವು. ಇದೆಲ್ಲವೂ ಕೂಡ ಅವರ ಶ್ರಮದಿಂದಲೇ ಸಾಧ್ಯ ವಾಗಿದೆ. ಸಾಕಷ್ಟು ಮಾರ್ಗದರ್ಶನ ಸಹ ಇವರಿಂದ ನಮಗೆ ಸಿಕ್ಕಿದೆ. ಹಾಗಾಗಿ ಇಂದು ವರ್ಗಾವಣೆಗೊಂಡಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದರು.

ಕಣ್ಣೀರಾಕಿದ ಮಕ್ಕಳು: ತಮ್ಮ ನೆಚ್ಚಿನ ಶಿಕ್ಷಕ ಬೇಂದ್ರೆ ವರ್ಗಾವಣೆಗೊಂಡ ಸುದ್ದಿ ತಿಳಿಯುತ್ತಿದ್ದಂತೆ ಪ್ರೀತಿಯ ಶಿಕ್ಷಕರನ್ನು ಅಪ್ಪಿಕೊಂಡು ಮಕ್ಕಳು ಕಣ್ಣೀರು ಹಾಕುತ್ತಿದ್ದ ದೃಶ್ಯ ಜೊತೆಗೆ ಶಿಕ್ಷಕರ ಕಣ್ಣಲ್ಲಿ ಸಹ ಕಂಬನಿ ಮಿಡಿಯಿತು. ಇದೇ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮೇರಿ, ಸಹ ಶಿಕ್ಷಕರಾದ ಕಲ್ಪನಾ, ಮಹದೇವಮ್ಮ, ವಾಸವಿ, ಮಂಗಳಮ್ಮ, ರಮ್ಯಾ, ಶ್ರುತಿ,ಕೊಳಂದೈ ರಾಜು ಹಾಗೂ ಗ್ರಾಮಸ್ಥರಾದ ಕುಮಾರ್, ಸುರೇಶ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು