LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜಗದ್ಗುರು ರೇಣುಕಾಚಾರ್ಯ ಜಯಂತಿ-ಶಿವಗಂಗಾಶ್ರೀ ಪ್ರಶಸ್ತಿ ಪ್ರದಾನ

ನೆಲಮಂಗಲ: ಸಮಾಜದಲ್ಲಿ ಸಮಾನತೆ ಹಾಗೂ ಸರ್ವರಿಗೂ ಹಿತ ಬಯಸುವ ಧರ್ಮ ವೀರಶೈವ ಧರ್ಮವು ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಮಾಜ ಸುಧಾರಿಸುವುದು ಮಠಮಾನ್ಯಗಳಿಂದ ಸಾಧ್ಯ ಎಂದು ಬೆಂಗಳೂರಿನ ವಿಭೂತಿಪುರ ವೀರಸಿಂಹಾಸನ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.

ತಾಲ್ಲೂಕಿನ ಸೋಂಪುರ ಹೋಬಳಿಯ ಶಿವಗಂಗೆಯ ಶ್ರೀಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠದಲ್ಲಿ ನಡೆದ ?ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಮತ್ತು ಶಿವಗಂಗಾ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಧರ್ಮೋಪದೇಶ ನೀಡಿ ಮಾತನಾಡಿದರು.ಸುಮಾರು ವರ್ಷಗಳಿಂದ ಈ ಮಠದಲ್ಲಿ ಅನ್ನ ಅಕ್ಷರ ದಾಸೋಹವನ್ನು ನೀಡುವ ಮೂಲಕ ಸಮಾಜದಲ್ಲಿ ಶಾಂತಿ ನಿರ್ಮಾಣ ಮಾಡಿ ಹಾಗೂ ಶಿವಗಂಗಾಶ್ರೀ ಪ್ರಶಸ್ತಿ ನೀಡುತ್ತಿದೆ.

ಇದರಿಂದ ಅನೇಕ ಸಾಧನೆಗೈದ ಸಾಧಕರನ್ನು ಗುರುತಿಸಲಾಗುತ್ತಿದೆ. ಜಾತಿಜಾತಿಗಳ ಮದ್ಯೆ ವೈಷಮ್ಯ ಬೇಡ, ಮಾನವ ಕುಲ ಒಂದೇ, ದರ್ಮ ದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ಶಿವನ ಇನ್ನೊಂದು ಗುರುತೇ ಶ್ರೀಜಗದ್ಗುರು ರೇಣುಕಾಚಾರ್ಯರು ಎಂದರು.ಶಾಸಕ ಎನ್.ಶ್ರೀನಿವಾಸ್ ಮಾತನಾಡಿ ನಮ್ಮ ಕ್ಷೇತ್ರದಲ್ಲಿರುವ ಅನೇಕ ಮಠಗಳಲ್ಲಿ ಶೈಕ್ಷಣ ಕವಾಗಿ, ಧಾರ್ಮಿಕವಾಗಿ, ದಾಸೋಹವನ್ನು ಮಾಡುತ್ತಿದ್ದು ನಾನು ಈ ಕ್ಷೇತ್ರಕ್ಕೆ ಶಾಸಕನಾಗಿರುವುದು ಪುಣ್ಯ ಎಂದರು.

ಮೇಲಣಗವಿ ಮಠದ ಡಾ.ಶ್ರೀಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಪ್ರಾಸ್ತಾವಿಕವಾಗಿ ಮಾತನಾಡಿ ಸಮಾಜ ಸೇವೆಯನ್ನು ಮಾಡುತ್ತಿರುವ ಹಲವರನ್ನು ಆಯ್ಕೆ ಮಾಡಿ ಗೌರವಿಸಿದ್ದು ಈ ಬಾರಿಯ ಪ್ರಶಸ್ತಿಯನ್ನು ಸಮಾಜಕ್ಕೆ ಸದ್ದಿಲ್ಲದೇ ಸೇವೆ ಮಾಡಿರುವವರಿಗೆ ಪ್ರಧಾನ ಮಾಡಿರುವುದು ಇತಿಹಾಸ ಎಂದರಲ್ಲದೆ ಮುಂದಿನ ವರ್ಷದ `ಶಿವಗಂಗಾ ಶ್ರೀ’ ಪ್ರಶಸ್ತಿಗೆ ನೋಣವಿನಕೆರೆಯ ಶ್ರೀಕಾಡುಸಿದ್ದೇಶ್ವರ ಮಠದ ಸ್ವಾಮಿಗಳಾದ ಶ್ರೀಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳಿಗೆ ನೀಡಲಾಗುತ್ತದೆ ಎಂದು ಘೋಷಿಸಿದರು.

ವೇದಿಕೆಯಲ್ಲಿ ಶಿವಗಂಗಾ ಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ ಎನ್.ಎಸ್.ನಟರಾಜು ಮಾತನಾಡಿ ಜನಾನುರಾಗಿ ಸೇವೆ ಮಾಡಲು ಪ್ರೇರಣೆಯಾಗಿ ಇಂದು ಶ್ರೀಮಠವು ಪ್ರಶಸ್ತಿ ನೀಡಿರುವುದು ನಮಗೆ ಸಾಕಷ್ಟು ಖುಷಿಯನ್ನು ನೀಡಿದ್ದು ಅದಕ್ಕಾಗಿ ಶ್ರೀಮಠಕ್ಕೆ ಅಭಾರಿಯಾಗಿದ್ದೇನೆ ಎಂದರು.ನೆಲಮಂಗಲದ ಲೇಖಕರಾದ ಎಂ.ವಿ.ನೆಗಳೂರರವರ ವಿಚಾರ-ಆಚಾರ-ವಿಹಾರ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಸರ್ಕಾರ ಮತ್ತು ದಾನಿಗಳ ನೆರವಿನಡಿ ನಿರ್ಮಿಸಲಾಗಿರುವ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಲಾಯಿತು.

ವೇದಿಕೆಯಲ್ಲಿ ನೋಣವಿನಕೆರೆಯ ಶ್ರೀಕಾಡುಸಿದ್ದೇಶ್ವರ ಮಠದ ಶ್ರೀಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿ, ಶ್ರೀರಂಗಪಟ್ಟಣದ ತ್ರಿನೇತ್ರ ಮಹಂತ ಶಿವಯೋಗಿಶ್ವರ ಸ್ವಾಮಿಗಳು, ಹೊನ್ನಮ್ಮಗವಿಮಠದ ಶ್ರೀರುದ್ರಮುನಿ ಶಿವಾಚಾರ್ಯ ಸ್ವಾಮೀಜಿ,ಗೊಲ್ಲಹಳ್ಳಿ ಸಿದ್ದರಾಮೇಶ್ವರ ಮಠದ ವಿಭವವಿದ್ಯಾಶಂಕರ ಸ್ವಾಮಿಜಿ, ನೆಲಮಗಲದ ಬಸವಣ್ಣದೇವರ ಮಠದ ಶ್ರೀಸಿದ್ದಲಿಂಗ ಸ್ವಾಮಿಗಳು, ಶನಿವಾರ ಸಂತೆಯ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ಬೆಂಗಳೂರಿನ ಚಂದ್ರಶೇಖರಯ್ಯ, ಮುಂತಾದವರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು