LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಸಿದ್ದರಾಮಯ್ಯನವರು ನಂತರ ಡಿಕೆಶಿ ಸಿಎಂ ಆಗಬೇಕು: ಜಮೀರ್ ಅಹ್ಮದ್ ಖಾನ್

ಕೋಲಾರ: ಸಿಎಂ ಸಿದ್ದರಾಮಯ್ಯ 2028 ರವರೆಗೆ ಪೂರ್ಣ ಅವಧಿಗೆ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಪುನರುಚ್ಛರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ನಂತರವೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.

ಕೋಲಾರದ ಶ್ರೀನಿವಾಸಪುರದ ಲಕ್ಷ್ಮಿಪುರದಲ್ಲಿ ನೂರಾನಿ ಮಸೀದಿಯನ್ನು ಉದ್ಘಾಟಿಸಲು ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಾವು ಯಾವಾಗಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಸಿದ್ದರಾಮಯ್ಯ ನಂತರವೇ ಅವರು ಆಗಬೇಕು, ಅದು ನಮ್ಮ ಬೇಡಿಕೆ ಎಂದರು.

ಡಿ ಕೆ ಶಿವಕುಮಾರ್ ಅವರ ಕಾಂಗ್ರೆಸ್ ನಿಷ್ಠೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಶಿವಕುಮಾರ್ ಅವರ ರಕ್ತದಲ್ಲಿ ಹರಿಯುತ್ತದೆ. ನಮ್ಮಲ್ಲಿ ಹಲವರು ಬೇರೆ ಬೇರೆ ಪಕ್ಷಗಳಿಂದ ಬಂದಿದ್ದೇವೆ, ಆದರೆ ಕಾಂಗ್ರೆಸ್ ಡಿ ಕೆ ಶಿವಕುಮಾರ್ ಅವರ ರಕ್ತದಲ್ಲಿದೆ. ರಕ್ತವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಾಯಕತ್ವ ಬದಲಾವಣೆಯ ಬಗ್ಗೆ ಪದೇ ಪದೇ ವದಂತಿಗಳು ಕೇಳಿಬರುತ್ತಿರುವ ಬಗ್ಗೆ ಕೇಳಿದಾಗ, ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಮತ್ತು ಈಗ ಜನವರಿ ಸಂಕ್ರಾಂತಿ ಬಗ್ಗೆ ಮಾತನಾಡಿದವರು ಏನೂ ಆಗುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಹೈಕಮಾಂಡ್ ಸಿದ್ದರಾಮಯ್ಯ ಜೊತೆಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು