LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುವುದೇ...?

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ ರೀತಿಯಲ್ಲೇ ಮುಂದಿನ ಚುನಾವಣೆಗಳಲ್ಲು ಮೈತ್ರಿ ಮುಂದುವರಿಸುವರೇ ಎಂಬ ಚರ್ಚೆ ಈಗ ರಾಜಕೀಯ ವಲಯದಲ್ಲಿ ನಡೆದಿದೆ.
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಬಿಜೆಪಿ ಸ್ಥಳೀಯ ಸಂಸ್ಥತೆ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಚುನಾವಣೆ ಎದುರಿಸುವ ಬಗ್ಗೆ ಹೇಳಿಕೆಗಳು ಕೇಳಿಬಂದಿದ್ದವು.
ಸ್ವತಃ ಜೆಡಿಎಸ್ ವರಿಷ್ಠದೇವೇಗೌಡ ಅವರೇ ಈ ಹೇಳಿಕೆ ನೀಡಿದ್ದಾರೆ ಎನ್ನಲ್ಲಾಗಿದೆ.
ಇದೀಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಎರಡು ಪಕ್ಷದ ಮೈತ್ರಿ ಮುಂದುವರಿಯುವುದೇ ಎಂಬ ಚರ್ಚೆ ಜೋರಾಗಿ ಕೇಳಿಬರುತ್ತಿದೆ.
ರಾಮನಗರದಲ್ಲಿ ನಿನ್ನೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರುವುದು ಅನಿವಾರ್ಯ. ಅವರು ಈಗಾಗಲೇ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ರಾಜ್ಯದ ಬಹುತೇಕ ಕಡೆ ಜನರು ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದನ್ನು ಇಚ್ಛೆಪಡುತ್ತಿದ್ದಾರೆ. ಹಾಗಾಗಿ ಕುಮಾರಸ್ವಾಮಿ ರಾಜ್ಯರಾಜಕಾರಣಕ್ಕೆ ಬರುವುದು ನೂರಕ್ಕೆ ನೂರು ಭಾಗ ಖಚಿತ ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.
ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಮರಳಿದ್ದೇ ಆಗಿದ್ದಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವರೇ ಜೆಡಿಎಸ್ ಬಿಜೆಪಿ ಮೈತ್ರಿ ಮುಂದುವರಿಯುವುದೇ ಎಂಬ ಅನೇಕ ಪಕ್ಷಗಳು ಉದ್ಭವವಾಗುತ್ತಿವೆ.
ಕುಮಾರಸ್ವಾಮಿ ರಾಜ್ಯರಾಜಕಾರಣಕ್ಕೆ ಮರಳಿ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ ಆದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಯೂ ಎದುರಾಗಲಿದೆ. ೨ಪಕ್ಷದ ಮೈತ್ರಿ ಮುಂದುವರಿದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಜೆಡಿಎಸ್ ಬಿಜೆಪಿಯಲ್ಲಿ ಚರ್ಚೆಯಾಗಿ ನಿರ್ಧಾರಕ್ಕೆ ಬರಬೇಕಿದೆ.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸಹ ಮೈತ್ರಿ ಮುಂದುವರಿದರೆ ಸ್ಥಾನ ಹೊಂದಾಣಿಕೆ ಬಗ್ಗೆ ಕೆಲ ಕ್ಷೇತ್ರಗಳಲ್ಲಿ ಅಪಸ್ವರ ಕೇಳಿಬರುತ್ತಿದೆ.
ಹೀಗಾಗಿ ಮೈತ್ರಿ ಮುಂದುವರಿಯುತ್ತದೆ ಇಲ್ಲವೋ ಎಂಬುದರ ಬಗ್ಗೆ ಎರಡು ಪಕ್ಷಗಳ ಕಾರ್ಯಕರ್ತರು ಮುಖಂಡರಲ್ಲಿ ಜಿಜ್ಞಾಸೆ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು