ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಯ ವಿರೋಧವಾಗಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ, ಜೆಪಿ ಭವನದ ಗೋಡೆ ಹಾಗೂ ಗೇಟ್ಗಳಿಗೆ ಆಕ್ಷೇಪಾರ್ಹ ಪೋಸ್ಟರ್ಗಳನ್ನು ಅಂಟಿಸುವ ಮೂಲಕ ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿ `ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ' ಎಂದು ಲೇವಡಿ ಮಾಡಿರುವ ಪೋಸ್ಟರ್ಗಳು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿವೆ. ಒಕ್ಕಲಿಗ ಸಮಾಜದ ಮುಖಂಡರು ಅಧಿಕಾರಕ್ಕೆ ಬಂದಾಗಲೆಲ್ಲಾ ಕುಮಾರಸ್ವಾಮಿ ಅವರಿಗೆ ಹೊಟ್ಟೆಕಿಚ್ಚು ಶುರುವಾಗುತ್ತದೆ ಎಂಬ ಬರಹದೊಂದಿಗೆ ಅವರ ಫೋಟೋವನ್ನು ಪೋಸ್ಟರ್ನಲ್ಲಿ ಮುದ್ರಿಸಲಾಗಿದೆ.