LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವೈಭವದ ಧರ್ಮರಾಯಸ್ವಾಮಿ ದ್ರೌಪದಮ್ಮನವರ ಕರಗ ಮಹೋತ್ಸವ

ಹೊಸಕೋಟೆ: ನಗರದಲ್ಲಿ ಗುರುವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪದಮ್ಮನವರ ಕರಗ ಮಹೋತ್ಸವ ವೈಭವದಿಂದ ನಡೆಯಿತು.ಮೇಲಿನಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದ್ರೌಪದಮ್ಮನವರ ದೇವಾಲಯದಿಂದ ರಾತ್ರಿ ಸುಮಾರು 2 ಗಂಟೆಗೆ ಹೊರಟ ಕರಗ ಕೆ.ಆರ್.ಬಡಾವಣೆ,

ವಿಶ್ವೇಶ್ವರಯ್ಯ ಬಡಾವಣೆಯ ಪಟಾಲಮ್ಮ ದೇವಾಲಯ, ಗಂಗಮ್ಮದೇವಿ ದೇವಾಲಯಗಳಿಗೆ ತೆರಳಿ ಪೂಜೆ ಸ್ವೀಕರಿಸಿ, ತಮ್ಮೇಗೌಡ ಬಡಾವಣೆ, ಸ್ವಾಮಿ ವಿವೇಕಾನಂದನಗರ, ರಾಯಸಿಂಗ್ ಬಡಾವಣೆ, ಕೋಟೆ, ಬ್ರಾಹ್ಮಣರ ಬೀದಿ, ಗಾಣಿಗರಪೇಟೆ, ಕುರುಬರಪೇಟೆ ಮೂಲಕ ದೇವಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಸೇರಿತು. ಮಾರ್ಗದುದ್ದಕ್ಕೂ ಭಕ್ತಾಧಿಗಳಿಂದ ಕರಗಕ್ಕೆ ಪೂಜೆ ನೆರವೇರಿಸಲಾಯಿತು.

ಎರಡನೇ ಬಾರಿಗೆ ಕರಗವನ್ನು ಟಿ.ಶೈಲೇಂದ್ರ ಯಶಸ್ವಿಯಾಗಿ ಹೊತ್ತು ಸಾರ್ವಜನಿಕರಿಂದ ಪ್ರಶಂಸೆ ಪಡೆದರು.ಕರಗವನ್ನು ವೀಕ್ಷಿಸಲು ನಗರವಷ್ಟೇ ಅಲ್ಲದೆ ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಗ್ರಾಮಸ್ಥರು ಸಹ ಆಗಮಿಸಿದ್ದರು.

ದೇವಾಲಯದಲ್ಲಿ ನಡೆದ ಪೂಜಾ ಕಾರ್ಯಕ್ರಮಗಳಲ್ಲಿ ಶಾಸಕ ಶರತ್ ಬಚ್ಚೇಗೌಡ, ದೇವಾಲಯ ಸಮಿತಿ ಅಧ್ಯಕ್ಷ ಎಚ್.ಜೆ.ಶ್ರೀನಿವಾಸ್, ಉಪಾಧ್ಯಕ್ಷ ಉಪಾಧ್ಯಕ್ಷ ಯಜಮಾನ್ ರಾಜಣ್ಣ, ಕಾರ್ಯದರ್ಶಿ ಎಚ್.ಎ.ಕೃಷ್ಣಪ್ಪ, ಸಹಕಾರ್ಯದರ್ಶಿ ಗಣಚಾರಿ ಮುನಿಶಾಮಣ್ಣ, ಖಜಾಂಚಿ ಎಚ್.ಕೆ.ಮೋಹನ್, ಧರ್ಮದರ್ಶಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು