LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜವಾಬ್ದಾರಿಯುತ AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿಕೆಶಿ

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು."ಕರ್ನಾಟಕವನ್ನು `ಎಐ-ನೇಟಿವ್' ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಸಹಯೋಗವನ್ನು ಬೆಳೆಸಲು ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು" ಎಂದು ಹೇಳಿದರು."ಎಐ-ಸಹಾಯದ ಬೋಧನೆಯ ಮೂಲಕ ಶಿಕ್ಷಣ ಕ್ಷೇತ್ರ, ರೋಗಗಳ ಮುಂಚಿತ ಪತ್ತೆ ಮತ್ತು ಉತ್ತಮ ವೈದ್ಯಕೀಯ ಬೆಂಬಲದ ಮೂಲಕ ಆರೋಗ್ಯ ಕ್ಷೇತ್ರ, ರೈತರಿಗೆ ಎಐ-ಚಾಲಿತ ಸಲಹಾ ಸೇವೆಗಳ ಮೂಲಕ ಕೃಷಿ ಕ್ಷೇತ್ರ, ವೇಗದ ಮತ್ತು ಜನಸ್ನೇಹಿ ವಿತರಣೆಯ ಮೂಲಕ ಸರ್ಕಾರಿ ಸೇವೆಗಳು, ಎಐ ಪರಿಕರಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಸಣ್ಣ ಉದ್ಯಮಗಳಲ್ಲಿ ಬದಲಾವಣೆ ತರಲಾಗುವುದು" ಎಂದು ತಿಳಿಸಿದರು."ಭಾರತದ ನಾವೀನ್ಯತೆಯ ರಾಜಧಾನಿ ಮತ್ತು ವಿಶ್ವದ ಅತ್ಯಂತ ರೋಮಾಂಚಕ ತಂತ್ರಜ್ಞಾನ ಪರಿಸರ ವ್ಯವಸ್ಥೆಗಳಲ್ಲಿ ಒಂದಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮಕ್ಕೆ ನಿಮ್ಮನ್ನು ಸ್ವಾಗತಿಸಲು ನಾನು ಅತ್ಯಂತ ಹೆಮ್ಮೆಪಡುತ್ತೇನೆ. ಇಂತಹ ಒಂದು ಕಾರ್ಯಕ್ರಮವು ಇಷ್ಟು ಸಹಜವಾಗಿ ಮೂಡಿಬರಲು ವಿಶ್ವದಲ್ಲೇ ಕೆಲವೇ ಕೆಲವು ಸ್ಥಳಗಳಿವೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಎಂಬುದು ದೈನಂದಿನ ಜೀವನದ ಭಾಗವಾಗಿದೆ" ಎಂದರು."ಪ್ರತಿ ಪೀಳಿಗೆಯೂ ಮಾನವ ನಾಗರಿಕತೆಯ ಹಾದಿಯನ್ನೇ ಬದಲಾಯಿಸುವ ಒಂದು ತಂತ್ರಜ್ಞಾನವನ್ನು ಬಳುವಳಿಯಾಗಿ ಪಡೆಯುತ್ತದೆ. ಸ್ಟೀಮ್ ಇಂಜಿನ್ ಕೈಗಾರಿಕಾ ರಂಗವನ್ನು ಕ್ರಾಂತಿಗೊಳಿಸಿತು. ವಿದ್ಯುತ್ ನಗರಗಳನ್ನು ಮಾರ್ಪಡಿಸಿತು. ಇಂಟರ್ನೆಟ್ ಸಂಪರ್ಕ ಮಾಧ್ಯಮವನ್ನೇ ಬದಲಾಯಿಸಿತು. ಮೊಬೈಲ್ ತಂತ್ರಜ್ಞಾನವು ಎಲ್ಲವನ್ನೂ ಸುಲಭವಾಗಿ ಲಭ್ಯವಾಗುವಂತೆ ಮಾಡಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು