LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಜನತಾ ಸಿಟಿ'ಯಲ್ಲಿ 'ಕೋಟಿ' ಜೀವನ ನಡೆಸುತ್ತಿದ್ದಾನೆ

ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ 'ಜನತಾ ಸಿಟಿ'ಯಲ್ಲಿ 'ಕೋಟಿ' ಜೀವನ ನಡೆಸುತ್ತಿದ್ದಾನೆ. ಇದು ಒಂದು ಭ್ರಷ್ಟ ನಗರವೂ ಹೌದು. ಕೋಟಿ ಸಿನಿಮಾದ ಈ ನಗರದ ಬಗೆಗಿನ ಹಾಡು 'ಜನತಾ ಸಿಟಿ' ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ.

ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು.ಈ ಹಾಡಿನ ಸಂಯೋಜಕರಾದ ವಾಸುಕಿ ವೈಭವ್ "ಕೋಟಿ ಜನತಾಸಿಟಿಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ಎಕ್ಸೈಂಟಿಂಗ್ ಮತ್ತು ಚಾಲೆಂಜಿಂಗ್ ಆಗಿತ್ತು. ಸಖತ್ ಮಜ ಮಾಡಿದೀನಿ ಈ ಹಾಡನ್ನು ಮಾಡುವ ಪ್ರಕ್ರಿಯೆಯಲ್ಲಿ" ಎಂದು ಹೇಳಿದರು.

ಕೋಟಿ ಸಿನಿಮಾದಲ್ಲಿ 'ಜನತಾ ಸಿಟಿ' ಹಾಡು ನನಗೆ ತುಂಬಾ ಇಷ್ಟದ ಹಾಡು. ನಾನು ಒಂದು ಸಣ್ಣ ಹಳ್ಳಿಯಿಂದ ಬೆಂಗಳೂರಿಗೆ ಬಂದವನು. ಮಹಾನಗರಗಳಿಗೆ ಏನೋ ಸೆಳೆಯುವ ಗುಣ. ಈ ಹಾಡು ಮಹಾನಗರಗಳಲ್ಲಿ ಬದುಕುವ ಎಲ್ಲರಿಗೂ ತುಂಬಾ ರಿಲೇಟೆಬಲ್ ಆಗಲಿದೆ " ಎಂದು ಕೋಟಿಯ ನಿರ್ದೇಶಕ ಪರಮ್ ಅಭಿಪ್ರಾಯ ಪಟ್ಟರು.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್ ಶೆಟ್ಟಿಯವರು ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‍ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.
ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್ ಅವರು ಬರೆದು ನಿರ್ದೇಶಿಸಿದ್ದಾರೆ. ?ಕೋಟಿ? ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು