LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜನವರಿ 14ರಿಂದ ಲಾಲ್​​ಬಾಗ್​ಫ್ಲವರ್ ಶೋ

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.14 ರಿಂದ 26ರವರೆಗೆ 219ನೇ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.

ತೋಟಗಾರಿಕೆ ಇಲಾಖೆ ಈ ಬಾರಿ ರಾಷ್ಟ್ರಕವಿ ಕುವೆಂಪು ಅವರ ಪುತ್ರ, ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಕುರಿತ 'ತೇಜಸ್ವಿ ವಿಸ್ಮಯ' ವಿಷಯ ಆಧರಿಸಿದ ಈ ಪ್ರದರ್ಶನದಲ್ಲಿ ಗಾಜಿನ ಮನೆಯಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ನೆಚ್ಚಿನ ಕಾಡನ್ನು ನಿರ್ಮಿಸುತ್ತಿದೆ.

ಫಲಪುಷ್ಪ ಪ್ರದರ್ಶನಕ್ಕೆ ತಮಿಳುನಾಡು, ಕೇರಳ, ಮಹಾರಾಷ್ಟ, ಡಾರ್ಜಿಲಿಂಗ್, ವಯನಾಡು ಕಡೆಯಿಂದ ಹೂಗಳು ಬಂದಿದ್ದು, 95ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ 35 ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕಾರ ಮಾಡಲಾಗುತ್ತಿದೆ. ಈ ಬಾರಿ ಲಾಲ್​ಬಾಗ್​ನಲ್ಲಿ ಬೆಳೆದಿರುವ 27 ಲಕ್ಷ ಹೂ ಬಳಕೆ ಮಾಡಲಾಗುತ್ತಿದೆ.

ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಈ ಕುರಿತು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಆರ್. ಗಿರೀಶ್, ಈ ಬಾರಿ, ಫಲಪಷ್ಟ ಪ್ರದರ್ಶನಕ್ಕೆ 3.20 ಕೋಟಿ ರೂ.ಗಿಂತ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದ್ದು, ಈ ಬಾರಿ 12 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.14ರಂದು ಸಂಜೆ 4 ಗಂಟೆಗೆ ಪ್ರದರ್ಶನಕ್ಕೆ ಚಾಲನೆ ನೀಡುವರು, ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ರಾಮ ಲಿಂಗಾರೆಡ್ಡಿ, ಶಾಸಕ ಉದಯ್‌ ಬಿ.ಗರುಡಾಚಾರ್ ಸೇರಿದಂತೆ ಇತರರು ಪಾಲ್ಗೊಳ್ಳುವರು ಎಂದು ಹೇಳಿದರು.

ತೋಟಗಾರಿಕೆ ಇಲಾಖೆ (ಪಾರ್ಕ್ಸ್ ಅಂಡ್ ಗಾರ್ಡನ್ಸ್ ) ಅಪರ ನಿರ್ದೇಶಕ ಡಾ.ಎಂ. ಜಗದೀಶ್ ಮಾತನಾಡಿ, ತೇಜಸ್ವಿ ಅವರ ಕಾದಂಬರಿ, ಕಥೆಗಳಲ್ಲಿ ಕಂಡು ಬರುವ ಕಾಡಿನ ಮಾದರಿಯನ್ನು ಗಾಜಿನ ಮನೆಯಲ್ಲಿ ನಿರ್ಮಿಸಲಾಗಿದೆ. 45/45 ಅಡಿ ವ್ಯಾಸದ 25 ಅಡಿ ಎತ್ತರದ ಬೃಹತ್ ಬೆಟ್ಟ, ಜಲಪಾತದ ಮಾದರಿ ಇರಲಿದ್ದು ಅದರ ತಪ್ಪಲಿನಲ್ಲಿ ತೇಜಸ್ವಿ ಅವರ ಮೂಡಿಗೆರೆಯ ಹ್ಯಾಂಡ್‌ಪೋಸ್ಟ್ ಸಮೀಪವಿರುವ 'ನಿರುತ್ತರ' ಮನೆಯ ಪುಷ್ಪಮಾದರಿ ನಿರ್ಮಾಣಗೊಳ್ಳಲಿದೆ. ಅದರ ಮುಂದೆ ನಾಲ್ಕು ಅಡಿ ಎತ್ತರದ ತೇಜಸ್ವಿ- ರಾಜೇಶ್ವರಿಯವರ ಪ್ರತಿಮೆಗಳು ಇರಲಿವೆ ಎಂದು ಮಾಹಿತಿ ನೀಡಿದರು.

ತೇಜಸ್ವಿಯವರ ಸ್ಕೂಟರ್ ಮತ್ತು ಕರ್ವಾಲೋ ಕಾದಂಬರಿಯಲ್ಲಿ ಬರುವ ಕಿವಿ ನಾಯಿ, ಕರಿಯಪ್ಪ, ಮಂದಣ್ಣ ತೇಜಸ್ವಿಯವರ ಜೀರುಂಡೆ, ಏರೋಪ್ಲೇನ್ ಚಿಟ್ಟೆ ಮೊದಲಾದ ಪ್ರಾಣಿ ಪಕ್ಷಿ-ಕೀಟಗಳ ಪುಷ್ಪ ಮಾದರಿಗಳು ಇರಲಿವೆ. ಬೆಟ್ಟದ ಬಲಭಾಗದ ತಪ್ಪಲಿ ನಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಕಟ್ಟ ಡದ ಪುಷ್ಪ ಮಾದರಿ ಇತ್ಯಾದಿಗಳು ಇರಲಿವೆ ಎಂದು ಹೇಳಿದರು.

ನಿರುತ್ತರ ಮನೆ, ತೇಜಸ್ವಿ ಪ್ರತಿಷ್ಠಾನದ ಕಟ್ಟಡ, ಜೇನುಹುಳ, ಬಣ್ಣದ ಚಿಟ್ಟೆಗಳು, ಕಪ್ಪೆ, ಜೀರುಂಡೆ ಮತ್ತು ಬಸವನ ಹುಳಗಳ ಸೇರಿದಂತೆ ಹಲವು ಪುಷ್ಪಾ ಕೃತಿಗಳನ್ನು ನಿರ್ಮಿಸಲು ಒಂದು ಬಾರಿಗೆ 4.50 ಲಕ್ಷ ದಂತೆ ಎರಡು ಬಾರಿಗೆ ಒಂಬತ್ತು ಲಕ್ಷ ಹೂವುಗಳನ್ನು ಬಳಸಲಾಗುವುದು ಎಂದು ತಿಳಿಸಿದರು.

ಜ.15ರಿಂದ 26ರವರೆಗೆ ಲಾಲ್‌ಬಾಗ್‌ನಲ್ಲಿ ನಿತ್ಯವೂ ಸಂಜೆ 5 ರಿಂದ 7ರವರೆಗೆ ಮಳಿಗೆಗಳ ಪಕ್ಕದ ಹುಲ್ಲುಹಾಸಿನ ಮೇಲೆ ನನ್ನ ತೇಜಸ್ವಿ ಕರ್ವಾಲೊ, ಜುಗಾರಿ ಕ್ರಾಸ್, ಕೃಷ್ಣ ಗೌಡನ ಆನೆ, ಯಮಳ ಪ್ರಶ್ನೆ ಸೇರಿದಂತೆ ತೇಜಸ್ವಿಯ ವರ ಪ್ರಸಿದ್ದ ನಾಟಕಗಳು, ಸಿನಿಮಾ-ಸಾಹಿತ್ಯ ಕುರಿತಾ ದ ಸಂವಾದಗಳು ನಡೆಯಲಿವೆ. ಜತೆಗೆ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆಯೂ ಇರಲಿದೆ.

ಇದೇ ಮೊದಲ ಬಾರಿಗೆ ಪರಿಸರ ಮತ್ತು ಕಾಡು ಪ್ರಾಣಿಗಳ ಕುರಿತಾದ ಎರಡು ಬೃಹತ್‌ ಸ್ತಬ್ದ ಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಒಂದರಲ್ಲಿ ಆನೆ, ಮತ್ತೊಂದರಲ್ಲಿ ಮಂಗಟೆಹಕ್ಕಿ (ಹಾರ್ನ್ ಬಿಲ್) ಪ್ರತಿಕೃತಿ ಇರಲಿದೆ. ಜೊತೆಗೆ ವಿವಿಧ ಪ್ರಾಣಿ, ಪಕ್ಷಿಗಳ ಸಣ್ಣ, ಪುಟ್ಟವನ್ಯ ಪ್ರಾಣಿ, ಪಕ್ಷಿಗಳ ಪ್ರತಿಕೃತಿಗಳು ಚಲನವಲನದಿಂದ ಕೂಡಿರಲಿದ್ದು, ಇವು ನೋಡುಗರಿಗೆ ಖುಷಿ ಕೊಡಲಿವೆ.

ಫ್ಲವರ್ ಶೋಗೆ ಟಿಕೆಟ್​ ದರ ನಿಗದಿ ಮಾಡಲಾಗಿದ್ದು, ವಯಸ್ಕರಿಗೆ ಸಾಮಾನ್ಯ ದಿನಗಳಲ್ಲಿ 80 ರೂ ಹಾಗೂ ರಜೆ ದಿನಗಳಲ್ಲಿ 100 ರೂ ಟಿಕೆಟ್ ದರ ಇರಲಿದೆ. ಇನ್ನು ಮಕ್ಕಳಿಗೆ 30 ರೂ, 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ.

ಶಾಲಾ ಸಮವಸ್ತ್ರಧರಿಸಿ ಬರುವ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪುಷ್ಪ ಪ್ರದರ್ಶನಕ್ಕೆ ಉಚಿತ ಪ್ರವೇಶ ಇರಲಿದೆ. ಸರ್ಕಾರಿ ರಜಾ ದಿನಗಳಲ್ಲಿ ಇದು ಅನ್ವಯ ಆಗುವುದಿಲ್ಲ.

ಲಾಲ್‌ಬಾಗ್​​‌ನ ಎಲ್ಲ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟಿಂಗ್ Online payment, Online advance booking ಹಾಗೂ Cash Pay ಮೂಲಕ ಪ್ರವೇಶ ಟಿಕೆಟ್‌ಗಳನ್ನು ಕೊಳ್ಳಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಲ್ಲದೆ, Online ನಲ್ಲಿಯೂ ಟಿಕೆಟ್ ಬುಕ್ ಮಾಡಬಹುದು.

ಡಬಲ್ ರೋಡ್ ಶಾಂತಿನಗರ ಬಸ್ ನಿಲ್ದಾಣದ ಬಳಿ ಇರುವ ಬಹುಮಹಡಿ ವಾಹನ ನಿಲುಗಡೆ, ಹಾಪ್‌ಕಾಮ್ಸ್ ಆವರಣ ಹಾಗೂ ಜೆ.ಸಿ ರಸ್ತೆಯಲ್ಲಿನ ಬಿಬಿಎಂಪಿ ಬಹುಮಹಡಿ ವಾಹನ ನಿಲುಗಡೆ, ದ್ವಿಚಕ್ರ ವಾಹನದಲ್ಲಿ ಬರುವವರು ಲಾಲ್ ಬಾಗ್ ಮುಖ್ಯದ್ವಾರದ ಬಳಿ ಇರುವ ಅಲ್ ಅಮೀನ್ ಕಾಲೇಜು ಆವರಣದ ನಿಲ್ದಾಣ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು