LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

"ಅಂಬೇಡ್ಕರ್ ಶಾಲೆಯಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮ"

ಚಿಂತಾಮಣಿ: ತಾಲೂಕಿನ ಕೈವಾರದಲ್ಲಿ ಬೆಂಗಳೂರಿನ ರಾಮಯ್ಯ ಕಾನೂನು ಮಹಾವಿದ್ಯಾಲಯ ಮತ್ತು ಅಂಬೇಡ್ಕರ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷಿಣಿ ಎಸ್ ಎಂ ರೋಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಎಲ್ಲರೂ ಕಾನೂನಿನ ತಿಳುವಳಿಕೆಯನ್ನು ಹೊಂದಿರಬೇಕು ಮತ್ತು ನಮ್ಮ ದಿನನಿತ್ಯದ ಕಾರ್ಯಗಳಿಗೆ ಅನ್ವಯ ವಾಗುವ ಸಾಮಾನ್ಯ ಕಾನೂನುಗಳನ್ನು ತಿಳಿದುಕೊಂಡು ಅವುಗಳಿಗೆ ವಿಧೇಯರಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಶಿಕ್ಷಕ ಸುರೇಶ ಮಾತನಾಡಿ ಕಾನೂನಿನ ಮುಂದೆ ಎಲ್ಲರೂ ಸಮಾನರು ಅಂಬೇಡ್ಕರ್ ಅವರು ಬರೆದ ಸಂವಿಧಾನದಿAದ ಬಡವ ಶ್ರೀಮಂತ ಮೇಲು-ಕೀಳು ಎಂಬ ಭೇದಭಾವ ಇಲ್ಲದೆ ಎಲ್ಲರೂ ಸಮಾನರಾಗಿ ಬಾಳಲು ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾದ ಮಸ್ತೇನಹಳ್ಳಿ ಪಿ ಡಿ ಓ ಕವಿತ ಅವರು ಮಾತನಾಡಿದರು. ರಾಮಯ್ಯ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡಾ. ಉಮಾ ಮಹೇಶ್ ಮತ್ತು ಪ್ರೊ ಸತ್ಯ ನಾರಾಯಣ ಅವರ ಮಾರ್ಗದರ್ಶನದಲ್ಲಿ ಕಾನೂನು ವಿದ್ಯಾರ್ಥಿಗಳು ಪೋಕ್ಸೋ ಕಾಯ್ದೆ, ಬಾಲಕಾರ್ಮಿಕರ ಪದ್ಧತಿ, ಬಾಲ್ಯ ವಿವಾಹ ಇನ್ನು ಮುಂತಾದ ಕಾಯ್ದೆಗಳ ಬಗ್ಗೆ ಕಿರು ನಾಟಕಗಳನ್ನು ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸಿದರು ಮತ್ತು ಆ ಕಾನೂನುಗಳನ್ನು ಉಲ್ಲಂಘನೆ ಆದರೆ ಏನು ಶಿಕ್ಷೆ ಇದೆ ಎಂಬುದರ ಬಗ್ಗೆ ಮನ ಮುಟ್ಟುವ ಹಾಗೆ ತಿಳಿಸಿಕೊಟ್ಟರು.

ಕಾನೂನು ವಿದ್ಯಾರ್ಥಿಗಳಾದ ಕುಶಾಲ್ ನಾಯ್ಡು, ನಿಶ್ಚಿತ್, ನಿಹಾರಿಕಾ, ಸಾಹಿಲ್ ಹಾಗೂ ಶಾಲೆಯ ಶಿಕ್ಷಕರ ಲೋಕೇಶಪ್ಪ, ಧನುಷ್ ಕುಮಾರ, ಉಮೇಶ, ರತ್ನಾ, ವೆಂಕಟೇಶ್ ಬಾಬು, ಶ್ರೀಧರ್ ಹಿರೇಮಠ ಉಪಸ್ಥಿತರಿದ್ದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು