LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಕಸ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಿ’

ಆನೇಕಲ್: ಕೊಡತಿ ಗ್ರಾಮ ಪಂಚಾಯಿತಿಯನ್ನು ಕಸ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಿ ಎಂದು ಕೊಡತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೃಷ್ಣವೇಣಿರವರು ತಿಳಿಸಿದರು.ಅವರು ಕಾಚಮಾರನಹಳ್ಳಿ ರಸ್ತೆಯಲ್ಲಿರುವ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕೊಡತಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು,

ಮುಖ್ಯವಾಗಿ ಮನೆಗಳಲ್ಲಿ ಪ್ಲಾಸಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಹಾಗೂ ಶೇಖರಣೆ ಆದ ಕಸವನ್ನು ರಸ್ತೆ ಬದಿಗಳಲ್ಲಿ ಹಾಕದೆ ನೇರವಾಗಿ ಕಸದ ವಾಹನಗಳಿಗೆ ನೀಡಿ ಎಂದು ಹೇಳಿದರು.ಕೊಡತಿ ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣಸ್ವಾಮಿ (ಬಾಬು) ಮಾತನಾಡಿ ಕೊಡತಿ ಗ್ರಾಮ ಪಂಚಾಯಿತಿಯನ್ನು ಕಸ ಮುಕ್ತ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡುವ ಉದ್ದೇಶದಿಂದ ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಲು ಮನೆಗಳಿಗೆ ಪಂಚಾಯಿತಿ ವತಿಯಿಂದ ಕಸದ ಬುಟ್ಟಿಗಳನ್ನು ನೀಡಿದ್ದೇವೆ,

ಜೊತೆಗೆ ಪ್ರತಿ ದಿನ ಕಸವನ್ನು ತೆಗೆದುಕೊಂಡು ಹೋಗಲು ಜನರ ಮನೆ ಬಾಗಿಲಿಗೆ ಕಸದ ವಾಹನಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಸಾರ್ವಜನಿಕರು ಹಾಗೂ ಬಡಾವಣೆಯ ನಿವಾಸಿಗಳು ತಮ್ಮ ಮನೆಗಳಲ್ಲಿ ಶೇಖರಣೆ ವಾಗುವ ಕಸವನ್ನು ರಸ್ತೆ ಬದಿಗಳಲ್ಲಿ ಹಾಕುವುದರಿಂದ ಸಾಂಕ್ರಾಮಿಕ ರೋಗಗಳು ಹರಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ತಪ್ಪದೆ ಕಸವನ್ನು ಕಸದ ವಾಹನಗಳಿಗೆ ನೀಡಿ ಕಸಮುಕ್ತ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡಲು ಸಹಕರಿಸಿ ಎಂದರು. ಈಗಾಗಲೇ ಬ್ಲಾಕ್ ಸ್ಪಾಟ್ ಗಳನ್ನು ಗುರ್ತಿಸಿ ಕಸ ಹಾಕುವವರ ಮೇಲೆ 500 ರೂಪಾಯಿಂದ 5 ಸಾವಿರ ವರೆಗೆ ದಂಡ ಕೂಡ ಹಾಕಲಾಗಿದೆ ಎಂದರು.

ಸೂಲಿ ಕುಂಟೆ ಗ್ರಾಮ ಬಳಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಾಪಿಸಲು ಜಾಗವನ್ನು ಗುರುತಿಸಿದ್ದೇವೆ, ಮುಂದಿನ ದಿನಗಳಲ್ಲಿ ಕಸದಿಂದ ರಸ ತೆಗೆದು ಸ್ವಾವಲಂಬಿ ಪಂಚಾಯಿತಿಯಾಗಿ ನಮ್ಮ ಕೊಡತಿ ಗ್ರಾಮ ಪಂಚಾಯಿತಿ ಹೊರ ಹೊಮ್ಮುತ್ತದೆ ಎಂದು ಹೇಳಿದರು.ಕೊಡತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಮಂಜುನಾಥ್, ಪಂಚಾಯಿತಿ ಸದಸ್ಯರಾದ ಸತೀಶ್, ರಾಮಸ್ವಾಮಿ, ನಂಜುಂಡರೆಡ್ಡಿ, ರಮೇಶ್, ಮುನಿರಾಜು, ವೀಣಾ ರವಿ, ಆಶಾ ಚಿಟ್ಟಿಬಾಬು ನಳಿನಾಕ್ಷಿ, ಶುಭ, ಆಂತೋನಿ ಮೇರಿ, ಮಮತಾ ಮತ್ತು ಬಡಾವಣೆಯ ನಿವಾಸಿಗಳು ಬಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು