LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"Love ಲಿ" ಚಿತ್ರಕ್ಕೆ 25 ದಿನಗಳ ಸಂಭ್ರಮ

ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯ ಹಾಗೂ ಕಂಠದಿಂದ ಜನಮನಸೂರೆ ಗೊಂಡಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ "Love ಲಿ" ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದೆ.

ಪ್ರಸ್ತುತ ಕರ್ನಾಟಕದ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂದರ್ಭದಲ್ಲಿ ಸಮಾರಂಭ ಆಯೋಜಿಸಿದ್ದ ನಿರ್ಮಾಪಕರು ಚಿತ್ರತಂಡದ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.ನಮ್ಮ ಚಿತ್ರವನ್ನು ಮೊದಲಿನಿಂದಲೂ ಪ್ರೋತ್ಸಾಹಿಸುತ್ತಾ ಬಂದಿರುವ ಮಾಧ್ಯಮದವರಿಗೆ ಹಾಗೂ ಚಿತ್ರ ನೋಡಿ ಹಾರೈಸುತ್ತಿರುವ ಪ್ರೇಕ್ಷಕರಿಗೆ ಧನ್ಯವಾದ ಎಂದು ಮಾತನಾಡಿದ ನಾಯಕ ವಸಿಷ್ಠ ಸಿಂಹ, ಜೂನ್ ತಿಂಗಳು ನಮಗೆ ಮಾರಕವಾಯಿತು ಎಂದರೆ ತಪ್ಪಾಗಲಾರದು. ನಮ್ಮ ಚಿತ್ರ ಬಿಡುಗಡೆ ಸಮಯದಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಾಯಿತು.

ಆ ಸಮಸ್ಯೆಗಳ ನಡುವೆ ನಮ್ಮ ಚಿತ್ರ ತೆರೆ ಕಂಡಿತ್ತು. ಚೇತನ್ ಕೇಶವ ಅವರ ಮೊದಲ ನಿರ್ದೇಶನದಲ್ಲೇ ಜನರ ಮನಸ್ಸಿಗೆ ಹತ್ತಿರವಾಗಿದ್ದಾರೆ. ಚಿತ್ರ ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ. ಇಷ್ಟೆಲ್ಲದರ ನಡುವೆ ನಾವು ನಿರೀಕ್ಷಿಸಿದಷ್ಟು ಜನ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ. ದಯವಿಟ್ಟು ಕನ್ನಡ ಚಿತ್ರಗಳನ್ನು ಹೆಚ್ಚು ಪ್ರೋತ್ಸಾಹಿಸಿ. ಈಗಾಗಲೇ ಚಿತ್ರ ನೋಡಿರುವವರಿಗೆ ಧನ್ಯವಾದ. ನೋಡದೇ ಇರುವವರು ಈಗಲೇ ನೋಡಿ ಎಂದರು.ಮೊದಲು ನಮ್ಮ ಚಿತ್ರ ಇಪ್ಪತ್ತೈದು ದಿನ ಪೂರೈಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ನಮ್ಮ ಚಿತ್ರ ನೋಡಿದವರಿಗೆ ತುಂಬಾ ಇಷ್ಟವಾಗಿದೆ.

ಆದರೆ ಇಲ್ಲಿನ ಜನ ಬೇರೆ ಭಾಷೆಗಳ ಚಿತ್ರಗಳಿಗೆ ನೀಡುವ ಪ್ರೋತ್ಸಾಹವನ್ನು ನಮ್ಮ ಕನ್ನಡ ಚಿತ್ರಗಳಿಗೆ ನೀಡುವುದಿಲ್ಲ ಎಂಬ ಬೇಸರ ಬಹಳ ಇದೆ. ದಯಮಾಡಿ ಕರ್ನಾಟಕದ ಜನರು ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ. ಒಬ್ಬ ನಿರ್ಮಾಪಕ ಗೆದ್ದರೆ, ಅದರಿಂದ ಬಂದ ಹಣವನ್ನು ಮತ್ತೊಂದು ಚಿತ್ರಕ್ಕೆ ಹಾಕುತ್ತಾನೆ. ಅದರಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ತಿಳಿಸಿದರು.

"ಮಫ್ತಿ" ಚಿತ್ರದ ನಿರ್ದೇಶಕ ನರ್ತನ್, ಪ್ರಶಾಂತ್ ನೀಲ್ ಅಂತಹವರ ಬಳಿ ಕೆಲಸ ಮಾಡಿ ಬಂದಿರುವ ನನಗೆ ಇದು ಮೊದಲ ನಿರ್ದೇಶನ ಚಿತ್ರ. ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರ ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ ಎಂದರು ನಿರ್ದೇಶಕ ಚೇತನ್ ಕೇಶವ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು