LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪ್ರೀತಿಯ ಹುಚ್ಚ ದುರಂತ ಪ್ರೇಮಕಥೆ ಹಾಸನದಲ್ಲಿ ನಡೆದ ನೈಜ ಫಟನೆ

ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಟಿ. ಗೌರಿಕುಮಾರ್ ಅವರು ನಿರ್ಮಿಸುತ್ತಿರುವ ಚಿತ್ರ ಪ್ರೀತಿಯ ಹುಚ್ಚ. ಮ್ಯೂಸಿಕಲ್ ಟ್ರ್ಯಾಜಿಡಿ ಲವ್ ಸ್ಟೋರಿ ಇದಾಗಿದ್ದು, ಕನ್ನಡ ಹಾಗೂ ತಮಿಳು ಸೇರಿ 2 ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದೆ. ತಮಿಳಲ್ಲಿ ಕಾದಲ್ ಪೈತ್ಯಂ ಶೀರ್ಷಿಕೆಯಡಿ ಬಿಡುಗಡೆಯಾಗುತ್ತಿದೆ.

ಈ ಚಿತ್ರಕ್ಕೆ ವಿ.ಕುಮಾರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.ಈ ಹಿಂದೆ ಗಾಯತ್ರಿ ಎಂಬ ಹಾರರ್ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ಕುಮಾರ್ ಅವರ ನಿರ್ದೇಶನದ ಎರಡನೇ ಚಿತ್ರವಿದು. 1998-99ರ ಸಮಯದಲ್ಲಿ ಹಾಸನದಲ್ಲಿ ನಡೆದ ನೈಜ ಘಟನೆಯೊಂದು ಈ ಚಿತ್ರಕ್ಕೆ ಪ್ರೇರಣೆ.

ಅಮಾಯಕ ಯುವತಿಯೊಬ್ಬಳ ದಾರುಣ ಕಥೆಯಿದಾಗಿದ್ದು, ಮದುವೆಯಾದ ಮೊದಲ ರಾತ್ರಿಯೇ ದುಷ್ಟರ ಜಾಲಕ್ಕೆ ಸಿಕ್ಕು ಮುಂಬೈನ ರೆಡ್‍ಲೈಟ್ ಏರಿಯಾಕ್ಕೆ ಮಾರಾಟವಾಗುವ ನಾಯಕಿಯ ಜೀವನ ಮುಂದೆ ಯಾವೆಲ್ಲ ತಿರುವು ಪಡೆದುಕೊಂಡಿತು, ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕಳೆದುಕೊಂಡ ನಾಯಕ ಯಾವ ಸ್ಥಿತಿ ತಲುಪಿದ ಎಂಬುದನ್ನು ನಿರ್ದೇಶಕ ಕುಮಾರ್ ಅವರು ಪ್ರೀತಿಯ ಹುಚ್ಚ ಚಿತ್ರದ ಮೂಲಕ ಹೇಳಹೊರಟಿದ್ದಾರೆ.

ಈ ಚಿತ್ರಕ್ಕೆ ಬೆಂಗಳೂರು. ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ ಹಾಗೂ ಮುಂಬೈನ ಕಾಮಾಟಿಪುರದಲ್ಲಿ 65 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಬರುವ ಶಿವರಾತ್ರಿ ವೇಳೆಗೆ ಚಿತ್ರದ ಟೀಸರ್ ಹಾಗೂ ಲಿರಿಕಲ್ ಸಾಂಗ್ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ. ಈ ಚಿತ್ರದಲ್ಲಿ ಸುಂಟಿಸ್ಟಾರ್ ವಿಜಯ್ ನಾಯಕನಾಗಿ ನಟಿಸಿದ್ದು, ಮುಂಬೈ ಮೂಲದ ಕುಂಕುಮ್ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ಶಿವಯೋಗಿ ಗುತ್ತೆಮ್ಮನವರ್ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ 4 ಹಾಡುಗಳಿದ್ದು, ಜೆ.ಎನ್. ರಂಗರಾಜನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುನಿಲ್ ಕೆ.ಆರ್.ಎಸ್. ಅವರ ಛಾಯಾಗ್ರಹಣ, ಪ್ರವೀಣ್ ವಿಷ್ಣು ಅವರ ಸಂಕಲನ ಈ ಚಿತ್ರಕ್ಕಿದೆ. ಉಳಿದ ತಾರಾಗಣದಲ್ಲಿ ಲೆಕ್ಕಾಚಾರ ಚಂದ್ರು, ದುಬೈ ರಫೀಕ್, ಉಮೇಶ್ ಪುಂಗ, ಜೋಗಿ ನಾಗರಾಜ್, ಪೂರ್ಣಿಮಾ, ವಿ.ಭಾಸ್ಕರರಾಜ್, ನಟ, ಕಿಲ್ಲರ್ ವೆಂಕಟೇಶ್, ಭಜರಂಗಿ ರಾಜು, ಮಹದೇವಸ್ವಾಮಿ. ಗೀತಾ, ಸುನಿತಾ, ಪ್ರಮೋದ್, ಮಹದೇವ, ಆನಂದ್ ಮುಂತಾದವರಿದ್ದಾರೆ. ಪ್ರೀತಿಯ ಹುಚ್ಚ ಚಿತ್ರವನ್ನು ಯುಗಾದಿ ನಂತರ ಏಪ್ರಿಲ್ ವೇಳೆಗೆ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು