LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಜ್ಜನಿಕೆಯ ಸಾಕಾರಮೂರ್ತಿ ಮಾದೇನಹಳ್ಳಿ ಮಲ್ಲಿಕಾರ್ಜುನಯ್ಯ ಪುಸ್ತಕ ಬಿಡುಗಡೆ

ಬೆಂಗಳೂರು: ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನಲ್ಲಿ ಉತ್ತಮ ಹೆಸರು ಮಾಡಿದ್ದ ದಿವಂಗತ ಮಾದೇನಹಳ್ಳಿ ಮಲ್ಲಿಕಾರ್ಜುನಯ್ಯ ಅವರ ಕುರಿತ ಸಜ್ಜನಿಕೆಯ ಸಾಕಾರ ಮೂರ್ತಿ ಮಾದೇನಹಳ್ಳಿ ಮಲ್ಲಿಕಾರ್ಜುನಯ್ಯ ಎಂಬ ಪುಸ್ತಕ ಬಿಡುಗಡೆ ಸಮಾರಂಭವನ್ನು ಮಾದೇನ ಹಳ್ಳಿ ಮಲ್ಲಿಕಾರ್ಜುನಯ್ಯ ಪ್ರತಿಷ್ಠಾನವತಿಯಿಂದ ಬೆಂಗಳೂರಿನ ಸ್ಕೌಟ್ ಅಂಡ್ ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಮಾತನಾಡಿ, ಗ್ರಾಮೀಣ ಹಿನ್ನಲೆಯಿಂದ ಬಂದ ಎಂ.ಮಲ್ಲಿಕಾರ್ಜುನಯ್ಯ ಬಡತನದ ನಿಷ್ಠುರಗಳನ್ನು ಅನುಭವಿಸಿದ ಅವರು ಅನೇಕ ಪ್ರಭಾವಿ ಸಾಹಿತಿಗಳ ಸಂಪರ್ಕ ಹೊಂದಿದ್ದರು, ಅವರಲ್ಲಿದ್ದ ಶಿಸ್ತು,ದಕ್ಷತೆ, ಸಂಘಟನಾ ಕೌಶಲ್ಯ, ಕ್ರಿಯಾಶೀಲತೆ ಎಲ್ಲರೂ ಗಮನಿಸುವಂತಿದೆ ಎಂದು ಹೇಳಿದರು.

ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮಿ ಮಾತನಾಡಿ, ಮಲ್ಲಿಕಾರ್ಜುನಯ್ಯ, ಸಿದ್ಧಗಂಗಾ ಶ್ರೀಗಳ ಪರಮ ಭಕ್ತರು, ಶಿಷ್ಯರಾಗಿದ್ದರು,ಅವರ ಮಾರ್ಗದರ್ಶನ ಹಾಗೂ ಅವರ ಆಶೀರ್ವಾದದಿಂದ ಬದುಕು ಕಟ್ಟಿಕೊಂಡವರು,ಸುತ್ತೂರು ಜಗದ್ಗುರುಗಳ ಆಸರೆಯ ಮುಂ ಬೆಳಗಿನಲ್ಲಿ ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಹಿರಿಯ ಜಾನಪದ ವಿದ್ವಾಂಸ ನಾಡೋಜ .ಗೊ.ರು.ಚೆನ್ನಬಸಪ್ಪ ಮಾತನಾಡಿ, ಮಲ್ಲಿಕಾರ್ಜುನಯ್ಯ ಸ್ವತಃ ಸಾಹಿತಿಗಳಾಗಿರಲಿಲ್ಲ, ಆದರೆ ಅವರ ಸಂಪರ್ಕ ಇರುವುದೆಲ್ಲ ಸಾಹಿತ್ಯಶ್ರೇಷ್ಠರೊಂದಿಗೆ, ಯಾವುದೇ ವೇದಿಕೆ ಹತ್ತದಿದ್ದರೂ ಅಂತಹ ವೇದಿಕೆಗಳಿಗೆ ಆಧಾರವಾಗಿದ್ದರು ಎಂದರು.ಮಾಜಿ ಸಚಿವ ಪಿ.ಜಿ.ಆರ್ .ಸಿಂದ್ಯಾ ಮಾತನಾಡಿ, ಮಲ್ಲಿಕಾರ್ಜುನಯ್ಯ ವರ್ಗ ಬೇದವಿಲ್ಲದೇ ಎಲ್ಲರೊಂದಿಗೆ ಪ್ರೀತಿ,ವಿಶ್ವಾಸದಿಂದ ನಡೆದುಕೊಂಡಿದ್ದರು ಎಂದುಅವರ ನೆನಪು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಪರಿಸರ ತಜ್ಞ, ಉಲ್ಲಾಸ್ ಕಾರಂತ್ ದಂಪತಿಗಳು, ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ, ನಿವೃತ್ತ ಅಧಿಕಾರಿಗಳಾದ ಯು.ಶ್ರೀಧರ್ ಭಟ್, ಡಿ.ಎಸ್.ಮೃತ್ಯುಂಜಯ, ಸ್ಕೌಟ್ ಅಂಡ್ ಗೈಡ್ಸ್ ನ ಕಾರ್ಯದರ್ಶಿ ಕೊಂಡಜ್ಜಿ ಬ.ಷಣ್ಮುಖಪ್ಪ, ಉಪಾಧ್ಯಕ್ಷ ಎಂ.ರೇಣುಕಾರಾಧ್ಯ, ಜಂಟಿ ಕಾರ್ಯದರ್ಶಿ ಭೈರಸಂದ್ರ ಸಿದ್ದಲಿಂಗಪ್ಪ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು