LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಡಿವಾಳ ಮಾಚಿದೇವರ ಜಯಂತಿ ಸರಳವಾಗಿ ಆಚರಣೆ

ದೇವನಹಳ್ಳಿ: ಸಮಾಜದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.

ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡ ಹರಿಕಾರರು ಎಂದು ದೇವನಹಳ್ಳಿ ತಾಲೂಕಿನ ತಹಸೀಲ್ದಾರ್ ಶಿವರಾಜ್ ಹೇಳಿದರು.ದೇವನಹಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿದಂತಹ ಅನಿಷ್ಟಗಳನ್ನು ಹೋಗಲಾಡಿಸಿದ ಸರ್ವಶ್ರೇಷ್ಠ ಶರಣ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳವಾಗಿ ಆಚರಿಸಿದರು.

ಸಮಾಜದ ಮುಖಂಡರಾದ ಕಾಮೇನಹಳ್ಳಿ ರಮೇಶ್ ಮಾತನಾಡಿ ಶರಣರ ಅಗ್ರ ಗಣ್ಯ ಬಳಗದಲ್ಲಿ ‘ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು.ಸಾಹಿತ್ಯ ರಕ್ಷಣೆಯ ಮಹಾ ದಂಡನಾಯಕ ಸರ್ವಶ್ರೇಷ್ಠ ಶರಣರಲ್ಲಿ ಒಬ್ಬರಾಗಿದ್ದ ಅಚಲ ಕಾಯಕ ನಿಷ್ಟರಾಗಿದ್ದರು,ಇಂದಿನ ಸಮಾಜದ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ತಮ್ಮ ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಇಓ ಶ್ರೀನಾಥ್ ಗೌಡ, ಮಡಿವಾಳ ಮಾಚಿದೇವರ ಸಮಾಜದ ಟೌನ್ ಅಧ್ಯಕ್ಷ ನಾಗೇಶ್(ಗಂಗೂಲಿ) ಪಧಾದಿಕಾರಿಗಳಾದ ಮೂರ್ತಿ, ನಂದಕುಮಾರು, ಮುನಿರಾಜು, ದರ್ಶನ್, ಯಲಿಯೂರು ಚಿಕ್ಕಣ್ಣ, ಬೈಚಾಪುರ ರಮೇಶ್, ವೆಂಕಟೇಶ್, ಬಿಜ್ವವಾರ ಮಧು ಸೇರಿದಂತೆ ಕುಲಬಾಂಧವರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು