LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

50 ಸಂಭ್ರಮದಲ್ಲಿ `ಮಗ್ಗಿಪುಸ್ತಕ'

ಹರಿವರಾಸನಂ ತಾವೇ ಬರೆದ ಅವನಿ ಎಂಬ ಕಾದಂಬರಿಯನ್ನಾಧರಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಇದೀಗ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನಡೆದಿದೆ, ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಮಗ್ಗಿಪುಸ್ತಕ ಚಿತ್ರದ ಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು, ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ ಗೆಲುವಿಗೆ ಕಾರಣರಾದ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಮರಣಫಲಕ ನೀಡಿ ಗೌರವಿ ಸಲಾಯಿತು. 4 ಆಯಾಮಗಳಲ್ಲಿ ನಡೆಯುವ ಕಥೆ ಒಳಗೊಂಡ ಈ ಚಿತ್ರದಲ್ಲಿ ಮಕ್ಕಳ ಜತೆಗೆ ಪೋಷಕರಿಗೂ ಉತ್ತಮ ಸಂದೇಶವಿದೆ.
ನಿರ್ದೇಶಕ ಹರಿವರಾಸನಂ ತಮ್ಮ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ನಾಡಿ ಮಿಡಿತವನ್ನರಿತು ಚಿತ್ರ ನಿರೂಪಿಸಿದ್ದಾರೆ. ಅವರ ಪ್ರಥಮ ಚಿತ್ರವೇ 50 ದಿನಗಳನ್ನು ಪೂರೈಸಿದೆ. ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು, ಪೋಷಕರು ಚಿತ್ರ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಚಿತ್ರ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಚಿನ್ನಸ್ವಾಮಿ ಫಿಲಂಸ್ ಅಡಿ ಎತಿರಾಜ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಗ್ಗಿ ಪುಸ್ತಕವೆಂಬುದು ಬದುಕಿನ ಲೆಕ್ಕಾಚಾರವಾ ಗಿದ್ದು, ಜೀವನವೇ ಒಂದು ಮಗ್ಗಿ ಪುಸ್ತಕವಿ ದ್ದಂತೆ, ಇದರಲ್ಲಿ ಒಳ್ಳೆಯದನ್ನು ಕೂಡಬೇಕು, ಕೆಟ್ಟದ್ದನ್ನು ಕಳೆಯಬೇಕು, ಅಜ್ಞಾನವನ್ನು ಗುಣಿಸಬೇಕು, ಜ್ಞಾನವನ್ನು ಭಾಗಿಸಬೇಕು ಎಂಬ ಸಂದೇಶವಿದೆ, ನಾಲ್ಕು ಆಯಾಮಗಳಲ್ಲಿ ನಡೆಯುವ ಹೈಪರ್ ಲಿಂಕ್ ಕಥೆಯಿದು.ವೇದಿಕೆಯಲ್ಲಿ ಮಾತನಾಡಿದ ಹರಿವರಾಸನಂ ಇಡೀ ಚಿತ್ರತಂಡದ ಪರಿಶ್ರಮವೇ ಈ ಯಶಸ್ಸಿಗೆ ಕಾರಣ. ನಮ್ಮ ಚಿತ್ರ 100 ದಿನಗಳನ್ನೂ ಪೂರೈ ಸಬೇಕೆಂಬ ಆಸೆಯಿದೆ, ಚಿತ್ರವೀಗ 13 ಥೇಟರ್‌ಗಳಲ್ಲಿ ರನ್ ಆಗುತ್ತಿದೆ. ಮುಂದಿನ ವಾರದಿಂದ ರಜೆ ಪ್ರಾರಂಭವಾಗುತ್ತಿದ್ದು, ಮತ್ತಷ್ಟು ಥೇಟರ್‌ಗಳು ಸೇರ್ಪಡೆಯಾಗುತ್ತಿವೆ ಎಂದು ಹೇಳಿದರು. ನಿರ್ಮಾಪಕ ಎತಿ ರಾಜ್ ಮಾತನಾಡುತ್ತ ನಮ್ಮ ಚಿತ್ರ 50 ದಿನ ಓಡಿದ್ದೇ ಖುಷಿಯ ವಿಚಾರ, ಈ ಯಶಸ್ಸಿಗೆ ಸಹಕರಿಸಿದ ಎಲ್ಲ ತಂತ್ರಜ್ಞರು, ಕಲಾವಿದರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದರು.
ಸಂಗೀತ ನಿರ್ದೇಶಕ ಯಶಸ್ ನಾಚಪ್ಪ ಮಾತನಾಡುತ್ತ 50 ದಿನ ಅನ್ನೋದೇ ವಿಶೇಷ. ನನ್ನ ಮೊದಲ ಚಿತ್ರವೇ 50 ದಿನ ಕಂಡಿದೆ. 7 ಹಾಡುಗಳನ್ನು 17 ಜನ ಸಿಂಗರ್ಸ್ ಹಾಡಿದ್ದಾರೆ ಎಂದು ಹೇಳಿದರೆ, ಛಾಯಾಗ್ರಾಹಕ ನಂದಕುಮಾರ್ ಮಾತನಾಡುತ್ತ ಈ ಸಕ್ಸಸ್ಸಿಗೆ ಕಾರಣ ನಮ್ಮ ನಿರ್ದೇಶಕರು. ಅವರು ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದಾರೆ. ಈಗಿನ ದಿನಗಳಲ್ಲಿ 50 ದಿನ
ಓಡೋದು ತುಂಬಾ ಕಮ್ಮಿ, ನನ್ನ ಇಷ್ಟು ದಿನಗಳ ಜರ್ನಿಯಲ್ಲಿ 50 ದಿನ ಕಂಡ ಮೊದಲ ಚಿತ್ರವಿದು ಎಂದು ಸಂತಸ ವ್ಯಕ್ತಪಡಿಸಿದರು, ಸದ್ಯ ಪರೀಕ್ಷೆಗಳು ಮುಗಿಯುತ್ತಿದ್ದು, ಈವಾರ ಭೂಮಿಕಾ ಸೇರಿದಂತೆ ಮತ್ತಷ್ಟು ಸೆಂಟರ್‌ಗಳಲ್ಲಿ ಚಿತ್ರ ರಿಲೀಸಾಗುತ್ತಿದೆ, ಚಿತ್ರದ ಕಲೆಕ್ಷನ್ ಕೂಡ ಜಾಸ್ತಿಯಾಗುವ ನಿರೀಕ್ಷೆಯಿದೆ, ಅಲ್ಲದೆ ನಮ್ಮ ಚಿತ್ರದ ಓಟಿಟಿ ಹಕ್ಕನ್ನು ಅಮೆಜಾನ್ ಸಂಸ್ಥೆ ಪಡೆದಿದೆ ಎಂದೂ ನಿರ್ದೇಶಕರು ಹೇಳಿಕೊಂಡರು, ಬೆಂಗಳೂರು, ಮೈಸೂರು, ಮಂಗಳೂರು, ನಂಜನಗೂಡು, ಶ್ರೀರಂಗಪಟ್ಟಣ, ಹೆಚ್.ಡಿ.ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು 80ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ಮಗ್ಗಿಪುಸ್ತಕ ಚಿತ್ರದಲ್ಲಿ ಒಟ್ಟು 7 ಹಾಡುಗಳಿದ್ದು ಎಸ್.ಎಸ್. ನಾಚಪ್ಪ ಅವರ ಸಂಗೀತ ಸಂಯೋಜನೆಯಿದೆ. ಎಂ.ಎA.ಕೀರವಾಣಿ ಅವರು ಚಿತ್ರದ ಹಾಡೊಂದಕ್ಕೆ ದನಿಯಾಗಿರುವುದು ವಿಶೇಷ. ಉಳಿದಂತೆ ಕನ್ನಡ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್, ಕಂಭದ ರಂಗಯ್ಯ, ನವೀನ್ ಸಜ್ಜು, ಇಂದು ನಾಗರಾಜ್, ಗುರುರಾಜ್ ಹೊಸಕೋಟೆ, ಸೈಂಧವಿ, ವೈಕಂ ವಿಜಯಲಕ್ಷ್ಮೀ ಹಾಗೂ ರವೀಂದ್ರ ಸೊರಗಾವಿ ಸೇರಿದಂತೆ 17 ಜನ ಹಾಡಿದ್ದಾರೆ.
ಈ ಚಿತ್ರವನ್ನು ಎಂ.ಪಿ. ಫಿಲಂಸ್ ಮೂಲಕ ಕೆ. ಮುನೀಂದ್ರ ಅವರು ರಿಲೀಸ್ ಮಾಡಿದ್ದರು. ಅವರ ಸಂಸ್ಥೆಯಿAದ ಬಿಡುಗಡೆ ಯಾದ ಮೊದಲ 2 ಚಿತ್ರಗಳೂ 50 ದಿನ ಪೂರೈಸಿರುವುದು ಸಂತಸದ ವಿಷಯ, ಈ ಕುರಿತು ಮಾತನಾಡಿದ ಮುನೀಂದ್ರ ಈ ಹಿಂದೆ ನಾವೇ ರಿಲೀಸ್ ಮಾಡಿದ ಕಂಗ್ರಾಚುಲೇಶನ್ಸ್ ಬ್ರದರ್ ಕೂಡ 50 ದಿನ ಪ್ರದರ್ಶನ ಕಂಡಿತ್ತು, ಇದು ಎರಡನೇ ಚಿತ್ರ ಎಂದರು.
ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ರಂಜನ್ ಕಾಸರಗೋಡು, ರಾನ್ವಿ ಶೇಖರ್, ಮಹೇಶ್, ಮೋಹಿತ್, ಮೈಸೂರು ರಮಾನಂದ್, ಮೂಗು ಸುರೇಶ್, ಪಂಕಜ, ಅಗಸ್ತ÷್ಯ ಅಲ್ಲದೆ ಸಂಗೀತ ನಿರ್ದೇಶಕರು, ಸಂಕಲನಕಾರರು ಹಾಗೂ ಛಾಯಾಗ್ರಾಹಕರಿಗೂ ಸಹ ಈ ವೇದಿಕೆಯಲ್ಲಿ ಸ್ಮರಣಫಲಕ ವಿತರಿಸಿ ಗೌರವಿಸಲಾಯಿತು, ಮೇಘಶ್ರೀ, ರಕ್ಷಾ ಗೌಡ, ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಘು ರಾಮನಕೊಪ್ಪ ಹಾಗೂ ಇನ್ನಿತರರು ಚಿತ್ರದಲ್ಲಿ ನಟಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು