LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜೀ ಕನ್ನಡದಲ್ಲಿ "ಮಹಾನಟಿ" ಗ್ಯಾಂಡ್‌ ಫಿನಾಲೆ!

ಕನ್ನಡದ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಜೀû ಕನ್ನಡ, ಇದೀಗ ಮಹಾನಟಿ ಸೀಸನ್ ೨ರ ಮೂಲಕ ಮತ್ತೊಮ್ಮೆ ಯುವಪ್ರತಿಭೆಗಳಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಯುವನಟಿಯರನ್ನು ಕನ್ನಡ ಸಿನಿರಂಗಕ್ಕೆ ಪರಿಚಯಿಸುವ ವಿಭಿನ್ನ ಕಾರ್ಯಕ್ರಮವೇ 'ಮಹಾನಟಿ'. ಇತ್ತೀಚಿಗೆ ಸ್ಯಾಂಡಲ್ವುಡ್‌ನ ಪ್ರಖ್ಯಾತ ನಿರ್ದೇಶಕರು ನಿರ್ದೇಶಿಸಿರುವ ಮತ್ತು ಮಹಾನಟಿ
ಫೈನಲಿಸ್ಟ್ಗಳು ನಟಿಸಿರುವ ೫ ಶಾರ್ಟ್ ಫಿಲಂಗಳು ಥಿಯೇಟರ್‌ನಲ್ಲಿ ಪ್ರೀಮಿಯರ್ ಆಗಿದ್ದವು. ಈ ಕಲರ್‌ಫುಲ್ ಪ್ರೀಮಿಯರ್‌ನ ಸಮಾರಂಭದಲ್ಲಿ ಮಹಾನಟಿಯ ಜಡ್ಜಸ್‌ಗಳಾದ ರಮೇಶ್ ಅರವಿಂದ್, ಪ್ರೇಮ, ನಿರ್ದೇಶಕ ತರುಣ್ ಸುಧೀರ್ ಮತ್ತು ನಿಶ್ವಿಕಾ ನಾಯ್ಡು ಉಪಸ್ಥಿತರಿದ್ದರು ಮತ್ತು ಅನುಶ್ರೀ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮ ಕ್ರಿಯೇಟಿವಿಟಿಗೆ
ಮತ್ತೊಂದು ಉದಾಹರಣೆ ಆಗಿತ್ತು.

ಮಹಾನಟಿ ಕಾರ್ಯಕ್ರಮವು ಜೀû ಕನ್ನಡದ ಹೊಸ ಪ್ರಯತ್ನವಾಗಿದ್ದು, ಸಿನಿರಂಗ ಪ್ರವೇಶಿಸಲು ಬಯಸುವ ಪ್ರತಿಭಾವಂತ ನಟಿಯರನ್ನು ಪರಿಚಯಿಸುವ ಉದ್ದೇಶದಿಂದ ನಿರ್ಮಿಸಲಾದ ಕನ್ನಡದ ಮೊದಲ ಟೆಲಿವಿಷನ್ ಕಾರ್ಯಕ್ರಮವಾಗಿದೆ. ಇನ್ನು ಮಹಾನಟಿ ಸೀಸನ್ ೧ ಅತ್ಯಂತ ಯಶಸ್ವಿ ಆಗಿದ್ದು ಅದರಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಸಿನೆಮಾ ಹಾಗೂ ಕಿರುತೆರೆಯಲ್ಲಿ ಅವಕಾಶಗಳು ಲಭಿಸಿವೆ. ಇನ್ನು ಮಹಾನಟಿ ಸೀಸನ್ ೧ರ ಸಕ್ಸಸ್ ಬಳಿಕ ಮತ್ತೆ ಬಂದ ಮಹಾನಟಿ ಸೀಸನ್ ೨ ಈಗ ಕೊನೆಯ ಹಂತಕ್ಕೆ ತಲುಪಿದೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿರತ್ನಕುಮಾರ್, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರುಫೈನಲಿಸ್ಟ್ಗಳಾಗಿದ್ದು ಸ್ಯಾಂಡಲ್ವುಡ್‌ನ ಪ್ರಸಿದ್ಧ ನಿರ್ದೇಶಕರುಗಳಾದ ಹರಿ ಸಂತೋಷ್, ಪನ್ನಗ ಭರಣ, ಕವಿರಾಜ್, ಶ್ರೀನಿಧಿ ಬೆಂಗಳೂರುಹಾಗೂ ಉಮೇಶ್ ಕೆ. ಕೃಪ ನಿರ್ದೇಶಿಸಿರುವ ಶಾರ್ಟ್ ಮೂವಿಗಳಲ್ಲಿ ನಟಿಸಿದ್ದಾರೆ.

ಇನ್ನು ಈ ಶಾರ್ಟ್ ಮೂವಿಗಳ ಸ್ಕಿçÃನಿಂಗ್ ನವೆಂಬರ್ ೩ರAದು ಆಯಿತು. ಇಲ್ಲಿ ಅದ್ಬುತ ನಿರ್ದೇಶಕರ ನಿರ್ದೇಶನಕ್ಕೆ ಫೈನಲಿಸ್ಟ್ ಸ್ಪರ್ಧಿಗಳು ಹೇಗೆ ಜೀವ ತುಂಬಿದರು ಎಂದು ಕಾಣಸಿಕ್ಕಿತು. ಇನ್ನು ಇಲ್ಲಿ ಮಹಾನಟಿ ಫೈನಲಿಸ್ಟ್ಗಳ ಕನಸು ನನಸಾಗುವುದರಲ್ಲಿ ಜೀû ಕನ್ನಡದ ಪಾತ್ರ ಎದ್ದು ಕಾಣುತ್ತಿತ್ತು. ಕಿರುತೆರೆಯಿಂದ ಸಿಲ್ವರ್ ಸ್ಕಿçÃನ್‌ಗೆ ಪ್ರತಿಭಾನ್ವಿತ ನಟಿಯರಿಗೆ ಅವಕಾಶ ಕೊಡಿಸುವುದು ಮಹಾನಟಿ ರಿಯಾಲಿಟಿ ಶೋನ ಮುಖ್ಯ ಉದ್ದೇಶ. ಅಷ್ಟೇ ಅಲ್ಲದೇ ಬೇರೆ ಬೇರೆ ರೌಂಡ್ಸ್ಗಳ ಮೂಲಕ ಈ ನಟಿಯರಿಗೆ ಸಿಲ್ವರ್ ಸ್ಕಿçÃನ್‌ನಲ್ಲಿ ಹೇಗೆ ಕಾಣಿಸಬೇಕು, ಹೇಗೆ ನಟಿಸಬೇಕು ಎನ್ನುವುದಲ್ಲದೆ ಬೆಳ್ಳಿತೆರೆಯ ಇನ್ನಷ್ಟು ವಿಷಯಗಳ ಬಗ್ಗೆ ಟ್ರೆöÊನ್ ಮಾಡಲಾಗಿದ್ದು ಇದು ಈ ನಟಿಯರಿಗೆ ಮುಂದಿನ ದಿನಗಳಲ್ಲಿ ಸಹಾಯ ಆಗಲಿದೆ. ಈ ಗ್ರಾ÷್ಯಂಡ್ ಫಿನಾಲೆ ಇದೇ ನವೆಂಬರ್ ೮ರಂದು ಜೀû ಕನ್ನಡ ವಾಹಿನಿಯಲ್ಲಿ ಸಂಜೆ ೭ ಗಂಟೆಯಿAದ ಪ್ರಸಾರಗೊಳ್ಳಲಿದೆ. ಯಾರು ಮಹಾನಟಿ ಸೀಸನ್ ೨ನ ವಿನ್ನರ್ ಎಂದು
ತಿಳಿದುಕೊಳ್ಳಲು ತಪ್ಪದೆ ವೀಕ್ಷಿಸಿ ಜೀû ಕನ್ನಡ ಇದೇ ನವೆಂಬರ್ ೮ ರಂದು ಸಂಜೆ ೭ ಗಂಟೆಯಿAದ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು