LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಹಾಶಿವರಾತ್ರಿ: ಮಲೆ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ

ಕನಕಪುರ: ಮಹಾಶಿವರಾತ್ರಿ ಅಂಗವಾಗಿ ಸಾವಿರಾರು ಭಕ್ತರು ಮಲೆ ಮಾದಪ್ಪನ ಬೆಟ್ಟಕ್ಕೆ ತೆರಳಲು ಭಾನುವಾರದಿಂದಲೇ ಪಾದಯಾತ್ರೆ ಮೂಲಕ ತೆರಳಲು ಕಾಲ್ನಡಿಗೆ ಪ್ರಾರಂಭ ಮಾಡಿದ್ದಾರೆ.

ಮಹಾಶಿವರಾತ್ರಿ ಅಂಗವಾಗಿ ಪ್ರತಿ ವರ್ಷ ತಾಲೂಕು ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಜನ ಭಕ್ತರು ಕಾಲ್ನಡಿಗೆಯಲ್ಲಿ ಬೆಟ್ಟ ತಲುಪಿ ಮಲೆ ಮಹಾದೇಶ್ವರನ ದರ್ಶನ ಪಡೆಯುವುದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ದತಿ ಮಹಾಶಿವರಾತ್ರಿಗೂ ಒಂದು ವಾರಗಳ ಮುನ್ನವೇ ಮಹದೇಶ್ವರನ ಬೆಟ್ಟಕ್ಕೆ ಕಾಲ್ನಡಿಗೆ ಆರಂಭ ಮಾಡುವ ಭಕ್ತರು ಮಹಾಶಿವರಾತ್ರಿಯಂದು ಬೆಟ್ಟದಲ್ಲಿ ಜಾಗರಣೆ ಮಾಡಿ ದೇವರ ದರ್ಶನ ಪಡೆದರೆ ತಮ್ಮ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ ಹಾಗಾಗಿ ಪ್ರತಿ ವರ್ಷ ಹರಕೆ ಹೊರುವ ಲಕ್ಷಾಂತರ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಪ್ರತಿ ವರ್ಷ ಮಲೆ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಹಾಶಿವರಾತ್ರಿ ಅಂಗವಾಗಿ ಇಷ್ಟಾರ್ಥಗಳ ಸಿದ್ದಿಗೆ ಹರಕೆಗಳನ್ನು ಹೊತ್ತು ಲಕ್ಷಾಂತರ ಭಕ್ತರು ಮಲೆ ಮಾದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಭಾನುವಾರ ತಾಲೂಕಿನಿಮದ ಪಾದಯಾತ್ರೆ ಪ್ರಾರಂಭ ಮಾಡಿದ್ದಾರೆ.
ಮಾದಪ್ಪನ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುವಪ್ರತಿಯೊಬ್ಬ ಭಕ್ತರು ಏಳಗಳ್ಳಿ ಗ್ರಾಮದ ತಾಯಿ ಮುದ್ದಮ್ಮನ ದರ್ಶನ ಪಡೆದು ಆನಂತರ ಬೆಟ್ಟಕ್ಕೆಕಾಲ್ನಡಿಗೆಯಲ್ಲಿ ತೆರಳುವುದು ನೂರಾರು ವರ್ಷಗಳಿಂದ ನಡೆದಿಕೊಂಡು ಬಂದಿರುವ.

ಪದ್ಧತಿಹಾಗಾಗಿ ಭಾನುವಾರ ಮಾದಪ್ಪನ ಬೆಟ್ಟಕ್ಕೆ ತೆರಳಲು ಪಾದಯಾತ್ರೆ ಪ್ರಾರಂಭ ಮಾಡಿರುವ ಸಾವಿರಾರು ಜನ ಭಕ್ತರು ತಾಯಿ ಮುದ್ದಮ್ಮನ ದರ್ಶನ ಪಡೆಯಲು ಉಯ್ಯಂಬಳ್ಳಿ ಹೋಬಳಿಯ ಏಳಗಳ್ಳಿ ಗ್ರಾಮದಲ್ಲಿ ಜಮಾಯಿಸಿದ್ದರು ತಾಯಿ ಮುದ್ದಮ್ಮನ ದರ್ಶನ ಪಡೆದು ಕೆಲವು ಭಕ್ತರು ರಾತ್ರಿ ಸಂಗಮದ ಕೊಗ್ಗೆದೊಡ್ಡಿ ಮಾರ್ಗವಾಗಿ ಕಾಲ್ನಡಿಗೆ ಪ್ರಾರಂಭ ಮಾಡುತ್ತಾರೆ ಇನ್ನು ಕೆಲವರು ಭಕ್ತರು ಭಾನುವಾರ ಏಳಗಳ್ಳಿ ಗ್ರಾಮದಲ್ಲಿ ಆಶ್ರಯ ಪಡೆದು ಸೋಮವಾರ ಪಾದಯಾತ್ರೆ ಪಾರಂಭ ಮಾಡಿ ಮಾದಪ್ಪನ ಬೆಟ್ಟದ ಕಡೆಗೆ ಹೊರಡುತ್ತಾರೆ.

ಪಾದಯಾತ್ರೆ ಹಮ್ಮಿಕೊಂಡಿರುವ ಭಕ್ತರಿಗೆ ದಾರಿಯುವುದಕ್ಕೂ ಗ್ರಾಮಸ್ಥರು ಮಜ್ಜಿಗೆ ಪಾನಕ ಅನ್ನದಾನ ಸಾಗರೋಪಾದಿಯಲ್ಲಿ ಹಮ್ಮಿಕೊಂಡಿದ್ದರು ಏಳಗಳ್ಳಿ ಗ್ರಾಮದಲ್ಲಿ ಸ್ಥಳೀಯ ಗ್ರಾಮಸ್ಥರು ಮುಖಂಡರು ಲಕ್ಷಾಂತರ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕಲ್ಪಿಸಿದರು ಅವರೆಕಾಳು ಗೊಜ್ಜು ಮುದ್ದೆ ಅನ್ನ ಸಾಂಬಾರ್ ಊಟದ ವ್ಯವಸ್ಥೆ ಕಲ್ಪಿಸಿದರು ಲಕ್ಷಾಂತರ ಭಕ್ತರು ರಾತ್ರಿ ಊಟ ಮುಗಿಸಿ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಮಂಗಳವಾರ ಬೆಳಿಗ್ಗೆ ಸಂಗಮದ ಕಾವೇರಿ ನದಿ ದಾಟಿ ಬೆಟ್ಟದ ಕಡೆಗೆ ಪಾದಯಾತ್ರೆ ಮುಂದುವರಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು