LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ದಲಿತ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ

ಹನೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆ ವಿಚಾರವಾಗಿ ದಲಿತ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದೂ ರೋಸ್ಟರ್ ಪದ್ಧತಿಯಲ್ಲಿ ಬದಲಾವಣೆ ಮಾಡಿ ಎಲ್ಲರಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪಟ್ಟಣದಲ್ಲಿರುವ ಮಹದೇಶ್ವರ ಕ್ರೀಡಾಂಗಣದಿAದ ದಲಿತ ಬಲಗೈ ಹೊಲಯ ಸಮುದಾಯದ ಹನೂರು, ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮದ ಮುಖಂಡರುಗಳು ಮಹಿಳೆಯರು ಯುವಕರು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ ತಹಸೀಲ್ದಾರ್ ಕಚೇರಿಯ ತನಕ ಪ್ರತಿಭಟನಾ ಚಳುವಳಿ ನಡೆಸಿ ಒಳಮೀಸಲಾತಿ ಹಂಚಿಕೆಯಲ್ಲಿ ಬಲಗೈ ಸಮುದಾಯಕ್ಕೆ ಹಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ತಹಸೀಲ್ದಾರ್ ಚೈತ್ರ ಅವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಸುಮಾರು ಮೂರು ಸಾವಿರ ಜನರು ಭಾಗವಹಿಸಿದ್ದು ೩೦ ನಿಮಿಷಗಳ ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು.
ಪ್ರತಿಭಟನೆಯಲ್ಲಿ ಹನೂರು ಪಟ್ಟಣದ ಯಜಮಾನರು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರುಗಳಾದ ಸಂಪತ್ ಕುಮಾರ್,ಸಿದ್ದರಾಜು, ಬಸವರಾಜು, ಮಹೇಶ್, ಮುಖಂಡರಾದ ಕಿರಣ್, ರವೀಂದ್ರ, ಪುಟ್ಟರಾಜು, ಕೃಷ್ಣ,ಸೇರಿದಂತೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಸಿಂಗಾನಲ್ಲೂರು, ದೊಡ್ಡಿಂದುವಾಡಿ, ಮತ್ತಿಪುರ, ತೆಳ್ಳನೂರು, ಹನೂರು ತಾಲೂಕಿನ ಮಣಗಳ್ಳಿ, ಬಂಡಳ್ಳಿ, ಅಜ್ಜಿಪುರ, ಮಾರ್ಟಳ್ಳಿ, ಲೊಕ್ಕನಹಳ್ಳಿ,ಚಿಕ್ಕಮಾಲಾಪುರ, ಪಿ. ಜಿ ಪಾಳ್ಯ, ರಾಮಾಪುರ ವ್ಯಾಪ್ತಿಯ ವಿವಿಧ ಗ್ರಾಮಗಳು ತಾಲೂಕಿನ ವಿವಿಧ ಗ್ರಾಮಗಳು ಮುಖಂಡರುಗಳು ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು