LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ: ಶಾಸಕ ಕೆ.ಗೋಪಾಲಯ್ಯ

ಬೆಂಗಳೂರು: ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಮಟ್ಟದಲ್ಲಿ ಸಾಗಬೇಕು. ಹಾಗಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.

ಕೃಷ್ಣಾನಂದನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಜಸ್ತಾನ್ ಕಾಸ್ ಮೋ ಫೌಂಡೇಷನ್ ವತಿಯಿಂದ ನಡೆದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣಕ್ಕೆ ಬಹಳ ಮಹತ್ವ ಇದೆ. ಮಕ್ಕಳು ಶಾಲೆಯ ಹಂತದಲ್ಲಿ ತಮ್ಮ ಮುಂದಿನ ಗುರಿಯನ್ನು ಇಟ್ಟುಕೊಂಡು ಅದಕ್ಕೆ ತಕ್ಕಂತೆ ಪರಿಶ್ರಮದಿಂದ ಅಧ್ಯಯನ ನಡೆಸಿ ತಮ್ಮ ಗುರಿಯನ್ನು ತಲುಪಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ, ಆರೋಗ್ಯಯುತವಾದಂತಹ ಜೀವನ ನಡೆಸಲು ನಮ್ಮ ಕ್ಲಿನಿಕ್ ಅನ್ನು ಸ್ಥಾಪಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವಂತಹ ಕೆಲಸವನ್ನು ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.

ಇದೇ ವೇಳೆ ಶಾಲೆಯ 2600 ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಮಹದೇವು, ಚಿಕ್ಕೆಗೌಡ, ಡಾ.ನಾಗೇಂದ್ರ, ಸಾಗರ್, ಶಾಲೆಯ ಶಿಕ್ಷಕ ಶಿಕ್ಷಕಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು