LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಆಗಬಾರದು: ಶಾಸಕ ಎಸ್. ಮುನಿರಾಜು

ಪೀಣ್ಯ ದಾಸರಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಆಗಬಾರದು ಮಕ್ಕಳು ವಿದ್ಯಾಭ್ಯಾಸ ಮಾಡಲು ಒಳ್ಳೆಯ ವಾತಾವರಣ ಕಲ್ಪಿಸಬೇಕು ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.

ಸಿಡೇದಹಳ್ಳಿಯ ಸರ್ಕಾರಿ ಶಾಲೆಗೆ ಎರಡು ಕೊಠಡಿ, ಚಿಕ್ಕ ಬಾಣಾವರ ಸರ್ಕಾರಿ ಉರ್ದು ಶಾಲೆಗೆ ಎರಡು ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ಅಬ್ಬಿಗೆರೆಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಾಲ್ಕು ಶೌಚಾಲಯ ಕೊಠಡಿ ಉದ್ಘಾಟಿಸಿ ಮಾತನಾಡಿದರು.
‘ಕ್ಷೇತ್ರದ ಹಲವು ಪ್ರದೇಶದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇದ್ದ ಕಾರಣ ಕೊಠಡಿಗಳ ಕೊರತೆ ಇತ್ತು. ಅಂತಹ ಶಾಲೆಗಳಲ್ಲಿ ಕೊಠಡಿಗಳ ನಿರ್ಮಾಣ ಕಾರ್ಯ ನಡೆಯಲಿದೆ’ ಎಂದರು.

ರೀಚಿಂಗ್ ಹ್ಯಾಂಡ್ಸ್ ಎಂಬ ಎನ್ಜಿಓ ಸಂಸ್ಥೆಯವರು ಅಬ್ಬಿಗೆರೆ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ 4 ಶೌಚ ಗೃಹ ನಿರ್ಮಿಸಿದ್ದರು. ಈಗ ವಿದ್ಯಾರ್ಥಿಗಳಿಗೆ ಮತ್ತೆ ನಾಲ್ಕು ಶೌಚ ಗೃಹಗಳನ್ನು ನಿರ್ಮಿಸಿದ್ದಾರೆ. ಇಂತಹ ಧಾನಿಗಳು ಮುಂದೆ ಬಂದು ಸರ್ಕಾರಿ ಶಾಲೆಗಳ ಏಳಿಗೆಗೆ ಕೊಡುಗೆ ನೀಡಬೇಕು’ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎನ್ಜಿಓ ಸಂಸ್ಥೆಯ ಮುಖ್ಯಸ್ಥ ಅಬ್ರಾಹಂ, ಚಿಕ್ಕಬಾಣಾವರ ಪುರಸಭೆ ಮುಖ್ಯ ಅಧಿಕಾರಿ ಹೆಚ್.ಎ ಕುಮಾರ್, ಬಿಜೆಪಿ ಮುಖಂಡರಾದ ಕಬೀರ್ ಅಹಮದ್, ಬಿ ಎಂ ಚಿಕ್ಕಣ್ಣ, ಭಾಗ್ಯಮ್ಮ, ಬಿ. ಲಕ್ಷ್ಮಣ್, ಅಬ್ಬಿಗೆರೆ ಮಂಜಣ್ಣ, ಜನಾರ್ಧನ್ ಮುಂತಾದವರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು