LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ: ಶಾಸಕಿ ರೂಪಕಲಾ ಶಶಿಧರ್

ಕೆಜಿಎಫ್: ಜಿಲ್ಲೆಯಲ್ಲೇ ಅತಿ ದೊಡ್ಡ ಕೆರೆಯಾದ ರಾಮಸಾಗರ ಹಾಗೂ ಬೇತಮಂಗಲ ಪಾಲಾರ್ ಕೆರೆಗಳಲ್ಲಿ ನೀರಿನ ಲಭ್ಯತೆಯಿಂದ ಸ್ಥಳೀಯ ಕೊಳವೆ ಬಾವಿಗಳಲ್ಲಿ ಉತ್ತಮ ನೀರಿದ್ದು, ಕುಡಿಯುವ ನೀರಿನ ಅಭಾವವಿಲ್ಲದೆ ಜನ ಜಾನುವಾರುಗಳಿಗೆ ಸಹಕಾರಿಯಾಗಿದೆ ಎಂದು ಶಾಸಕಿ ಎಂ ರೂಪಕಲಾ ಹೇಳಿದರು.
ಪಟ್ಟಣದ ಸಮೀಪದ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಂಪಲ್ಲಿ, ಜೆ.ಕೆ ಪುರ, ನಾಗಕುಪ್ಪ, ಶ್ರೀನಿವಾಸಸಂದ್ರ, ಮೇಲುಪಲ್ಲಿ ಗ್ರಾಮಗಳಲ್ಲಿ ತಲಾ 12 ಲಕ್ಷ ರೂ., ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಯುಗಾದಿ ಹಬ್ಬದೊಳಗೆ ಈ ಗ್ರಾಪಂನಲ್ಲಿ ಪ್ರವಾಸ ಕೈಗೊಂಡು ಸ್ಥಳೀಯ ಸಮಸ್ಯೆ ಮತ್ತು ಅಭಿವೃದ್ಧಿಯ ಬಗ್ಗೆ ಸಭೆ ನಡೆಸಲು ತಿರ್ಮಾಣಿಸಲಾಗಿತ್ತು, ಆದರೆ ಸದನವಿದ್ದ ಕಾರಣ ಸಾಧ್ಯವಾಗಿರಲಿಲ್ಲ ಆದರೆ ಇಂದು 5 ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಲೋಕಾರ್ಪಣೆಗೊಳಿಸಿದ್ದು, ಈ ಭಾಗದ ಜನರು ಉತ್ತಮ ನೀರು ಕುಡಿದು ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು.ಬೇಸಿಗೆ ಎದುರಿಸಲು ಸಿದ್ಧ: ಯುಗಾದಿ ಹಬ್ಬ ಮುಗಿಯುತ್ತಿದ್ದಂತೆ ಬೇಸಿಗೆ ಮತ್ತಷ್ಟು ಬಿಗಡಾಯಿಸಿದೆ, ಆದ್ದರಿಂದ ಆಯಾ ವ್ಯಾಪ್ತಿಯ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದು, ಜಿಲ್ಲಾಡಳಿತದಿಂದಲೂ ಬೇಸಿಗೆ ಎದುರಿಸಲು ಅನುದಾನ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾಮದ ಅಂಗನವಾಡಿ, ಶಾಲಾ ಆವರಣ, ಮತ್ತು ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿ ಜಾಗವಿಲ್ಲದ ಪರಿಣಾಮ ಸುಮಾ ನಾರಾಯಣಪ್ಪ ಅವರು ಉಚಿತವಾಗಿ ಸ್ಥಳ ದಾನವಾಗಿ ನೀಡಿದ್ದು, ಅವರನ್ನು ಸನ್ಮಾನಿಸಿ ದಾನಿಗಳ ಹೆಸರನ್ನು ನಾಮಫಲಕಗಳಲ್ಲಿ ಅಳವಡಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೆಜಿಎಫ್ ತಾಲೂಕಿನ ಎಲ್ಲಾ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಗುತ್ತದೆ ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲಾಗಿದೆ ಎಂದರು.ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಮಾತನಾಡಿ, ಕೆಜಿಎಫ್ ಕ್ಷೇತ್ರದ ಶಾಸಕಿ ಎಂ ರೂಪಕಲಾ ಅವರು ಲಂಚ ರಹಿತ ಶಾಸಕರಾಗಿದ್ದಾರೆ. ಯಾವುದೇ ಅಧಿಕಾರಿಗಳಿಂದಾಗಲೀ ಗುತ್ತಿಗೆದಾರರಿಂದ ನಯಾ ಪೈಸೆ ಲಂಚ ಪಡೆಯದೇ ಕೇವಲ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಮೂಲಮಂತ್ರ ಎಂದು ಶ್ರಮಿಸುತ್ತಿದ್ದಾರೆ ಎಂದು ಶಾಸಕರ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದರು.ಅಭಿವೃದ್ಧಿಯಲ್ಲಿ ರಾಜೀ ಇಲ್ಲ: ಇದುವರೆಗೂ ಯಾರೂ ಮಾಡದಂತ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದಾರೆ. ಕೆಜಿಎಫ್ ನಲ್ಲಿ ಕೈಗಾರಿಕಾ ಹಬ್ ಆರಂಭಿಸಿ ಕ್ಷೇತ್ರದಲ್ಲೇ ಲಕ್ಷಾ÷್ಯಂತರ ಮಂದಿ ಉದ್ಯೋಗ ಮಾಡಲು ಕೈಗಾರಿಕೆಗಳು ಆರಂಭಿಸಲಿದ್ದಾರೆ. ಇತ್ತೀಚಿಗೆ ಪೋಲೀಸ್ ತರಬೇತಿ ಕೇಂದ್ರ (ಬ್ಯಾಟಾಲಿಯನ್ ) ಅನ್ನು ಆರಂಭಿಸಿದ್ದು ವರ್ಷಕ್ಕೆ ಒಂದು ಸಾವಿರ ಮಂದಿಗೆ ತರಬೇತಿ ನೀಡುವ ಕಾರ್ಯಕ್ರಮಕ್ಕೆ ಗೃಹ ಸಚಿವರು ಚಾಲನೆ ನೀಡಿದ್ದಾರೆ.ನಗರ ಹಾಗೂ ಗ್ರಾಮೀಣ ಪ್ರದೇಶದ ಪ್ರತಿಯೊಂದು ಹಳ್ಳಿಯಲ್ಲೂ ಗುಣಮಟ್ಟದ ಡಾಂಬರೀಕರಣ ರಸ್ತೆ ಕಾಮಗಾರಿಗೆ ನಡೆದಿದೆ. ರೂಪಕಲಾ ಅವರು ಸಚಿವರ ಮಗಳಾಗಿದ್ದರೂ ಯಾವುದೇ ಅಹಂ ಇಲ್ಲದೆ ಸಾಮಾನ್ಯ ಮಹಿಳೆಯಂದೆ ಅವಿರತವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.ಹೀಗೆ ನೂರಾರು ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕರು ಮಾಡುತ್ತಿದ್ದು, ಪುನಃ ಇತಂಹ ಶಾಸಕರನ್ನು ನಾವು ಪಡೆಯಬೇಕೆಂದು ನೆರೆದಿದ್ದ ನೂರಾರು ಮುಖಂಡರು ಮಹಿಳೆಯರಿಗೆ ಕಿವಿ ಮಾತು ಹೇಳಿದರು.ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸ್ಕೂಲ್ ವೆಂಕಟೇಶಪ್ಪ ಮಾತನಾಡಿ, ಅಭಿವೃದ್ಧಿಯ ಹರಿಕಾರರಾದ ರೂಪಕಲಾ ಅವರು ರಾಜ್ಯದಲ್ಲಿ ಸಚಿವರಾಗಿ ಕೆಜಿಎಫ್ ಕ್ಷೇತ್ರವಲ್ಲದೆ ಇಡೀ ರಾಜ್ಯಕ್ಕೆ ತಮ್ಮ ಕೊಡುಗೆ ವಿಸ್ತರಿಸಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮಸಂದ್ರ ನಾಗರಾಜ್, ಗ್ರಾಪಂ ಮಾಜಿ ಅಧ್ಯಕ್ಷೆ ಗೀತಾಕಲಾ ವೆಂಕಟೇಶ್, ಅಯ್ಯಪಲ್ಲಿ ಮಂಜುನಾಥ್, ಮಾಜಿ ಸದಸ್ಯರಾದ ಗಜೇಂದ್ರ ರೆಡ್ಡಿ, ವಸಂತ್ ರೆಡ್ಡಿ, ಮುಖಂಡರಾದ ದೇವರಾಜ್ ರೆಡ್ಡಿ, ಸುಮಾ ನಾರಾಯಣಪ್ಪ ,ದಿಲೀಪ್ , ರಾಮಪ್ಪ, ಭಾಸ್ಕರ್ ರೆಡ್ಡಿ, ಏತೂರು ಚಂದ್ರಶೇಖರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಬು, ಎನ್ಟಿಆರ್ ಶ್ರೀನಿವಾಸ್ ರೆಡ್ಡಿ, ರಾಮಕೃಷ್ಣ ರೆಡ್ಡಿ, ವಕೀಲ ಪದ್ಮನಾಭ ರೆಡ್ಡಿ, ಬ್ಯಾಟೇಗೌಡ, ಹಾಗೂ ಅನೇಕ ಮುಖಂಡರು, ಯುವಕರು, ಮಹಿಳೆಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು