LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಎನ್‍ಡಿಎ ಮತ್ತೆ ಅಧಿಕಾರಕ್ಕೆ ಬರಲ್ಲ: ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಇದು ಜನ ವಿರೋಧಿ ಸರ್ಕಾರ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದರು.

ಅವರು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಚುನಾವಣಾಪೂರ್ವ ಸಮೀಕ್ಷೆಗಳು ಸಹ ಎನ್.ಡಿ.ಎ ಸರ್ಕಾರಕ್ಕೆ ಈ ಬಾರಿ ಅಧಿಕಾರಕ್ಕೆ ಬರುವ ಅವಕಾಶವಿಲ್ಲ ಎಂದು ಹೇಳಿದೆ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಕ್ಷಾ ರಾಮಯ್ಯ ರವರನ್ನು ಈ ಕ್ಷೇತ್ರದ ಜನತೆ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಕೊರೋನಾ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ ಅವ್ಯವಹಾರ ನಡೆಸಿದ್ದು ಇವರ ಅವ್ಯವಹಾರಗಳ ತನಿಖೆಗೆ ಸಮಿತಿಯೊಂದನ್ನು ರಚಿಸಲಾಗಿದೆ ಈ ಸಮಿತಿ ತನ್ನ ವರದಿಯನ್ನು ಕೊಟ್ಟ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಆಗ ಇವರು ಜೈಲು ಸೇರುತ್ತಾರೆ ಎಂದರು.ಕೇಂದ್ರ ಸರ್ಕಾರ ಬಹು ಮುಖ್ಯವಾದ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಲಿಲ್ಲ ಆದರೆ ಸ್ವಾಮಿನಾಥನಿಗೆ ಭಾರತರತ್ನ ಪ್ರಶಸ್ತಿ ನೀಡಿದರು ಇದು ಯಾವ ನ್ಯಾಯ ಎಂದು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಉರಿ ಬಿಸಿಲಿನಲ್ಲಿ ಸಹ ಹತ್ತು ಸಾವಿರಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಇಲ್ಲಿ ಸೇರಿರುವುದನ್ನು ಗಮನಿಸಿದರೆ ಈ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನೀವೆಲ್ಲರೂ ಸೇರಿ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸುತ್ತಿರುವ ನಂಬಿಕೆ ನನಗಿದೆ ಎಂದರು.ರೋಡ್ ಶೋ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಶಾಸಕ ಪ್ರದೀಪ್ ಈಶ್ವರ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಒಳಗೊಂಡಂತೆ ಅನೇಕ ಮಂದಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಕಾನೂನು ಮತ್ತು ಸ್ವಯಾವಸ್ಥೆಗೆ ಧಕ್ಕೆ ತರದಂತೆ ವಿಜಯದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು