LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಯುವ ಪ್ರತಿಭೆ ಜೊತೆ ಕೈ ಜೋಡಿಸಿದ ನಿರೂಪ್ ಭಂಡಾರಿ ಜನವರಿಯಿಂದ ಶೂಟಿಂಗ್ ಚಾಲು

ರಂಗಿತರಂಗ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಚಿರಪರಿಚಿತರಾದ ನಿರೂಪ್ ಭಂಡಾರಿ ಆ ನಂತರ ರಾಜರಥ, ವಿಕ್ರಾಂತ್ ರೋಣ, ಆದಿ ಲಕ್ಷ್ಮಿ ಪುರಾಣ ಮತ್ತು ವಿಂಡೋ ಸೀಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಅವರು ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಕೆಲಸ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ನಿಭಾಯಿಸುತ್ತಿರುವ ಯುವ ಪ್ರತಿಭೆ ಸಚಿನ್ ವಾಲಿ ಜೊತೆ ಕೈ ಜೋಡಿಸಿದ್ದಾರೆ.

ಕೆಲವೊಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಸಚಿನ್ ವಾಲಿ ಸ್ವತಂತ್ರ ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್ ಟೈನರ್ ಕಥಾಹಂದರ ಹೇಳಲು ಸಚಿನ್ ಹೊರಟ್ಟಿದ್ದಾರೆ. ಅವರ ಚೊಚ್ಚಲ ಪ್ರಯತ್ನದಲ್ಲಿ ನಾಯಕನಾಗಿ ನಿರೂಪ್ ಭಂಡಾರಿ ಬಣ್ಣ ಹಚ್ಚಲಿದ್ದಾರೆ.

ಸ್ಕ್ರಿಪ್ಟ್ ಪೂಜೆ ಮುಗಿಸಿಕೊಂಡಿರುವ ಈ ಸಿನಿಮಾಗೆ ಅಂಕೆತ್ ಸಿನಿಮಾಸ್ ಅಡಿಯಲ್ಲಿ ಅಂಕಿತ್ ಸೋನಿಗಾರ ಚಿತ್ರ ನಿರ್ಮಿಸಿಸುತ್ತಿದ್ದು, ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ. ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಜನವರಿಯಿಂದ ಶೂಟಿಂಗ್ ಹೊರಡಲು ಸಜ್ಜಾಗಿರುವ ಚಿತ್ರತಂಡ, ಬೆಂಗಳೂರು, ಶಿವಮೊಗ್ಗ, ತೀರ್ಥಹಳ್ಳಿ, ತುಮಕೂರು ಹಾಗೂ ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು