LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ವಿಧಾನ ಪರಿಷತ್ ಚುನಾವಣೆ, ಮತದಾರರಿಗೆ ವೋಟರ್ ಸ್ಲಿಪ್ ವಿತರಣೆಗೆ ಸೂಚನೆ

ದಾವಣಗೆರೆ: ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ತ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಮತದಾರರಿಗೆ ಮತಚೀಟಿ ಹಾಗೂ ವೋಟರ್ ಗೈಡ್ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ವಿಧಾನ ಪರಿಷತ್ ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಸೂಚನೆ ನೀಡಿದರು. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಮತ್ತು ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಸೇರಲಿದ್ದು ಇಲ್ಲಿನ ಮತದಾರರಿಗೆ ವೋಟರ್ ಸ್ಲಿಪ್ ಹಾಗೂ ವೋಟರ್ ಗೈಡ್ ವಿತರಣೆ ಮಾಡಲು ಸೂಚನೆ ನೀಡಿದರು. ಮತಚೀಟಿ ವಿತರಣೆಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಡಲ್ ಅಧಿಕಾರಿಗಳಾಗಿರುತ್ತಾರೆ ಎಂದರು.

ಮತಗಟ್ಟೆವಾರು ಮತದಾರರ ವಿವರ; ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಹರಿಹರದ ಸರ್ಕಾರಿ ಪ್ರೌಢಶಾಲೆ, ಗಾಂಧಿ ನಗರ ಇಲ್ಲಿ 461, ದಾವಣಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕೊಠಡಿ ಸಂಖ್ಯೆ.1 ರಲ್ಲಿ 707, ಇಲ್ಲಿನ ಎರಡನೇ ಮತಗಟ್ಟೆ ಕೊಠಡಿ ಸಂಖ್ಯೆ 2 ರಲ್ಲಿ 708, ಕೊಠಡಿ ಸಂಖ್ಯೆ 3 ರಲ್ಲಿ 708, ಕೊಠಡಿ 4 ರಲ್ಲಿ 708, ಕೊಠಡಿ ಸಂಖ್ಯೆ 5 ರಲ್ಲಿ 708 ಹಾಗೂ ಜಗಳೂರಿನ ತಾಲ್ಲೂಕು ಕಚೇರಿಯಲ್ಲಿ 351 ಮತದಾರರು ಸೇರಿ 4351 ಮತದಾರರಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರ; ನ್ಯಾಮತಿ ತಾಲ್ಲೂಕು ಕಚೇರಿ 79, ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಾಮಥ್ರ್ಯಸೌಧ ಇಲ್ಲಿ 321, ಬಸವಾಪಟ್ಟಣ ಜನತಾ ಪ್ರೌಢಶಾಲೆ ಕೊಠಡಿ ಸಂಖ್ಯೆ 3 ರಲ್ಲಿ 246, ಚನ್ನಗಿರಿ ತಾಲ್ಲೂಕು ಪಂಚಾಯತ್ ಕೊಠಡಿ ಸಂಖ್ಯೆ 3 ರಲ್ಲಿ 322 ಮತದಾರರು ಸೇರಿ ಒಟ್ಟು 968.
ನೈರುತ್ಯ ಪದವೀಧರರ ಕ್ಷೇತ್ರ; ನ್ಯಾಮತಿ ತಾಲ್ಲೂಕು ಕಚೇರಿ ಕೊಠಡಿ ಸಂಖ್ಯೆ 2 ರಲ್ಲಿ 1012, ಹೊನ್ನಾಳಿ ತಾಲ್ಲೂಕು ಆಡಳಿತಸೌಧ ಕೊಠಡಿ 1 ರಲ್ಲಿ 751, ಇಲ್ಲಿನ ಕೊಠಡಿ 2 ರಲ್ಲಿ 729, ಕೊಠಡಿ 3 ರಲ್ಲಿ 724, ಬಸವಾಪಟ್ಟಣ ಜನತಾ ಪ್ರೌಢಶಾಲೆ ಪೂರ್ವ ವಿಭಾಗದ ಕೊಠಡಿ 1 ರಲ್ಲಿ 765, ಇಲ್ಲಿನ ಕೊಠಡಿ 2 ರಲ್ಲಿ 764, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಟ್ಟಡದ ಪೂರ್ವ ವಿಭಾಗದ ಕೊಠಡಿ 1 ರಲ್ಲಿ 907 ಹಾಗೂ ಇಲ್ಲಿನ ಕೊಠಡಿ 2 ರಲ್ಲಿ 906 ಸೇರಿ 6558 ಮತದಾರರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು