LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಏ 17ಕ್ಕೆ `ಎಲ್ರ ಕಾಲೆಳಿಯತ್ತೆ ಕಾಲ'

ಹಾಸ್ಯ ನಟ ಸುಜಯ್ ಶಾಸ್ತ್ರೀ ನಿರ್ದೇಶನದ, ಗೋಕುಲ ಎಂಟರ್ಟೆನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಖ್ಯಾತ ಗಾಯಕ - ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಪೂರ್ವದಲ್ಲಿ ಚಿತ್ರತಂಡ "ಮಾತು ಮಧುರ" ಎಂಬ ಹಾಡನ್ನು ಆನಂದ್ ಆಡಿಯೋ ಮೂಲಕ ಅನಾವರಣ ಮಾಡಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಕಾರಣಾಂತರದಿAದ ನಮ್ಮ ಚಿತ್ರ ಬಿಡುಗಡೆ ತಡವಾಗಿದೆ. ಈಗ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದೆ ಎಂದು ಮಾತನಾಡಿದ ನಿರ್ದೇಶಕ ಸುಜಯ್ ಶಾಸ್ತ್ರೀ, ಇದೊಂದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನಕಪುರದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣವಾಗಿದೆ. ಸಮಯದ ಮಹತ್ವ ಸಾರುವ ಈ ಚಿತ್ರಕ್ಕೆ ನನ್ನ ಸ್ನೇಹಿತ ರಾಜಗುರು ಹೊಸಕೋಟೆ ಕಥೆ ಬರೆದಿದ್ದಾರೆ. ಕಥೆಗೆ ಈ ಶೀರ್ಷಿಕೆ ಪೂರಕವಾಗಿದೆ. ಇದು ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಅರ್ಚನಾ ಕೊಟ್ಟಿಗೆ ಈ ಚಿತ್ರದ ನಾಯಕಿ. ದತ್ತಣ್ಣ, ತಾರಾ ಅನುರಾಧ, ಮಂಜು ಪಾವಗಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇಂದು "ಮಾತು ಮಧುರ" ಹಾಡು ಬಿಡುಗಡೆ ಮಾಡಿದ್ದೇವೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ. ಗೋವಿಂದರಾಜು ಅವರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಕೌಟುಂಬಿಕ ಕಾಮಿಡಿ ಜಾನರ್ ನ ಈ ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರಕ್ಕಾಗಿ ದೇಹದ ತೂಕ ಸಹ ಹೆಚ್ಚಿಸಿಕೊಂಡಿದ್ದೆ. ಸಮಯಕ್ಕೆ ಬೆಲೆ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಮನಮುಟ್ಟುವ ಹಾಗೆ ತೋರಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ ಎಂದು ನಾಯಕ ಚಂದನ್ ಶೆಟ್ಟಿ ಹೇಳಿದರು. ಇದು ನಮ್ಮ ಸಂಸ್ಥೆಯಿAದ ನಿರ್ಮಾಣವಾಗಿರುವ ಮೂರನೇ ಚಿತ್ರ. ಒಂದೊಳ್ಳೆ ಸಂದೇಶವಿರುವ ಚಿತ್ರವೂ ಹೌದು. ನಮ್ಮ ಚಿತ್ರವನ್ನು ಎಲ್ಲರು ಚಿತ್ರಮಂದಿರಗಳಲ್ಲೇ ನೋಡಿ ಎಂದರು ನಿರ್ಮಾಪಕ ಗೋವಿಂದರಾಜು.
ಈ ಚಿತ್ರದಲ್ಲಿ ಐದು ಹಾಡುಗಳಿದೆ. ಇಂದು ಬಿಡುಗಡೆಯಾಗಿರುವ "ಮಾತು ಮಧುರ" ಹಾಡನ್ನು ದರ್ಶನ್ ನಾರಾಯಣ್ ಹಾಗೂ ಅನುರಾಧಾ ಭಟ್ ಹಾಡಿದ್ದಾರೆ. ನಾಲ್ಕು ಹಾಡುಗಳು 90ರ ಕಾಲಘಟದ ಹಾಡುಗಳ ಹಾಗೆ ಇರುತ್ತದೆ. ಒಂದು ಪ್ರಮೋಷನ್ ಸಾಂಗ್ ಇದ್ದು, ಅದನ್ನು ಚಂದನ್ ಶೆಟ್ಟಿ ಅವರೆ ಹಾಡಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕರಾದ ಪ್ರವೀಣ್ - ಪ್ರದೀಪ್ ತಿಳಿಸಿದರು.
ವಸಂತ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಮೆಸ್ ಓನರ್ ಎಂದು ನಾಯಕಿ ಅರ್ಚನಾ ಕೊಟ್ಟಿಗೆ ಹೇಳಿದರು. ಚಿತ್ರ ಆರಂಭವಾದ ಕುರಿತು ಹಾಗೂ ಕಥೆ ಬಗ್ಗೆ ಕಥೆ ಬರೆದಿರುವ ರಾಜಗುರು ಹೊಸಕೋಟೆ ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು