LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಏ.24ಕ್ಕೆ `ಎಲ್ರ ಕಾಲೆಳಿಯತ್ತೆ ಕಾಲ'

ಸುಜಯ್ ಶಾಸ್ತ್ರೀ ನಿರ್ದೇಶನದ, ಗೋಕುಲ ಎಂಟರ್ಟೆನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಎಲ್ರ ಕಾಲೆಳಿಯತ್ತೆ ಕಾಲ". ಇತ್ತೀಚೆಗೆ ನಡೆದ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.
ಇಡೀ ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ 17 ಕ್ಕೆ ಬಿಡುಗಡೆಯಾಗಬೇಕಾಗಿದ್ದ ನಮ್ಮ ಚಿತ್ರ ಕಾರಣಾಂತರದಿAದ ಒಂದು ವಾರ ತಡವಾಗಿ ಏಪ್ರಿಲ್ 24 ರಂದು ಬಿಡುಗಡೆ ಯಾಗುತ್ತಿದೆ. ಚಿತ್ರ ಎಲ್ಲರಿಗೂ ಪ್ರಿಯವಾಗುವ ಭರವಸೆ ಇದೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರೀ ಹೇಳಿದರು.
ಈಗಾಗಲೇ ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಈಗ ಹೇಳಬೇಕಿರುವುದು ನಮ್ಮ ಚಿತ್ರ ಒಂದು ವಾರ ತಡವಾಗಿ ಅಂದರೆ, ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ನಮ್ಮೆಲ್ಲರ ಆರಾಧ್ಯ ದೈವ ವರನಟ ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆಯಾಗುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.ಈ ಚಿತ್ರದಲ್ಲಿ ನನ್ನದು ಗಮನಾರ್ಹ ಪಾತ್ರ ಎಂದು ಮಾತನಾಡಿದ ನಟಿ ತಾರಾ ಅನುರಾಧ, ಸುಜಯ್ ಶಾಸ್ತ್ರೀ ಹಾಗೂ ರಾಜ್ ಗುರು ಹೊಸಕೋಟೆ ರಂಗಭೂಮಿಯಿAದ ಪರಿಚಿತರು. ಚಂದನ್ ಶೆಟ್ಟಿ ಹಾಗೂ ಅವರು ತಂದೆ - ತಾಯಿ ಕೂಡ ಪರಿಚಯ. ಇನ್ನೂ, ಅರ್ಚನಾ ಕೊಟ್ಟಿಗೆ ನಾನು ಇಷ್ಟ ಪಡುವ ನಾಯಕಿ. ಒಂದೊಳ್ಳೆ ತಂಡ ಸೇರಿ ಉತ್ತಮ ಚಿತ್ರ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ. ಇದೇ ಏಪ್ರಿಲ್ 24, ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು. ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕ ಗೋವಿಂದರಾಜು, ಚಂದನ್ ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು. ನಾಯಕಿ ಅರ್ಚನಾ ಕೊಟ್ಟಿಗೆ ಸಹ ಎಲ್ಲರಿಗೂ ಧನ್ಯವಾದ ಹೇಳಿದರು. ನಟರಾದ ರಜನಿಕಾಂತ್, ಅನಂತ ಪದ್ಮನಾಭ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿತರಣೆಯ ಬಗ್ಗೆ ಚಂದನ್ ಫಿಲಂಸ್ ನ ಕುನಾಲ್ ಮಾತನಾಡಿದರು. ನಿರ್ಮಾಪಕರ ಸ್ನೇಹಿತರಾದ ಶ್ರೀನಿವಾಸ್, ಶಂಕರ್ ಅವರು ಚಿತ್ರಕ್ಕೆ ಯಶಸ್ಸನ್ನು ಕೋರಿದರು. ಉಷಾ ಗೋವಿಂದರಾಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರವೀಣ್ - ಪ್ರದೀಪ್ ಸಂಗೀತ ನಿರ್ದೇಶನ ಹಾಗೂ ವಿಶ್ವಜಿತ್ ರಾವ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜ್ ಗುರು ಹೊಸಕೋಟೆ ಕಥೆ ಬರೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು